AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಏನೇನೂ ಇಲ್ಲ..ಎಲ್ಲ ಸರ್ವನಾಶವಾಯ್ತು..’-ಉಕ್ಕುಕ್ಕಿ ಬಂದು ಎಲ್ಲವನ್ನೂ ನಾಶ ಮಾಡುತ್ತಿರುವ ಪ್ರವಾಹಕ್ಕೆ ಬೆಚ್ಚಿದ ಯುರೋಪ್​, 170 ಮಂದಿ ಸಾವು

Europe Floods: ಪಶ್ಚಿಮ ಯುರೋಪ್​ ರಾಷ್ಟ್ರಗಳ ಪೈಕಿ ಅತ್ಯಂತ ಹೆಚ್ಚಾಗಿ ವಿನಾಶಕ್ಕೀಡಾಗಿದ್ದು, ಜರ್ಮನಿ. ಇಲ್ಲಿ ಕಳೆದ 60 ವರ್ಷಗಳಲ್ಲಿ ಇಷ್ಟು ದೊಡ್ಡ ಮಟ್ಟದ ಪ್ರಾಕೃತಿಕ ವಿಕೋಪ ಉಂಟಾಗಿರಲಿಲ್ಲ. ಈಗಿನ ಪ್ರವಾಹ ಪರಿಸ್ಥಿತಿ ಅದೆಷ್ಟು ಕರಾಳವಾಗಿದೆಯೆಂದರೆ ರಕ್ಷಣಾ ಕಾರ್ಯಾಚರಣೆಯನ್ನೂ ಸರಿಯಾಗಿ ನಡೆಸಲು ಸಾಧ್ಯವಾಗುತ್ತಿಲ್ಲ.

‘ಏನೇನೂ ಇಲ್ಲ..ಎಲ್ಲ ಸರ್ವನಾಶವಾಯ್ತು..'-ಉಕ್ಕುಕ್ಕಿ ಬಂದು ಎಲ್ಲವನ್ನೂ ನಾಶ ಮಾಡುತ್ತಿರುವ ಪ್ರವಾಹಕ್ಕೆ ಬೆಚ್ಚಿದ ಯುರೋಪ್​, 170 ಮಂದಿ ಸಾವು
ಪ್ರವಾಹದಿಂದ ಉಂಟಾದ ಪರಿಸ್ಥಿತಿ
TV9 Web
| Edited By: |

Updated on: Jul 18, 2021 | 12:27 PM

Share

ಜರ್ಮನ್​, ಬೆಲ್ಜಿಯಂಗಳಲ್ಲಿ ಪ್ರವಾಹದ ಭೀಕರ ಪರಿಸ್ಥಿತಿ ಮುಂದುವರಿದಿದೆ. ಸಾವಿನ ಸಂಖ್ಯೆ ಈಗ 170ಕ್ಕೆ ಏರಿಕೆಯಾಗಿದೆ. ವಿಪರೀತ ಮಳೆ, ಉಕ್ಕಿ ಹರಿಯುವ ನೀರಿನಿಂದಾಗಿ ಅದೆಷ್ಟೋ ಮನೆಗಳು ಮುಳುಗಿ ಹೋಗಿವೆ..ರಸ್ತೆಗಳೆಲ್ಲ ಜಲಾವೃತ್ತಗೊಂಡಿವೆ. ವಿದ್ಯುತ್​ ಲೈನ್​​ಗಳೆಲ್ಲ ತುಂಡಾಗಿ ಕರೆಂಟ್​ ಇಲ್ಲದ ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿವೆ.

ಪಶ್ಚಿಮ ಯುರೋಪ್​ ರಾಷ್ಟ್ರಗಳ ಪೈಕಿ ಅತ್ಯಂತ ಹೆಚ್ಚಾಗಿ ವಿನಾಶಕ್ಕೀಡಾಗಿದ್ದು, ಜರ್ಮನಿ. ಇಲ್ಲಿ ಕಳೆದ 60 ವರ್ಷಗಳಲ್ಲಿ ಇಷ್ಟು ದೊಡ್ಡ ಮಟ್ಟದ ಪ್ರಾಕೃತಿಕ ವಿಕೋಪ ಉಂಟಾಗಿರಲಿಲ್ಲ. ಈಗಿನ ಪ್ರವಾಹ ಪರಿಸ್ಥಿತಿ ಅದೆಷ್ಟು ಕರಾಳವಾಗಿದೆಯೆಂದರೆ ರಕ್ಷಣಾ ಕಾರ್ಯಾಚರಣೆಯನ್ನೂ ಸರಿಯಾಗಿ ನಡೆಸಲು ಸಾಧ್ಯವಾಗುತ್ತಿಲ್ಲ. 100ಕ್ಕೂ ಹೆಚ್ಚು ಜನರು ಈಗಲೂ ಕಾಣೆಯಾಗಿದ್ದಾರೆ. ಒಂದಷ್ಟು ಜಿಲ್ಲೆಗಳನ್ನು ಸಂಪರ್ಕಿಸಲು ಹರಸಾಹಸ ಪಡುವಂತಾಗಿದೆ. ಏನೇನೂ ಉಳಿದಿಲ್ಲ..ಎಲ್ಲವೂ ಸರ್ವನಾಶ ಆಗಿಹೋಯ್ತು..ಈ ದೃಶ್ಯವನ್ನು ನೀವೆಲ್ಲ ಊಹಿಸಿಕೊಳ್ಳಲೂ ಸಾಧ್ಯವಿಲ್ಲ ಎಂದು ಜರ್ಮನಿಯ ಅಹರ್​ವೇಲರ್​​ನಲ್ಲಿನ ವೈನ್​ ಶಾಪ್​ ಮಾಲೀಕರೊಬ್ಬರು ಕಣ್ಣೀರಿಟ್ಟಿದ್ದಾರೆ.

ಪ್ರವಾಹದಿಂದ ತೀವ್ರ ದುರಂತಕ್ಕೀಡಾದ ಉತ್ತರ ರೈನ್​-ವೆಸ್ಟ್ರಾಲಿಯಾ ರಾಜ್ಯದ ಎರ್ಫ್ಟ್‌ಸ್ಟಾಡ್‌ಗೆ ಭೇಟಿ ನೀಡಿ, ಪರಿಸ್ಥಿತಿ ಪರಿಶೀಲಿಸಿದ್ದಾರೆ. ಇದೊಂದೇ ಪ್ರದೇಶದಲ್ಲಿ ಸುಮಾರು 45 ಮಂದಿ ಸಾವನ್ನಪ್ಪಿದ್ದಾರೆ. ಹವಾಮಾನ ಬದಲಾವಣೆಯಿಂದ ಹೀಗೆ ವಿಪರೀತ ಮಳೆಯಾಗುತ್ತಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಇನ್ನುಳಿದಂತೆ ಪ್ರವಾಹ ಪೀಡಿತ ಪ್ರದೇಶಗಳಿಂದ ನಾಗರಿಕರನ್ನು ಸುರಕ್ಷಿತವಾಗಿ ಬೇರೆಡೆಗೆ ಸಾಗಿಸುವ ಕಾರ್ಯ ಭರದಿಂದ ಸಾಗುತ್ತಿದೆ. ನೆದರ್​ಲ್ಯಾಂಡ್​​ನಲ್ಲೂ ಹೈ ಅಲರ್ಟ್​ ಘೋಷಣೆ ಮಾಡಲಾಗಿದ್ದು, ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ: Corona Third Wave: ಜಾಗತಿಕ ಮಟ್ಟದಲ್ಲಿ ಶೇ.16ರಷ್ಟು ಏರಿಕೆ ಕಂಡ ಕೊರೊನಾ ಪ್ರಕರಣಗಳ ಸಂಖ್ಯೆ; ಭಾರತಕ್ಕೆ ನಾಲ್ಕನೇ ಸ್ಥಾನ

Floods in western Europe Death toll rise to 170 everything is destroyed

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು