AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಸ್​​ನ ಈ ವಿಶ್ವವಿದ್ಯಾಲಯದಲ್ಲಿ ಒಂದೇ ವಾರದಲ್ಲಿ 2ನೇ ಬಾರಿ ಗುಂಡಿನ ದಾಳಿ; ಒಬ್ಬ ಸಾವು, ಏಳುಮಂದಿಗೆ ಗಾಯ

ಘಟನೆಯ ಬಗ್ಗೆ ಯೂನಿವರ್ಸಿಟಿ ಟ್ವೀಟ್​ ಮಾಡಿದೆ..ಈ ಸಲ ಫೈರಿಂಗ್​​ನಲ್ಲಿ ಹತ್ಯೆಯಾದ ವ್ಯಕ್ತಿ ವಿಶ್ವವಿದ್ಯಾಲಯಕ್ಕೆ ಸೇರಿದವರಲ್ಲ. ಇನ್ನು ಏಳು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಯುಎಸ್​​ನ ಈ ವಿಶ್ವವಿದ್ಯಾಲಯದಲ್ಲಿ ಒಂದೇ ವಾರದಲ್ಲಿ 2ನೇ ಬಾರಿ ಗುಂಡಿನ ದಾಳಿ; ಒಬ್ಬ ಸಾವು, ಏಳುಮಂದಿಗೆ ಗಾಯ
ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ..
TV9 Web
| Edited By: |

Updated on: Oct 18, 2021 | 1:01 PM

Share

ವಾಷಿಂಗ್ಟನ್​: ಯುಎಸ್​​ನ ಯೂನಿವರ್ಸಿಟಿ (US University Shooting) ವೊಂದರಲ್ಲಿ ಭಾನುವಾರ ಬೆಳಗ್ಗೆ ಗುಂಡಿನ ದಾಳಿಯಾಗಿದ್ದು, ಈ ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ದಾನೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲಿಸರು ತಿಳಿಸಿದ್ದಾರೆ. ಈ ಗುಂಡಿನ ದಾಳಿ ನಡೆದಿದ್ದು ಲೂಯಿಸಿಯಾನ ರಾಜ್ಯದ ಗ್ರಾಂಬ್ಲಿಂಗ್​ ಸ್ಟೇಟ್​ ವಿಶ್ವವಿದ್ಯಾಲಯದಲ್ಲಿ (Grambling State University). ಇದು ಈ ವಾರದಲ್ಲಿ ನಡೆಯುತ್ತಿರುವ ಎರಡನೇ ದಾಳಿಯಾಗಿದೆ. ಅಕ್ಟೋಬರ್​ 13ರಂದು ಇದೇ  ವಿಶ್ವವಿದ್ಯಾಲಯದಲ್ಲಿ ದುಷ್ಕರ್ಮಿಗಳು ಫೈರಿಂಗ್​ ನಡೆಸಿದ್ದರು. ಅದರಲ್ಲಿ 19ವರ್ಷದ ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದರೆ, 16 ವರ್ಷದ ವಿದ್ಯಾರ್ಥಿ ತೀವ್ರ ಗಾಯಗೊಂಡಿದ್ದರು. 

ಘಟನೆಯ ಬಗ್ಗೆ ಯೂನಿವರ್ಸಿಟಿ ಟ್ವೀಟ್​ ಮಾಡಿದೆ..ಈ ಸಲ ಫೈರಿಂಗ್​​ನಲ್ಲಿ ಹತ್ಯೆಯಾದ ವ್ಯಕ್ತಿ ವಿಶ್ವವಿದ್ಯಾಲಯಕ್ಕೆ ಸೇರಿದವರಲ್ಲ. ಇನ್ನು ಏಳು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದು ಮಾರಣಾಂತಿಕವಲ್ಲದ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ.   ಹಾಗೇ, ವಿದ್ಯಾರ್ಥಿಗಳು ಘಟನೆಗಳ ಬಗ್ಗೆ ತಪ್ಪು ಮಾಹಿತಿಗಳನ್ನು ಹಬ್ಬಿಸಬಾರದು ಎಂದು ಮನವಿ ಮಾಡಿದೆ. ಇನ್ನು ಈ ಯೂನಿವರ್ಸಿಟಿಯಲ್ಲಿ ಒಂದೇ ವಾರದಲ್ಲಿ ಎರಡು ಗುಂಡಿನ ದಾಳಿ ನಡೆದಿದ್ದರೂ, ಒಂದಕ್ಕೊಂದು ಸಂಬಂಧವಿರುವ ಬಗ್ಗೆ ಸರಿಯಾದ ಸ್ಪಷ್ಟನೆ ಸಿಕ್ಕಿಲ್ಲ ಎಂದೂ ಹೇಳಲಾಗಿದೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಗುಂಡಿನ ದಾಳಿಯ ಬೆನ್ನಲ್ಲೇ ಇಲ್ಲಿ ನಡೆಯಬೇಕಿದ್ದ ವಾರ್ಷಿಕ ಫೂಟ್​ಬಾಲ್​ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಹಾಗೇ,  ಇಂದು ಮತ್ತು ನಾಳೆ ಯಾವ ತರಗತಿಗೂ ನಡೆಯುತ್ತಿಲ್ಲ. ಸದ್ಯಕ್ಕೆ ಕರ್ಫ್ಯೂ ಘೋಷಣೆಯಾಗಿದೆ.  ಘಟನೆಗೆ ಸಂಬಂಧಪಟ್ಟಂತೆ ಯಾರಿಗೇ ಏನೇ ಸಣ್ಣ ಮಾಹಿತಿ ಗೊತ್ತಿದ್ದರೂ ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಅವರು ಫೇಸ್​​ಬುಕ್​ನಲ್ಲಿ ಕೂಡ ಈ ಫೈರಿಂಗ್​ ಬಗ್ಗೆ ಪೋಸ್ಟ್​ ಹಾಕಿಕೊಂಡಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕನ ಹತ್ಯೆ; ಮನೆ ಎದುರು ನಿಂತಿದ್ದ ಮುಖಂಡನಿಗೆ ಗುಂಡು ಹಾರಿಸಿದ ದುಷ್ಕರ್ಮಿಗಳು

ಸಿದ್ದರಾಮಯ್ಯ ಮುಸ್ಲಿಂ ನಾಯಕರನ್ನು ಮುಗಿಸುತ್ತಾ ಬಂದಿದ್ದಾರೆ; ನಾಳೆ ಶಾಸಕ ಜಮೀರ್ ಅಹ್ಮದ್​​ರನ್ನೂ ಮುಗಿಸ್ತಾರೆ: ಟಿ.ಎ. ಶರವಣ

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು