AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan Floods: ಇದ್ದಕ್ಕಿದ್ದಂತೆ ಸುರಿದ ಭಾರಿ ಮಳೆ, ನೀರಿನಲ್ಲಿ ಮುಳಗಿತು ಪಾಕಿಸ್ತಾನದ 50 ಹಳ್ಳಿಗಳು

ಇದ್ದಕ್ಕಿಂತೆ ಧೋ ಎಂದು ಸುರಿಯುವ ಮಳೆಯನ್ನು ಸಮರ್ಪಕವಾಗಿ ಅಂದಾಜಿಸಲು ಅಧಿಕಾರಿಗಳು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರವಾಹದಲ್ಲಿ ಸಿಲುಕಿ ಸಂಕಷ್ಟ ಅನುಭವಿಸುವವರ ಸಂಖ್ಯೆ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದೆ.

Pakistan Floods: ಇದ್ದಕ್ಕಿದ್ದಂತೆ ಸುರಿದ ಭಾರಿ ಮಳೆ, ನೀರಿನಲ್ಲಿ ಮುಳಗಿತು ಪಾಕಿಸ್ತಾನದ 50 ಹಳ್ಳಿಗಳು
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಪ್ರವಾಹ
TV9 Web
| Edited By: |

Updated on:Jul 31, 2022 | 12:53 PM

Share

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ (Balochistan) ವ್ಯಾಪಕವಾಗಿ ಮಳೆಸುರಿಯುತ್ತಿದ್ದು, ಸಿಂಧ್ (Sindh) ಪ್ರಾಂತ್ಯಕ್ಕೆ ನೀರು ನುಗ್ಗುತ್ತಿದೆ. ಗುಡ್ಡಗಾಡು ಪ್ರದೇಶದಲ್ಲಿರುವ ಹಲವು ಹಳ್ಳಿಗಳು ಹಠಾತ್ ಪ್ರವಾಹದಿಂದ (Flash Floods in Pakistan) ಮುಳುಗಿದ್ದು, 50 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದು ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ. ಬಲೂಚಿಸ್ತಾನದಲ್ಲಿ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಇದ್ದಕ್ಕಿಂತೆ ಧೋ ಎಂದು ಸುರಿಯುವ ಮಳೆಯನ್ನು ಸಮರ್ಪಕವಾಗಿ ಅಂದಾಜಿಸಲು ಅಧಿಕಾರಿಗಳು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರವಾಹದಲ್ಲಿ ಸಿಲುಕಿ ಸಂಕಷ್ಟ ಅನುಭವಿಸುವವರ ಸಂಖ್ಯೆ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದೆ.

‘ಕಚಾವ್ ಪ್ರಾಂತ್ಯದಲ್ಲಿ 50ಕ್ಕೂ ಹೆಚ್ಚು ಮತ್ತು ಸಂಪರ್ಕ ರಸ್ತೆಗಳು ಮುಳುಗಿವೆ. ಮಳೆ ನೀರಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಜೀವ ಉಳಿಸಿಕೊಳ್ಳಲು ಬೆಟ್ಟಗಳನ್ನು ಹತ್ತಿದ್ದಾರೆ. ಇಂಥವನ್ನು ಗುರುತಿಸಿ ಅಗತ್ಯ ಸೌಕರ್ಯ ಒದಗಿಸಲು ಅಧಿಕಾರಿಗಳು ಹೆಣಗಾಡುತ್ತಿದ್ದಾರೆ. ಸುಮಾರು 70 ವರ್ಷ ದಾಟಿದ ಹಿರಿಯ ಮಹಿಳೆಯೊಬ್ಬರು ವೈದ್ಯಕೀಯ ಸೇವೆ ಸಿಗದ ಕಾರಣ ಬೆಟ್ಟದ ಮೇಲೆಯೇ ಮೃತಪಟ್ಟಿದ್ದಅರೆ.

ಪ್ರಸಕ್ತ ಮುಂಗಾರು ಋತುಮಾನದಲ್ಲಿ ಬಲೂಚಿಸ್ತಾನದಲ್ಲಿ ಈ ಹಿಂದೆ ಕಂಡಕೇಳರಿಯದ ರೀತಿಯಲ್ಲಿ ಮಳೆಯಾಗಿದೆ. ಬಲೂಚಿಸ್ತಾನ ಮತ್ತು ಖೈಬರ್ ಪಖ್ತೂನ್​ಖ್ವಾ ಪ್ರಾಂತ್ಯಗಳಲ್ಲಿ ಈವರೆಗೆ 19 ಮಂದಿ ಮೃತಪಟ್ಟಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ ಎಂದು ಪಾಕಿಸ್ತಾನ ವಿಪತ್ತು ನಿರ್ವಹಣಾ ಘಟಕದ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಬಲೂಚಿಸ್ತಾನದಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಪೈಕಿ ಏಳು ಮಂದಿ ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದ್ದಾರೆ. ಖೈಬರ್ ಪಖ್ತೂನ್​ಖ್ವಾ ಪ್ರಾಂತ್ಯದಲ್ಲಿ ಮಳೆ ಆರ್ಭಟಕ್ಕೆ ಕನಿಷ್ಠ 10 ಮಂದಿ ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿದ್ದಾರೆ. ಒಂದು ದಿನದ ಅವಧಿಯಲ್ಲಿ ವಿವಿಧೆಡೆ 100ಕ್ಕೂ ಹೆಚ್ಚು ಮನೆಗಳು ಕುಸಿದಿವೆ.

ಮಳೆ ಆರ್ಭಟಕ್ಕೆ ತತ್ತರಿಸಿರುವ ಬಲೂಚಿಸ್ತಾನದಲ್ಲಿ ಮುಂದಿನ 10 ದಿನಗಳ ಅವಧಿಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಜನರು ಮನೆಗಳಿಂದ ಆಚೆ ಬರಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಬಲೂಚಿಸ್ತಾನದಲ್ಲಿ ಮುಂಗಾರು ಆರಂಭವಾದ ಕಳೆದ ಜೂನ್ 1ರ ನಂತರ 124 ಜನರು ಜೀವ ಕಳೆದುಕೊಂಡಿದ್ದಾರೆ. 10 ಸಾವಿರಕ್ಕೂ ಹೆಚ್ಚು ಮನೆಗಳು ಕುಸಿದಿವೆ. 565 ಕಿಮೀಯಷ್ಟು ರಸ್ತೆ ಮತ್ತು 2 ಲಕ್ಷ ಎಕರೆ ಕೃಷಿಭೂಮಿ ಪ್ರವಾಹದಿಂದ ಹಾಳಾಗಿದೆ. 712 ಜಾನುವಾರುಗಳು ಸಾವನ್ನಪ್ಪಿವೆ. ಹಲವು ಅಣೆಕಟ್ಟುಗಳು ಕೊಚ್ಚಿಹೋಗಿವೆ ಎಂದು ಬಲೂಚಿಸ್ತಾನ ಸರ್ಕಾರ ಹೇಳಿದೆ.

ಬಲೂಚಿಸ್ತಾನ ಮತ್ತು ಸಿಂಧ್ ಪ್ರಾಂತ್ಯದ ನಡುವೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸೇತುವೆ ಕುಸಿದಿರುವ ಕಾರಣ ಬಲೂಚಿಸ್ತಾನದಲ್ಲಿ ಪರಿಹಾರ ಕಾಮಗಾರಿ ನಿರ್ವಹಿಸಲೂ ಕಷ್ಟವಾಗುತ್ತಿದೆ. ಕ್ವೆಟ್ಟಾ-ಕರಾಚಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿಗೊಳಿಸಲಾಗಿದೆ.

Published On - 12:53 pm, Sun, 31 July 22

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ