ಕಂದಹಾರ್​ನಲ್ಲಿ ಬಾಂಬ್ ಸ್ಫೋಟ, 5 ಮಂದಿ ಸಾವು

ಅಫ್ಘಾನಿಸ್ತಾದಲ್ಲಿ ಪಾಪಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಕಂದಹಾರ್​ನ ರಸ್ತೆ ಬದಿಯಲ್ಲಿ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡು ಐವರು ನಾಗರಿಕರು ಮೃತಪಟ್ಟಿದ್ದಾರೆ. ಯಾವುದೇ ಸಂಘಟನೆಗಳು ಇಲ್ಲಿಯವರೆಗೂ ದಾಳಿ ಹೊಣೆ ಹೊತ್ತುಕೊಂಡಿಲ್ಲ. ಆದರೆ ಇದು ತಾಲಿಬಾನಿಗಳ ಕೃತ್ಯ ಅನ್ನೋ ಅನುಮಾನಗಳು ವ್ಯಕ್ತವಾಗಿವೆ. ಜ್ವಾಲಾಮುಖಿ ಭಯ, ಊರುಬಿಟ್ಟ ಜನ: ಫಿಲಿಪೈನ್ಸ್​ನಲ್ಲಿ ಸ್ಫೋಟಗೊಂಡಿರುವ ಜ್ವಾಲಾಮುಖಿ, ದಿನದಿಂದ ದಿನಕ್ಕೆ ತೀವ್ರ ರೂಪಪಡೆಯುತ್ತಿದೆ. ಹೀಗಾಗಿ ಬೂದಿ ಸಾಕಷ್ಟು ಪ್ರಮಾಣದಲ್ಲಿ ವಾತಾವರಣ ಸೇರಿದ್ದು, ಜನರು ಪರದಾಡುವಂತಾಗಿದೆ. ಸ್ಥಳೀಯರನ್ನ ಸುರಕ್ಷಿತ ಸ್ಥಳಗಳಿಗೆ ರವಾನಿಸುವ ಕಾರ್ಯ ಭರದಿಂದ ಸಾಗಿದೆ. ಚೀನಿ ವಸ್ತುಗಳ […]

ಕಂದಹಾರ್​ನಲ್ಲಿ ಬಾಂಬ್ ಸ್ಫೋಟ, 5 ಮಂದಿ ಸಾವು
ಸಾಧು ಶ್ರೀನಾಥ್​

Updated on: Jan 17, 2020 | 7:47 AM

ಅಫ್ಘಾನಿಸ್ತಾದಲ್ಲಿ ಪಾಪಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಕಂದಹಾರ್​ನ ರಸ್ತೆ ಬದಿಯಲ್ಲಿ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡು ಐವರು ನಾಗರಿಕರು ಮೃತಪಟ್ಟಿದ್ದಾರೆ. ಯಾವುದೇ ಸಂಘಟನೆಗಳು ಇಲ್ಲಿಯವರೆಗೂ ದಾಳಿ ಹೊಣೆ ಹೊತ್ತುಕೊಂಡಿಲ್ಲ. ಆದರೆ ಇದು ತಾಲಿಬಾನಿಗಳ ಕೃತ್ಯ ಅನ್ನೋ ಅನುಮಾನಗಳು ವ್ಯಕ್ತವಾಗಿವೆ.

ಜ್ವಾಲಾಮುಖಿ ಭಯ, ಊರುಬಿಟ್ಟ ಜನ:
ಫಿಲಿಪೈನ್ಸ್​ನಲ್ಲಿ ಸ್ಫೋಟಗೊಂಡಿರುವ ಜ್ವಾಲಾಮುಖಿ, ದಿನದಿಂದ ದಿನಕ್ಕೆ ತೀವ್ರ ರೂಪಪಡೆಯುತ್ತಿದೆ. ಹೀಗಾಗಿ ಬೂದಿ ಸಾಕಷ್ಟು ಪ್ರಮಾಣದಲ್ಲಿ ವಾತಾವರಣ ಸೇರಿದ್ದು, ಜನರು ಪರದಾಡುವಂತಾಗಿದೆ. ಸ್ಥಳೀಯರನ್ನ ಸುರಕ್ಷಿತ ಸ್ಥಳಗಳಿಗೆ ರವಾನಿಸುವ ಕಾರ್ಯ ಭರದಿಂದ ಸಾಗಿದೆ.

ಚೀನಿ ವಸ್ತುಗಳ ಬೆಲೆಯಲ್ಲಿ ಇಳಿಕೆ!
ಅಮೆರಿಕ ಹಾಗೂ ಚೀನಾ ಮಧ್ಯೆ ವಾಣಿಜ್ಯ ಒಪ್ಪಂದ ಏರ್ಪಟ್ಟಿರುವ ಬೆನ್ನಲ್ಲೇ ರೈತರು ಹಾಗೂ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಮೆರಿಕದಲ್ಲಿ ಚೀನಿ ವಸ್ತುಗಳಿಗೆ ಬೃಹತ್ ಮಾರುಕಟ್ಟೆ ಇದ್ದು, ಈ ವಸ್ತುಗಳ ಬೆಲೆ ಏರಿಕೆಯ ಪರಿಣಾಮ ಜನರು ತತ್ತರಿಸಿದ್ದರು. ಆದ್ರೆ ಇದೀಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us