AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Flood Alert In PoK: ಝೇಲಂ ನದಿಗೆ ನೀರು ಬಿಡುಗಡೆಯಿಂದ ಪಿಒಕೆಯಲ್ಲಿ ಪ್ರವಾಹ ಪರಿಸ್ಥಿತಿ, ಪಾಕ್​ಗೆ ಭೀತಿ

ಭಾರತ ಯಾವುದೇ ಪೂರ್ವ ಮಾಹಿತಿಯಿಲ್ಲದೆ ಹಠಾತ್ತನೆ ಝೇಲಂ ನದಿಗೆ ನೀರು ಬಿಟ್ಟಿದೆ ಎಂದು ಪಾಕಿಸ್ತಾನ ಶನಿವಾರ ಆರೋಪಿಸಿದೆ. ಇದರಿಂದಾಗಿ ಪಿಒಕೆಯ ಮುಜಫರಾಬಾದ್ ಪ್ರದೇಶದಲ್ಲಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಉರಿ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಲಾಗಿದ್ದು, ಹಟ್ಟಿಯನ್ ಬಾಲಾ ಜಿಲ್ಲೆಯಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಾಗಿ ಸ್ಥಳೀಯ ನಿವಾಸಿಗಳಲ್ಲಿ ಭಯಭೀತರಾಗಿ, ಅವರು ಎತ್ತರದ ಪ್ರದೇಶಗಳಿಗೆ ಪಲಾಯನ ಮಾಡಬೇಕಾಯಿತು.ಭಾರತವು ಯಾವುದೇ ಪೂರ್ವ ಸೂಚನೆ ಇಲ್ಲದೆ ಅನಂತನಾಗ್‌ನಿಂದ ಝೇಲಂ ನದಿಗೆ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ್ದರಿಂದ, ಚಕೋತಿ ಗಡಿಯ ಮೂಲಕ ಪಿಒಕೆ ಪ್ರವೇಶಿಸಿದೆ ಎಂದು ಪಾಕಿಸ್ತಾನಿ ಅಧಿಕಾರಿಗಳು ಮತ್ತು ಸ್ಥಳೀಯರು ಆರೋಪಿಸಿದ್ದಾರೆ. ಇದು ಭಾರತ ಉದ್ದೇಶಪೂರ್ವಕವಾಗಿ ತೆಗೆದುಕೊಂಡ ಕ್ರಮ ಎಂದು ಪಾಕಿಸ್ತಾನ ದೂರಿದೆ.

Flood Alert In PoK: ಝೇಲಂ ನದಿಗೆ ನೀರು ಬಿಡುಗಡೆಯಿಂದ ಪಿಒಕೆಯಲ್ಲಿ ಪ್ರವಾಹ ಪರಿಸ್ಥಿತಿ, ಪಾಕ್​ಗೆ ಭೀತಿ
ಝೇಲಂ ನದಿImage Credit source: Mathrubhumi English
ನಯನಾ ರಾಜೀವ್
|

Updated on:Apr 27, 2025 | 10:08 AM

Share

ಇಸ್ಲಾಮಾಬಾದ್, ಏಪ್ರಿಲ್ 27: ಝೇಲಂ ನದಿ(Jhelum River)ಯ ನೀರಿನ ಮಟ್ಟ ಹಠಾತ್ತನೆ ಏರಿಕೆಯಾದ ನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಪ್ರವಾಹ ಎಚ್ಚರಿಕೆ ನೀಡಲಾಗಿದೆ. ಹಟ್ಟಿಯನ್ ಬಾಲಾ ಪ್ರದೇಶದಲ್ಲಿ ಆಡಳಿತವು ನೀರಿನ ತುರ್ತು ಪರಿಸ್ಥಿತಿ ಘೋಷಿಸಿದ್ದು, ಸ್ಥಳೀಯ ನಾಗರಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಝೇಲಂ ನದಿಯ ನೀರಿನ ಮಟ್ಟ ವೇಗವಾಗಿ ಏರಿದ್ದು, ಗರಿ ದುಪಟ್ಟಾ, ಮಝೋಯ್ ಮತ್ತು ಮುಜಫರಾಬಾದ್‌ನಂತಹ ಪ್ರದೇಶಗಳಲ್ಲಿ ಭೀತಿ ಉಂಟಾಗಿದೆ.

ಮಸೀದಿಗಳಿಂದ ನಿರಂತರವಾಗಿ ಎಚ್ಚರಿಕೆಗಳನ್ನು ಪ್ರಸಾರ ಮಾಡಲಾಗುತ್ತಿದೆ. ಭಾರತವು ಯಾವುದೇ ಪೂರ್ವ ಸೂಚನೆ ಇಲ್ಲದೆ ಅನಂತನಾಗ್‌ನಿಂದ ಝೇಲಂ ನದಿಗೆ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ್ದರಿಂದ, ಚಕೋತಿ ಗಡಿಯ ಮೂಲಕ ಪಿಒಕೆ ಪ್ರವೇಶಿಸಿದೆ ಎಂದು ಪಾಕಿಸ್ತಾನಿ ಅಧಿಕಾರಿಗಳು ಮತ್ತು ಸ್ಥಳೀಯರು ಆರೋಪಿಸಿದ್ದಾರೆ. ಇದು ಭಾರತ ಉದ್ದೇಶಪೂರ್ವಕವಾಗಿ ತೆಗೆದುಕೊಂಡ ಕ್ರಮ ಎಂದು ಪಾಕಿಸ್ತಾನ ದೂರಿದೆ.

ಭಾರತವು ಸಾಮಾನ್ಯಕ್ಕಿಂತ ಹೆಚ್ಚಿನ ನೀರನ್ನು ಬಿಡುಗಡೆ ಮಾಡಿರುವುದರಿಂದ, ಝೇಲಂ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ ಎಂದು ಮುಜಫರಾಬಾದ್ ಜಿಲ್ಲಾಡಳಿತ ಹೇಳಿದೆ. ಜನರು ಝೇಲಂ ನದಿಯ ಬಳಿಗೆ ಹೋಗಬಾರದು ಮತ್ತು ತಮ್ಮ ಪ್ರಾಣಿಗಳನ್ನು ಅದರ ಬಳಿಗೆ ಹೋಗಲು ಬಿಡಬಾರದು ಎಂದು ಸೂಚಿಸಲಾಗಿದೆ, ಇದರಿಂದ ಯಾವುದೇ ಜೀವ ಮತ್ತು ಆಸ್ತಿ ನಷ್ಟವನ್ನು ತಪ್ಪಿಸಬಹುದು.

ಇದನ್ನೂ ಓದಿ
Image
ಕಾಶ್ಮೀರದಲ್ಲಿ ರಕ್ತದೋಕುಳಿ; ಇಂದು ಉಗ್ರರ ದಾಳಿ ವೇಳೆ ಆಗಿದ್ದೇನು?
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಸಿಂಧೂ ನದಿ ನೀರು ಒಪ್ಪಂದವನ್ನು (ಐಡಬ್ಲ್ಯೂಟಿ) ಸ್ಥಗಿತಗೊಳಿಸುವುದಾಗಿ ಭಾರತ ಇತ್ತೀಚೆಗೆ ಬೆದರಿಕೆ ಹಾಕಿದ್ದ ನಂತರ ಈ ಅನಿರೀಕ್ಷಿತ ನಡೆ ಅಚ್ಚರಿಯೇನಲ್ಲ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. ಇದು ಎರಡೂ ದೇಶಗಳ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಬಹುದು.

ಮತ್ತಷ್ಟು ಓದಿ: ಕೇವಲ ನೀರಿಗಾಗಿ ಅಲ್ಲ, ಔಷಧಿಗಾಗಿಯೂ ಹಾತೊರೆಯಲಿದೆ ಪಾಕಿಸ್ತಾನ

ಸಿಂಧೂ ನದಿ ನೀರು ಒಪ್ಪಂದವು 1960 ರಿಂದ ಭಾರತ ಮತ್ತು ಪಾಕಿಸ್ತಾನದ ನಡುವಿನ ನೀರಿನ ಹಂಚಿಕೆಗೆ ಆಧಾರವಾಗಿದೆ. ಇತ್ತೀಚಿನ ಬೆಳವಣಿಗೆಗಳು ಈ ಒಪ್ಪಂದದ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿವೆ. ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ತಟಸ್ಥ ತನಿಖೆಗೆ ಮುಂದಾಗಿದ್ದಾರೆ.

ಇರಾನ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವಾರು ಪ್ರಾದೇಶಿಕ ಶಕ್ತಿಗಳು ಎರಡೂ ದೇಶಗಳ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮಧ್ಯಸ್ಥಿಕೆ ವಹಿಸಲು ಮುಂದಾಗಿವೆ. ಈ ಘಟನೆಯ ಬಗ್ಗೆ ಭಾರತ ಸರ್ಕಾರ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:07 am, Sun, 27 April 25

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ