AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಸ್​​ನ ಈ ವಿಶ್ವವಿದ್ಯಾಲಯದಲ್ಲಿ ಒಂದೇ ವಾರದಲ್ಲಿ 2ನೇ ಬಾರಿ ಗುಂಡಿನ ದಾಳಿ; ಒಬ್ಬ ಸಾವು, ಏಳುಮಂದಿಗೆ ಗಾಯ

ಘಟನೆಯ ಬಗ್ಗೆ ಯೂನಿವರ್ಸಿಟಿ ಟ್ವೀಟ್​ ಮಾಡಿದೆ..ಈ ಸಲ ಫೈರಿಂಗ್​​ನಲ್ಲಿ ಹತ್ಯೆಯಾದ ವ್ಯಕ್ತಿ ವಿಶ್ವವಿದ್ಯಾಲಯಕ್ಕೆ ಸೇರಿದವರಲ್ಲ. ಇನ್ನು ಏಳು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಯುಎಸ್​​ನ ಈ ವಿಶ್ವವಿದ್ಯಾಲಯದಲ್ಲಿ ಒಂದೇ ವಾರದಲ್ಲಿ 2ನೇ ಬಾರಿ ಗುಂಡಿನ ದಾಳಿ; ಒಬ್ಬ ಸಾವು, ಏಳುಮಂದಿಗೆ ಗಾಯ
ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ..
TV9 Web
| Edited By: |

Updated on: Oct 18, 2021 | 1:01 PM

Share

ವಾಷಿಂಗ್ಟನ್​: ಯುಎಸ್​​ನ ಯೂನಿವರ್ಸಿಟಿ (US University Shooting) ವೊಂದರಲ್ಲಿ ಭಾನುವಾರ ಬೆಳಗ್ಗೆ ಗುಂಡಿನ ದಾಳಿಯಾಗಿದ್ದು, ಈ ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ದಾನೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲಿಸರು ತಿಳಿಸಿದ್ದಾರೆ. ಈ ಗುಂಡಿನ ದಾಳಿ ನಡೆದಿದ್ದು ಲೂಯಿಸಿಯಾನ ರಾಜ್ಯದ ಗ್ರಾಂಬ್ಲಿಂಗ್​ ಸ್ಟೇಟ್​ ವಿಶ್ವವಿದ್ಯಾಲಯದಲ್ಲಿ (Grambling State University). ಇದು ಈ ವಾರದಲ್ಲಿ ನಡೆಯುತ್ತಿರುವ ಎರಡನೇ ದಾಳಿಯಾಗಿದೆ. ಅಕ್ಟೋಬರ್​ 13ರಂದು ಇದೇ  ವಿಶ್ವವಿದ್ಯಾಲಯದಲ್ಲಿ ದುಷ್ಕರ್ಮಿಗಳು ಫೈರಿಂಗ್​ ನಡೆಸಿದ್ದರು. ಅದರಲ್ಲಿ 19ವರ್ಷದ ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದರೆ, 16 ವರ್ಷದ ವಿದ್ಯಾರ್ಥಿ ತೀವ್ರ ಗಾಯಗೊಂಡಿದ್ದರು. 

ಘಟನೆಯ ಬಗ್ಗೆ ಯೂನಿವರ್ಸಿಟಿ ಟ್ವೀಟ್​ ಮಾಡಿದೆ..ಈ ಸಲ ಫೈರಿಂಗ್​​ನಲ್ಲಿ ಹತ್ಯೆಯಾದ ವ್ಯಕ್ತಿ ವಿಶ್ವವಿದ್ಯಾಲಯಕ್ಕೆ ಸೇರಿದವರಲ್ಲ. ಇನ್ನು ಏಳು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದು ಮಾರಣಾಂತಿಕವಲ್ಲದ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ.   ಹಾಗೇ, ವಿದ್ಯಾರ್ಥಿಗಳು ಘಟನೆಗಳ ಬಗ್ಗೆ ತಪ್ಪು ಮಾಹಿತಿಗಳನ್ನು ಹಬ್ಬಿಸಬಾರದು ಎಂದು ಮನವಿ ಮಾಡಿದೆ. ಇನ್ನು ಈ ಯೂನಿವರ್ಸಿಟಿಯಲ್ಲಿ ಒಂದೇ ವಾರದಲ್ಲಿ ಎರಡು ಗುಂಡಿನ ದಾಳಿ ನಡೆದಿದ್ದರೂ, ಒಂದಕ್ಕೊಂದು ಸಂಬಂಧವಿರುವ ಬಗ್ಗೆ ಸರಿಯಾದ ಸ್ಪಷ್ಟನೆ ಸಿಕ್ಕಿಲ್ಲ ಎಂದೂ ಹೇಳಲಾಗಿದೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಗುಂಡಿನ ದಾಳಿಯ ಬೆನ್ನಲ್ಲೇ ಇಲ್ಲಿ ನಡೆಯಬೇಕಿದ್ದ ವಾರ್ಷಿಕ ಫೂಟ್​ಬಾಲ್​ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಹಾಗೇ,  ಇಂದು ಮತ್ತು ನಾಳೆ ಯಾವ ತರಗತಿಗೂ ನಡೆಯುತ್ತಿಲ್ಲ. ಸದ್ಯಕ್ಕೆ ಕರ್ಫ್ಯೂ ಘೋಷಣೆಯಾಗಿದೆ.  ಘಟನೆಗೆ ಸಂಬಂಧಪಟ್ಟಂತೆ ಯಾರಿಗೇ ಏನೇ ಸಣ್ಣ ಮಾಹಿತಿ ಗೊತ್ತಿದ್ದರೂ ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಅವರು ಫೇಸ್​​ಬುಕ್​ನಲ್ಲಿ ಕೂಡ ಈ ಫೈರಿಂಗ್​ ಬಗ್ಗೆ ಪೋಸ್ಟ್​ ಹಾಕಿಕೊಂಡಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕನ ಹತ್ಯೆ; ಮನೆ ಎದುರು ನಿಂತಿದ್ದ ಮುಖಂಡನಿಗೆ ಗುಂಡು ಹಾರಿಸಿದ ದುಷ್ಕರ್ಮಿಗಳು

ಸಿದ್ದರಾಮಯ್ಯ ಮುಸ್ಲಿಂ ನಾಯಕರನ್ನು ಮುಗಿಸುತ್ತಾ ಬಂದಿದ್ದಾರೆ; ನಾಳೆ ಶಾಸಕ ಜಮೀರ್ ಅಹ್ಮದ್​​ರನ್ನೂ ಮುಗಿಸ್ತಾರೆ: ಟಿ.ಎ. ಶರವಣ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ