AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್​ಬಾಲ್ ಕ್ರೀಡಾಂಗಣಕ್ಕೆ ನುಗ್ಗಿದ ಅಭಿಮಾನಿಗಳು: ಇಂಡೋನೇಷ್ಯಾದಲ್ಲಿ ಹಿಂಸಾಚಾರಕ್ಕೆ 127 ಜನ ಬಲಿ

ಕ್ರೀಡಾಂಗಣದಲ್ಲಿಯೇ ಇಬ್ಬರು ಪೊಲೀಸರು ಹಾಗೂ 36 ಅಭಿಮಾನಿಗಳು  ಮೃತಪಟ್ಟರೆ, ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ

ಫುಟ್​ಬಾಲ್ ಕ್ರೀಡಾಂಗಣಕ್ಕೆ ನುಗ್ಗಿದ ಅಭಿಮಾನಿಗಳು: ಇಂಡೋನೇಷ್ಯಾದಲ್ಲಿ ಹಿಂಸಾಚಾರಕ್ಕೆ 127 ಜನ ಬಲಿ
ಇಂಡೋನೇಷ್ಯಾದಲ್ಲಿ ಫುಟ್​ಬಾಲ್ ಅಭಿಮಾನಿಗಳ ದಾಂಧಲೆ
TV9 Web
| Edited By: |

Updated on:Oct 02, 2022 | 8:11 PM

Share

ಜಕಾರ್ತಾ:  ಇಂಡೋನೇಷ್ಯಾದ ಪೂರ್ವ ಜಾವಾದಲ್ಲಿ ಫುಟ್​ಬಾಲ್ ಪಂದ್ಯದ ವೇಳೆ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿ ದಾಂದಲೆ ನಡೆಸಿದ್ದರಿಂದ ಆರಂಭವಾದ ಹಿಂಸಾಚಾರದಲ್ಲಿ 127 ಜನರು ಮೃತಪಟ್ಟಿದ್ದಾರೆ. ಪೊಲೀಸರು ಮತ್ತು ಫುಟ್​ಬಾಲ್ ಅಭಿಮಾನಿಗಳ ನಡುವೆ ಆರಂಭವಾದ ವಾಗ್ವಾದವು ಹಿಂಸಾಚಾರಕ್ಕೆ ತಿರುಗಿತು. ಈ ವೇಳೆ ಇಬ್ಬರು ಪೊಲೀಸರೂ ಸೇರಿದಂತೆ 127 ಜನರು ಸಾವನ್ನಪ್ಪಿದ್ದಾರೆ. ಕ್ರೀಡಾಂಗಣದಲ್ಲಿಯೇ ಇಬ್ಬರು ಪೊಲೀಸರು ಹಾಗೂ 36 ಅಭಿಮಾನಿಗಳು  ಮೃತಪಟ್ಟರೆ, ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೂರ್ವ ಜಾವಾ ಪೊಲೀಸ್ ಮುಖ್ಯಸ್ಥ ನಿಕೊ ಅಫಿಂಟಾ ಮಾಹಿತಿ ನೀಡಿದ್ದಾರೆ. 180ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅರೆಮಾ ಎಫ್​ಸಿ ಮತ್ತು ಪೆರ್​ಸೆಬಯಾ ಸುರಬಯ ಫುಟ್​ಬಾಲ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಸೋತ ತಂಡದ ಬೆಂಬಲಿಗರು ಏಕಾಏಕಿ ಕ್ರೀಡಾಂಗಣಕ್ಕೆ ನುಗ್ಗಿದರು. ಮೈದಾನಕ್ಕೆ ನುಗ್ಗಿದ ಅಭಿಮಾನಿಗಳನ್ನು ಹಿಮ್ಮೆಟ್ಟಿಸಲು ಪೊಲೀಸರು ಅಶ್ರುವಾಯು ಶೆಲ್ ಸಿಡಿಸಿದರು. ಇದರಿಂದ ಕಾಲ್ತುಳಿತ ಉಟಾಯಿತು. ಹಲವರು ಉಸಿರುಗಟ್ಟಿ ಮೃತಪಟ್ಟರು. ಸ್ಥಳೀಯ ಸುದ್ದಿಮಾಧ್ಯಮಗಳು ಪ್ರಸಾರ ಮಾಡಿರುವ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೊ ತುಣುಕುಗಳಲ್ಲಿ ಮಲಾಂಗ್​ನಲ್ಲಿ ಜನರು ಮೈದಾನದತ್ತ ಓಡುವುದು ಮತ್ತು ಶವಗಳನ್ನು ಸುತ್ತಿಟ್ಟಿರುವ ಬ್ಯಾಗ್​ಗಳ ದೃಶ್ಯಗಳು ಇವೆ.

ಪ್ರಕರಣದ ಬಗ್ಗೆ ತನಿಖೆ ಆರಂಭಿಸಲಾಗಿದೆ. ಇಂಡೋನೇಷ್ಯಾದ ಜನಪ್ರಿಯ ಫುಟ್​ಬಾಲ್ ಕ್ಲಬ್ ಆಗಿರುವ ‘ಬಿಆರ್​ಐ ಲಿಗಾ-1’ ಘಟನೆಯ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದೆ. ಪಂದ್ಯದಲ್ಲಿ ಬಿಆರ್​ಐ ಲಿಗಾ-1 ತಂಡವು ಪೆರ್​ಸೆಬಾಯಾ ತಂಡದ ವಿರುದ್ಧ 3-2 ಅಂತರದಲ್ಲಿ ಸೋಲನುಭವಿಸಿತ್ತು. ಇಂಡೋನೇಷ್ಯಾದ ಫುಟ್​ಬಾಲ್ ಒಕ್ಕೂಟವು ಸಹ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದೆ.

ಇಂಡೋನೇಷ್ಯಾದಲ್ಲಿ ಈ ಹಿಂದೆಯೂ ಹಲವು ಬಾರಿ ಫುಟ್​ಬಾಲ್ ಪಂದ್ಯಗಳ ವೇಳೆ ಹಿಂಸಾಚಾರ ನಡೆದಿತ್ತು. ಹಲವು ಕ್ಲಬ್​ಗಳ ನಡುವೆ ವೈಷಮ್ಯ ಇರುವುದು ಸ್ಥಳೀಯ ಆಡಳಿತಕ್ಕೆ ತಲೆನೋವಾಗಿದೆ. ಜನಪ್ರಿಯ ತಂಡಗಳ ಅಭಿಮಾನಿಗಳು ಸೋಲು-ಗೆಲುವುಗಳಿಗೆ ತೀವ್ರವಾಗಿ ಪ್ರತಿಕ್ರಿಯಿಸಿ, ಹಿಂಸಾಚಾರಕ್ಕೆ ಕಾರಣರಾಗುತ್ತಾರೆ.

Published On - 7:15 am, Sun, 2 October 22

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್