AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೇಷ್ಯಾದಲ್ಲಿ ಸಿಂಕ್​ಹೋಲ್​ಗೆ ಬಿದ್ದ ಆಂಧ್ರದ ಮಹಿಳೆ, ಐದು ದಿನಗಳಿಂದ ನಡೆಯುತ್ತಿದೆ ಶೋಧ

ಆಂಧ್ರದ ಮಹಿಳೆಯೊಬ್ಬರು ಮಲೇಷ್ಯಾದಲ್ಲಿ ಸಿಂಕ್​ಹೋಲ್​ಗೆ ಬಿದ್ದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಕಳೆದ ಐದು ದಿನಗಳಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಹಿಳಾ ಪ್ರವಾಸಿಗರೊಬ್ಬರು ಆಗಸ್ಟ್​ 23ರಂದು ಪಾದಚಾರಿ ಮಾರ್ಗದಲ್ಲಿ ನಡೆಯುತ್ತಿರುವಾಗ ಆಯತಪ್ಪಿ ಸಿಂಕ್​ಹೋಲ್ ಮೇಲೆ ಕಾಲಿಟ್ಟಿದ್ದು, ತಕ್ಷಣವೇ ಒಳಗೆ ಬಿದ್ದಿದ್ದಾರೆ. ನೀರಿನ ರಭಸ ಹೆಚ್ಚಿದ್ದರಿಂದ ಕೊಚ್ಚಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮಲೇಷ್ಯಾದಲ್ಲಿ ಸಿಂಕ್​ಹೋಲ್​ಗೆ ಬಿದ್ದ ಆಂಧ್ರದ ಮಹಿಳೆ, ಐದು ದಿನಗಳಿಂದ ನಡೆಯುತ್ತಿದೆ ಶೋಧ
ಮಲೇಷ್ಯಾ ಸಿಂಕ್ ಹೋಲ್
ನಯನಾ ರಾಜೀವ್
|

Updated on: Aug 28, 2024 | 3:00 PM

Share

ಆಂಧ್ರಪ್ರದೇಶದ ಮಹಿಳೆಯೊಬ್ಬರು ಮಲೇಷ್ಯಾದ ಕೌಲಾಲಂಪುರದಲ್ಲಿ ಸಿಂಕ್​ಹೋಲ್​ಗೆ ಬಿದ್ದಿರುವ ಘಟನೆ ನಡೆದಿದೆ. ಕಳೆದ ಐದು ದಿನಗಳಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಹಿಳಾ ಪ್ರವಾಸಿಗರೊಬ್ಬರು ಆಗಸ್ಟ್​ 23ರಂದು ಪಾದಚಾರಿ ಮಾರ್ಗದಲ್ಲಿ ನಡೆಯುತ್ತಿರುವಾಗ ಆಯತಪ್ಪಿ ಸಿಂಕ್​ಹೋಲ್ ಮೇಲೆ ಕಾಲಿಟ್ಟಿದ್ದು, ತಕ್ಷಣವೇ ಒಳಗೆ ಬಿದ್ದಿದ್ದಾರೆ. ನೀರಿನ ರಭಸ ಹೆಚ್ಚಿದ್ದರಿಂದ ಕೊಚ್ಚಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ಎಕ್ಸ್​​ಪೋಸ್ಟ್​ನಲ್ಲಿ ನೀಡಿರುವ ಮಾಹಿತಿ ಪ್ರಕಾರ, ಭಾರತೀಯ ರಾಯಭಾರ ಕಚೇರಿಯು ಹುಡುಕಾಟ ನಡೆಸುತ್ತಿದೆ. ಹೋಗಿರುವ ಸಂಭಾವ್ಯ ಮಾರ್ಗಗಳ ಕುರಿತು ಅವಲೋಕಿಸುತ್ತಿವೆ. ಪೊಲೀಸ್, ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ, ಇಂದಾ ವಾಟರ್ ಕನ್ಸೋರ್ಟಿಯಂ, ಕೌಲಾಲಂಪುರ್ ಫೆಡರಲ್ ಟೆರಿಟರಿ ಸಂಸ್ಥೆಗಳು ಮತ್ತು ನಾಗರಿಕ ರಕ್ಷಣಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅದು ಹೇಳಿದೆ. ಮಹಿಳೆಯನ್ನು ವಿಜಯ ಲಕ್ಷ್ಮಿ ಗಾಲಿ ಎಂದು ಗುರುತಿಸಲಾಗಿದೆ.

ಶೋಧ ಕಾರ್ಯಾಚರಣೆ ಐದನೇ ದಿನಕ್ಕೆ ಕಾಲಿಟ್ಟಿದ್ದು ಹುಡುಕಾಟದ ಪ್ರಯತ್ನಗಳಲ್ಲಿ ತೊಡಗಿರುವ ಸಂಬಂಧಿತ ಏಜೆನ್ಸಿಗಳೊಂದಿಗೆ @hcikl ನಿಕಟ ಸಂಪರ್ಕದಲ್ಲಿದೆ. ಡ್ಯಾಂಗ್ ವಾಂಗಿ ಪ್ರದೇಶದಲ್ಲಿ ಮಹಿಳೆ ಬಿದ್ದ ಸಿಂಕ್‌ಹೋಲ್ 8 ಮೀಟರ್ ಆಳವಾಗಿತ್ತು. ಮಹಿಳೆ ಎರಡು ತಿಂಗಳ ಹಿಂದೆ ವಿಹಾರಕ್ಕೆಂದು ತನ್ನ ಪತಿ ಮತ್ತು ಹಲವಾರು ಸ್ನೇಹಿತರೊಂದಿಗೆ ಮಲೇಷ್ಯಾಕ್ಕೆ ಬಂದಿದ್ದಳು ಮತ್ತು ಅವರು ಶನಿವಾರ ಮನೆಗೆ ಮರಳಬೇಕಿತ್ತು.

ಮತ್ತಷ್ಟು ಓದಿ: ಮ್ಯಾನ್ ಹೋಲ್​ಗೆ ಬಿದ್ದ ವಿದ್ಯಾರ್ಥಿನಿ, ಅದೃಷ್ಟವಶಾತ್ ಅಪಾಯದಿಂದ ಪಾರು

ಕಳೆದ ವರ್ಷ ಸಿಂಕ್‌ಹೋಲ್ ಕಾಣಿಸಿಕೊಂಡ ಅದೇ ಸ್ಥಳದಲ್ಲಿ ಮಣ್ಣು ಕುಸಿದಿರುವುದು ವರದಿಯಾಗಿದೆ. ಆದರೆ ಅದನ್ನು ಸರಿಪಡಿಸಲಾಗಿದೆ ಎಂದು ಹೇಳಿದರು. ಸುರಕ್ಷತೆಯ ದೃಷ್ಟಿಯಿಂದ ಈ ಪ್ರದೇಶದಲ್ಲಿನ ವ್ಯಾಪಾರಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ