AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ಕಚೇರಿಯನ್ನು ಮುನ್ನಡೆಸಲಿರುವ ಮೊದಲ ಮಹಿಳಾ ಉಪರಾಯಭಾರಿ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತ ರಾಯಭಾರಿ ಕಚೇರಿಗೆ ಭಾರತದ ನೂತನ ಚಾರ್ಜ್ ಡಿ'ಅಫೇರ್ (ಉಪರಾಯಭಾರಿ)ಯಾಗಿ ಗೀತಿಕಾ ಶ್ರೀವಾಸ್ತವ ಅವರು ನೇಮಕಾಗೊಂಡಿದ್ದಾರೆ. ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆಯಾಗಿದ್ದಾರೆ.

ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ಕಚೇರಿಯನ್ನು ಮುನ್ನಡೆಸಲಿರುವ ಮೊದಲ ಮಹಿಳಾ ಉಪರಾಯಭಾರಿ
ಗೀತಿಕಾ ಶ್ರೀವಾಸ್ತವ
ಅಕ್ಷಯ್​ ಪಲ್ಲಮಜಲು​​
|

Updated on: Aug 29, 2023 | 12:45 PM

Share

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತದ ರಾಯಭಾರಿ (Indian Embassy) ಕಚೇರಿಗೆ ಭಾರತದ ನೂತನ ಚಾರ್ಜ್ ಡಿ’ಅಫೇರ್ (ಉಪರಾಯಭಾರಿ)ಯಾಗಿ ಗೀತಿಕಾ ಶ್ರೀವಾಸ್ತವ (Geetika Srivastava) ಅವರು ನೇಮಕಾಗೊಂಡಿದ್ದಾರೆ. ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆಯಾಗಿದ್ದಾರೆ. ಪ್ರಸ್ತುತ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ (MEA) ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ ಎಂ ಸುರೇಶ್ ಕುಮಾರ್ ಅವರು ನವದೆಹಲಿಗೆ ವರ್ಗಾವಣೆಗೊಂಡಿದ್ದು, ಅವರ ಉತ್ತರಾಧಿಕಾರಿಯಾಗಿ ಗೀತಿಕಾ ಶ್ರೀವಾಸ್ತವ ಅವರನ್ನು ನೇಮಕ ಮಾಡಲಾಗಿದೆ.

ಈ ಉಪರಾಯಭಾರಿಯು, ರಾಯಭಾರಿ ಅಥವಾ ಹೈ ಕಮಿಷನರ್ ಅನುಪಸ್ಥಿತಿಯ ಸಂದರ್ಭದಲ್ಲಿ ತಾತ್ಕಾಲಿಕವಾಗಿ ವಿದೇಶದಲ್ಲಿ ರಾಜತಾಂತ್ರಿಕ ಕಾರ್ಯಾಚರಣೆಯನ್ನು ರಾಜತಾಂತ್ರಿಕರಾಗಿ  ನಿರ್ವಹಿಸುವುದು ಇವರ ಕೆಲಸವಾಗಿರುತ್ತದೆ. ಇನ್ನು ಕಾಮನ್‌ವೆಲ್ತ್ ದೇಶಗಳ ನಡುವಿನ ರಾಜತಾಂತ್ರಿಕ ಕಾರ್ಯಾಚರಣೆಗಳನ್ನು ಹೈ ಕಮಿಷನ್‌ಗಳು ಎಂದು ಕರೆಯಲಾಗುತ್ತದೆ, ಆದರೆ ಕಾಮನ್‌ವೆಲ್ತ್ ಅಲ್ಲದ ದೇಶಗಳ ನಡುವಿನ ರಾಜತಾಂತ್ರಿಕ ಕಾರ್ಯಗಳನ್ನು ರಾಯಭಾರ ಕಚೇರಿಗಳು ಎಂದು ಕರೆಯಲಾಗುತ್ತದೆ.

ಇಸ್ಲಾಮಾಬಾದ್ ಮತ್ತು ನವದೆಹಲಿಯಲ್ಲಿರುವ ಭಾರತ- ಪಾಕಿಸ್ತಾನಿ ರಾಯಭಾರಿ ಕಚೇರಿಯಲ್ಲಿ ಆಗಸ್ಟ್ 2019ರಿಂದ ಯಾವ ರಾಯಭಾರಿ ಅಧಿಕಾರಿಗಳು ಇಲ್ಲ. ಈ ಎರಡು ರಾಯಭಾರಿ ಕಚೇರಿಗಳು ಚಾರ್ಜ್ ಡಿ’ಅಫೇರ್‌ಗಳ ನೇತೃತ್ವದಲ್ಲಿ ನಡೆಯುತ್ತಿದೆ. ಭಾರತ ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಪಾಕಿಸ್ತಾನವು ಹೈ ಕಮಿಷನ್‌ನ ಸ್ಥಾನಮಾನವನ್ನು ತೆಗೆದು ಹಾಕಿದೆ. ಭಾರತವು ಕೂಡ ಇಸ್ಲಾಮಾಬಾದ್​​ನಲ್ಲಿರುವ ತನ್ನ ರಾಯಭಾರಿ ಅಧಿಕಾರಿಯನ್ನು ವಾಪಸ್ಸು ಕರೆಸಿಕೊಂಡಿದೆ. 1947ರಿಂದ ಭಾರತ -ಪಾಕಿಸ್ತಾನ ರಾಯಭಾರಿಯಾಗಿ ದಿವಂಗತ ಪ್ರಕಾಶ್ ಅವರು ಅಧಿಕಾರ ವಹಿಸಿಕೊಂಡಾಗಿನಿಂದ, 2019ರವರೆಗೆ (ಅಂದರೆ 370ನೇ ವಿಧಿಯನ್ನು ರದ್ದು ಆಗುವವರೆಗೆ) 22 ರಾಯಭಾರಿಗಳು ಸೇವೆ ಸಲ್ಲಿಸಿದ್ದಾರೆ. ಇನ್ನು  ಗೀತಿಕಾ ಶ್ರೀವಾಸ್ತವ ಅವರು 2005ರಲ್ಲಿ ಭಾರತೀಯ ವಿದೇಶಾಂಗ ಸೇವೆ (IFS) ಸಲ್ಲಿಸಿದ್ದರು. ಇದೀಗ ಈ ಹುದ್ದೆಯನ್ನು ಅಲಂಕಾರಿಸಿರುವ ಮೊದಲ ಮಹಿಳೆಯಾಗಲಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ಖಲಿಸ್ತಾನಿಗಳ ದಾಳಿ, ಕಚೇರಿ ಧ್ವಂಸ

ಇವರು  2007 ರಿಂದ 2009 ರವರೆಗೆ ಚೀನಾದಲ್ಲಿನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಸೇವೆ ಸಲ್ಲಿಸಿ, ನಂತರ ಕೋಲ್ಕತ್ತಾದ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯಲ್ಲಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಹಿಂದೂ ಮಹಾಸಾಗರ ಪ್ರದೇಶದ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದರು.

ಭಾರತದ ಮಹಿಳಾ ರಾಜತಾಂತ್ರಿಕರು ಈ ಹಿಂದೆ ಪಾಕಿಸ್ತಾನದಲ್ಲಿ ಸೇವೆ ಸಲ್ಲಿಸಿದ್ದಾರೆ ಆದರೆ ಇಂತಹ ಉನ್ನತ ಹುದ್ದೆಗಳಿಗೆ ನೇಮಕಾಗೊಂಡಿರಲಿಲ್ಲ. ಪಾಕಿಸ್ತಾನದಲ್ಲಿ ಹೈ ಕಮಿಷನರ್‌ನ ಪಾತ್ರವು ದೊಡ್ಡ ಜವಾಬ್ದಾರಿಯಾಗಿದೆ. ಅಂತರಾಷ್ಟ್ರೀಯ ರಾಜತಾಂತ್ರಿಕತೆ ಕಾರ್ಯನಿರ್ವಹಕರಾಗಿ ಮತ್ತು ಅಲ್ಲಿನ ಕಠಿಣ ಸಂದರ್ಭಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ವಿಶೇಷವಾಗಿ 1947ರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಹಲವು ವಿವಾದಗಳನ್ನು ನಿರ್ವಹಿಸುವುದು ಇವರ ಮುಖ್ಯ ಕಾರ್ಯವಾಗಿರುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!