AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಡ್ರೆಸ್, ಕೈಯಲ್ಲಿ ಜಪಮಾಲೆ; ತೆರೆದ ಶವಪೆಟ್ಟಿಗೆಯಲ್ಲಿ ಮಲಗಿದ ಪೋಪ್ ಫ್ರಾನ್ಸಿಸ್ ಮೊದಲ ಫೋಟೋ ಇಲ್ಲಿದೆ

ನಿನ್ನೆ ಇಹಲೋಕ ತ್ಯಜಿಸಿದ ಪೋಪ್ ಫ್ರಾನ್ಸಿಸ್ ಅವರ ಸಾವಿನ ನಂತರ ಮೊದಲ ಫೋಟೋಗಳನ್ನು ವ್ಯಾಟಿಕನ್ ಬಿಡುಗಡೆ ಮಾಡಿದೆ. ಅವರ ಶವಪೆಟ್ಟಿಗೆಯ ಎದುರು ವ್ಯಾಟಿಕನ್ ಸಿಟಿ ವಿದೇಶಾಂಗ ಕಾರ್ಯದರ್ಶಿ ಪ್ರಾರ್ಥಿಸುತ್ತಿರುವುದನ್ನು ನೋಡಬಹುದು. ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ವ್ಯಾಟಿಕನ್ ನಗರದ ಸೇಂಟ್ ಪೀಟರ್ಸ್ ಬೆಸಿಲಿಕಾದಲ್ಲಿ ನಡೆಯಲಿದೆ. ಪೋಪ್ ಫ್ರಾನ್ಸಿಸ್ ಅವರ ಸಾರ್ವಜನಿಕ ದರ್ಶನವು ಬುಧವಾರ ಸೇಂಟ್ ಪೀಟರ್ಸ್ ಬೆಸಿಲಿಕಾದಲ್ಲಿ ಪ್ರಾರಂಭವಾಗಲಿದೆ.

ಕೆಂಪು ಡ್ರೆಸ್, ಕೈಯಲ್ಲಿ ಜಪಮಾಲೆ; ತೆರೆದ ಶವಪೆಟ್ಟಿಗೆಯಲ್ಲಿ ಮಲಗಿದ ಪೋಪ್ ಫ್ರಾನ್ಸಿಸ್ ಮೊದಲ ಫೋಟೋ ಇಲ್ಲಿದೆ
Pope Francis Funeral
Follow us
ಸುಷ್ಮಾ ಚಕ್ರೆ
|

Updated on: Apr 22, 2025 | 5:11 PM

ವ್ಯಾಟಿಕನ್ ಸಿಟಿ, ಏಪ್ರಿಲ್ 22: ನಿನ್ನೆ (ಏಪ್ರಿಲ್ 21) ನಿಧನರಾದ ಪೋಪ್ ಫ್ರಾನ್ಸಿಸ್ (Pope Francis) ಅವರ ಮೊದಲ ಫೋಟೋಗಳನ್ನು ವ್ಯಾಟಿಕನ್ ಬಿಡುಗಡೆ ಮಾಡಿದೆ. ಈ ಫೋಟೋಗಳಲ್ಲಿ ಅವರು ಮರದ ಶವಪೆಟ್ಟಿಗೆಯಲ್ಲಿ ಕೆಂಪು ವಸ್ತ್ರದೊಂದಿಗೆ, ಕೈಯಲ್ಲಿ ಜಪಮಾಲೆ ಹಿಡಿದ ಭಂಗಿಯಲ್ಲಿ ಮಲಗಿರುವುದನ್ನು ನೋಡಬಹುದು. ವ್ಯಾಟಿಕನ್ ವಿದೇಶಾಂಗ ಕಾರ್ಯದರ್ಶಿ ಪೋಪ್ ಫ್ರಾನ್ಸಿಸ್ ಅವರ ಶವ ಪೆಟ್ಟಿಗೆಯ ಎದುರು ಪ್ರಾರ್ಥಿಸುತ್ತಿರುವುದನ್ನು ನೋಡಬಹುದು. ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ 8 ಗಂಟೆಗೆ ನಡೆಯಲಿದೆ ಎಂದು ವ್ಯಾಟಿಕನ್ ತಿಳಿಸಿದೆ.

ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ವ್ಯಾಟಿಕನ್ ನಗರದ ಸೇಂಟ್ ಪೀಟರ್ಸ್ ಬೆಸಿಲಿಕಾದಲ್ಲಿ ನಡೆಯಲಿದೆ. ಪೋಪ್ ಫ್ರಾನ್ಸಿಸ್ ಅವರ ಸಾರ್ವಜನಿಕ ದರ್ಶನವು ಬುಧವಾರ ಸೇಂಟ್ ಪೀಟರ್ಸ್ ಬೆಸಿಲಿಕಾದಲ್ಲಿ ಪ್ರಾರಂಭವಾಗಲಿದೆ ಎಂದು ಕಾರ್ಡಿನಲ್‌ಗಳು ನಿರ್ಧರಿಸಿದ್ದಾರೆ. ಅವರ ಶವಪೆಟ್ಟಿಗೆಯನ್ನು ಅವರು ವಾಸಿಸುತ್ತಿದ್ದ ವ್ಯಾಟಿಕನ್ ಹೋಟೆಲ್‌ನಿಂದ ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋದ ನಂತರ ಅಂತ್ಯಕ್ರಿಯೆ ನಡೆಸಲಾಗುವುದು.

ಇದನ್ನೂ ಓದಿ: Pope Francis passes away: ಪೋಪ್ ಫ್ರಾನ್ಸಿಸ್ ನಿಧನ, ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಇನ್ನಿಲ್ಲ

ಇದನ್ನೂ ಓದಿ
Image
ಈ ಸೌದಿ ನಗರಕ್ಕೆ ಮೋದಿ ಐತಿಹಾಸಿಕ ಭೇಟಿಯ ಮಹತ್ವ
Image
ಪೋಪ್ ನಿಧನದ ನಂತರದ ಇಂಟರೆಸ್ಟಿಂಗ್ ಆಚರಣೆಗಳಿವು...
Image
ಪೋಪ್ ಫ್ರಾನ್ಸಿಸ್ ನಿಧನ: ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಇನ್ನಿಲ್ಲ
Image
ಕಾಶ್ಮೀರದ ಕುರಿತ ಪಾಕ್ ಸೇನಾ ಮುಖ್ಯಸ್ಥರ ಹೇಳಿಕೆಗೆ ಭಾರತ ತಿರುಗೇಟು

ಪೋಪ್ ಫ್ರಾನ್ಸಿಸ್ ಅವರ ಮರಣದ ನಂತರ ಮೊದಲ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಸಭೆ ಸೇರಿದ ಕಾರ್ಡಿನಲ್ಸ್ ಕಾಲೇಜಿನ ಆದೇಶದ ಮೇರೆಗೆ, ಧಾರ್ಮಿಕ ವಿಧಿವಿಧಾನಗಳ ಮುಖ್ಯಸ್ಥ ಆರ್ಚ್‌ಬಿಷಪ್ ಡಿಯಾಗೋ ರಾವೆಲ್ಲಿ ಅವರು ಮೆರವಣಿಗೆಗೆ ರೂಬ್ರಿಕ್‌ಗಳನ್ನು ಬಿಡುಗಡೆ ಮಾಡಿದ್ದಾರೆ. ಮೆರವಣಿಗೆ ಮತ್ತು ಧಾರ್ಮಿಕ ವರ್ಗಾವಣೆಯ ಅಧ್ಯಕ್ಷತೆಯನ್ನು ಕ್ಯಾಮೆರ್ಲೆಂಗೊ ಕಾರ್ಡಿನಲ್ ಕೆವಿನ್ ಫಾರೆಲ್ ವಹಿಸಲಿದ್ದಾರೆ.

Pope Francis Funeral (1)

Pope Francis Funeral

ಪೋಪ್ ಫ್ರಾನ್ಸಿಸ್ ಸೋಮವಾರ ಪಾರ್ಶ್ವವಾಯುವಿಗೆ ಒಳಗಾಗಿ ನಿಧನರಾಗಿದ್ದರು. ಅವರಿಗೆ 88 ವರ್ಷವಾಗಿತ್ತು. ಅವರನ್ನು ಮಾರ್ಚ್ 23ರಂದು ಆಸ್ಪತ್ರೆಗೆ ಸೇರಿಸಲಾಗಿತ್ತು. ಅದಾದ ಕೆಲವು ವಾರಗಳ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು.

ಇದನ್ನೂ ಓದಿ: ಪೋಪ್ ನಿಧನದ ನಂತ್ರ ಏನು? ರಿಂಗ್ ನಾಶ, ಮನೆ ಲಾಕ್ ಯಾಕೆ? ಫಿಶರ್​​ಮ್ಯಾನ್ ರಿಂಗ್​​ನ ಮಹತ್ವವೇನು?

ಫ್ರಾನ್ಸಿಸ್ ತಮ್ಮ ಪೋಪ್ ಹುದ್ದೆಯ ಅವಧಿಯಲ್ಲಿ 45ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪ್ರವಾಸಗಳನ್ನು ಮಾಡಿದರು. ಇದರಲ್ಲಿ ಯಾವುದೇ ಪೋಪ್ ಇರಾಕ್, ಯುನೈಟೆಡ್ ಅರಬ್ ಎಮಿರೇಟ್ಸ್, ಮ್ಯಾನ್ಮಾರ್, ಉತ್ತರ ಮ್ಯಾಸಿಡೋನಿಯಾ, ಬಹ್ರೇನ್ ಮತ್ತು ಮಂಗೋಲಿಯಾಕ್ಕೆ ಮಾಡಿದ ಮೊದಲ ಪ್ರವಾಸವೂ ಸೇರಿದೆ. ಫ್ರಾನ್ಸಿಸ್ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಏಪ್ರಿಲ್ 20ರಂದು ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಅಲ್ಲಿ ಸೇರಿದ್ದವರಿಗೆ ಕೈ ಬೀಸುತ್ತಾ ವೀಲ್​ಚೇರಿನಲ್ಲೇ ಸಾಗಿದ ಅವರು ಜನರನ್ನು ಉದ್ದೇಶಿಸಿ ಮಾತನಾಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್