AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್​ಬಾಲ್ ಕ್ರೀಡಾಂಗಣಕ್ಕೆ ನುಗ್ಗಿದ ಅಭಿಮಾನಿಗಳು: ಇಂಡೋನೇಷ್ಯಾದಲ್ಲಿ ಹಿಂಸಾಚಾರಕ್ಕೆ 127 ಜನ ಬಲಿ

ಕ್ರೀಡಾಂಗಣದಲ್ಲಿಯೇ ಇಬ್ಬರು ಪೊಲೀಸರು ಹಾಗೂ 36 ಅಭಿಮಾನಿಗಳು  ಮೃತಪಟ್ಟರೆ, ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ

ಫುಟ್​ಬಾಲ್ ಕ್ರೀಡಾಂಗಣಕ್ಕೆ ನುಗ್ಗಿದ ಅಭಿಮಾನಿಗಳು: ಇಂಡೋನೇಷ್ಯಾದಲ್ಲಿ ಹಿಂಸಾಚಾರಕ್ಕೆ 127 ಜನ ಬಲಿ
ಇಂಡೋನೇಷ್ಯಾದಲ್ಲಿ ಫುಟ್​ಬಾಲ್ ಅಭಿಮಾನಿಗಳ ದಾಂಧಲೆ
TV9 Web
| Edited By: |

Updated on:Oct 02, 2022 | 8:11 PM

Share

ಜಕಾರ್ತಾ:  ಇಂಡೋನೇಷ್ಯಾದ ಪೂರ್ವ ಜಾವಾದಲ್ಲಿ ಫುಟ್​ಬಾಲ್ ಪಂದ್ಯದ ವೇಳೆ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿ ದಾಂದಲೆ ನಡೆಸಿದ್ದರಿಂದ ಆರಂಭವಾದ ಹಿಂಸಾಚಾರದಲ್ಲಿ 127 ಜನರು ಮೃತಪಟ್ಟಿದ್ದಾರೆ. ಪೊಲೀಸರು ಮತ್ತು ಫುಟ್​ಬಾಲ್ ಅಭಿಮಾನಿಗಳ ನಡುವೆ ಆರಂಭವಾದ ವಾಗ್ವಾದವು ಹಿಂಸಾಚಾರಕ್ಕೆ ತಿರುಗಿತು. ಈ ವೇಳೆ ಇಬ್ಬರು ಪೊಲೀಸರೂ ಸೇರಿದಂತೆ 127 ಜನರು ಸಾವನ್ನಪ್ಪಿದ್ದಾರೆ. ಕ್ರೀಡಾಂಗಣದಲ್ಲಿಯೇ ಇಬ್ಬರು ಪೊಲೀಸರು ಹಾಗೂ 36 ಅಭಿಮಾನಿಗಳು  ಮೃತಪಟ್ಟರೆ, ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೂರ್ವ ಜಾವಾ ಪೊಲೀಸ್ ಮುಖ್ಯಸ್ಥ ನಿಕೊ ಅಫಿಂಟಾ ಮಾಹಿತಿ ನೀಡಿದ್ದಾರೆ. 180ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅರೆಮಾ ಎಫ್​ಸಿ ಮತ್ತು ಪೆರ್​ಸೆಬಯಾ ಸುರಬಯ ಫುಟ್​ಬಾಲ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಸೋತ ತಂಡದ ಬೆಂಬಲಿಗರು ಏಕಾಏಕಿ ಕ್ರೀಡಾಂಗಣಕ್ಕೆ ನುಗ್ಗಿದರು. ಮೈದಾನಕ್ಕೆ ನುಗ್ಗಿದ ಅಭಿಮಾನಿಗಳನ್ನು ಹಿಮ್ಮೆಟ್ಟಿಸಲು ಪೊಲೀಸರು ಅಶ್ರುವಾಯು ಶೆಲ್ ಸಿಡಿಸಿದರು. ಇದರಿಂದ ಕಾಲ್ತುಳಿತ ಉಟಾಯಿತು. ಹಲವರು ಉಸಿರುಗಟ್ಟಿ ಮೃತಪಟ್ಟರು. ಸ್ಥಳೀಯ ಸುದ್ದಿಮಾಧ್ಯಮಗಳು ಪ್ರಸಾರ ಮಾಡಿರುವ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೊ ತುಣುಕುಗಳಲ್ಲಿ ಮಲಾಂಗ್​ನಲ್ಲಿ ಜನರು ಮೈದಾನದತ್ತ ಓಡುವುದು ಮತ್ತು ಶವಗಳನ್ನು ಸುತ್ತಿಟ್ಟಿರುವ ಬ್ಯಾಗ್​ಗಳ ದೃಶ್ಯಗಳು ಇವೆ.

ಪ್ರಕರಣದ ಬಗ್ಗೆ ತನಿಖೆ ಆರಂಭಿಸಲಾಗಿದೆ. ಇಂಡೋನೇಷ್ಯಾದ ಜನಪ್ರಿಯ ಫುಟ್​ಬಾಲ್ ಕ್ಲಬ್ ಆಗಿರುವ ‘ಬಿಆರ್​ಐ ಲಿಗಾ-1’ ಘಟನೆಯ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದೆ. ಪಂದ್ಯದಲ್ಲಿ ಬಿಆರ್​ಐ ಲಿಗಾ-1 ತಂಡವು ಪೆರ್​ಸೆಬಾಯಾ ತಂಡದ ವಿರುದ್ಧ 3-2 ಅಂತರದಲ್ಲಿ ಸೋಲನುಭವಿಸಿತ್ತು. ಇಂಡೋನೇಷ್ಯಾದ ಫುಟ್​ಬಾಲ್ ಒಕ್ಕೂಟವು ಸಹ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದೆ.

ಇಂಡೋನೇಷ್ಯಾದಲ್ಲಿ ಈ ಹಿಂದೆಯೂ ಹಲವು ಬಾರಿ ಫುಟ್​ಬಾಲ್ ಪಂದ್ಯಗಳ ವೇಳೆ ಹಿಂಸಾಚಾರ ನಡೆದಿತ್ತು. ಹಲವು ಕ್ಲಬ್​ಗಳ ನಡುವೆ ವೈಷಮ್ಯ ಇರುವುದು ಸ್ಥಳೀಯ ಆಡಳಿತಕ್ಕೆ ತಲೆನೋವಾಗಿದೆ. ಜನಪ್ರಿಯ ತಂಡಗಳ ಅಭಿಮಾನಿಗಳು ಸೋಲು-ಗೆಲುವುಗಳಿಗೆ ತೀವ್ರವಾಗಿ ಪ್ರತಿಕ್ರಿಯಿಸಿ, ಹಿಂಸಾಚಾರಕ್ಕೆ ಕಾರಣರಾಗುತ್ತಾರೆ.

Published On - 7:15 am, Sun, 2 October 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ