AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan: ಅಧಿಕೃತ ರಹಸ್ಯಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್​​ಗೆ 10 ವರ್ಷ ಜೈಲು ಶಿಕ್ಷೆ

ಸೈಫರ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಪಿಟಿಐ (ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್) ಉಪಾಧ್ಯಕ್ಷ ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ" ಎಂದು ರಾಜ್ಯ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ.

Imran Khan: ಅಧಿಕೃತ ರಹಸ್ಯಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್​​ಗೆ 10 ವರ್ಷ ಜೈಲು ಶಿಕ್ಷೆ
ಇಮ್ರಾನ್ ಖಾನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 30, 2024 | 2:19 PM

Share

ಇಸ್ಲಾಮಾಬಾದ್ ಜನವರಿ 30: ಸೋರಿಕೆಯಾದ ದಾಖಲೆಗೆ (leaked document) ಸಂಬಂಧಿಸಿದ ವಿವಾದಾತ್ಮಕ ಪ್ರಕರಣದಲ್ಲಿ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan)ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ರಾಜ್ಯ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ. ಸೈಫರ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪಕ್ಷದ ವಕ್ತಾರರು ಎಎಫ್‌ಪಿಗೆ ತಿಳಿಸಿದ್ದಾರೆ.

ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ನಡೆದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಬುಲ್ ಹಸ್ನಾತ್ ಜುಲ್ಕರ್ನೈನ್ ಈ ತೀರ್ಪು ಪ್ರಕಟಿಸಿದರು. ಖಾನ್ ಅವರ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಇದು ನೆಪಮಾತ್ರದ ಪ್ರಕರಣ ಎಂದು ಹೇಳುವ ಮೂಲಕ ಬೆಳವಣಿಗೆಯನ್ನು ಖಚಿತಪಡಿಸಿದೆ.

ಸೈಫರ್‌ಗಿಂತ ಹಾಸ್ಯಾಸ್ಪದ ಪ್ರಕರಣ ಇನ್ನೊಂದಿಲ್ಲ. ವಿದೇಶಿ ಪಿತೂರಿಯನ್ನು ಬಹಿರಂಗಪಡಿಸಿದ್ದಕ್ಕಾಗಿ ಪಾಕಿಸ್ತಾನವು ತನ್ನ ಪ್ರಧಾನಿ ಮತ್ತು ವಿದೇಶಾಂಗ ಸಚಿವರನ್ನು ಜೈಲಿನಲ್ಲಿಟ್ಟಿರುವುದಕ್ಕಿಂತ ಹೆಚ್ಚು ಹಾಸ್ಯಾಸ್ಪದವಾಗಿದೆ ಎಂದು ಪಕ್ಷ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದಿದೆ.

ಸೈಫರ್ ಕೇಸ್ ಎಂದು ಕರೆಯಲ್ಪಡುವ ಪ್ರಕರಣವು  ಖಾನ್ ಪ್ರಧಾನಿಯಾಗಿದ್ದಾಗ ಇಸ್ಲಾಮಾಬಾದ್‌ಗೆ ವಾಷಿಂಗ್ಟನ್‌ನಲ್ಲಿ ಪಾಕಿಸ್ತಾನದ ರಾಯಭಾರಿ ಕಳುಹಿಸಿದ್ದ ರಹಸ್ಯ ರಾಜತಾಂತ್ರಿಕ ಪತ್ರವ್ಯವಹಾರದ ಸೋರಿಕೆಗೆ ಸಂಬಂಧಿಸಿದ್ದಾಗಿದೆ. ಇದು ಮಾಜಿ ಕ್ರಿಕೆಟಿಗನನ್ನು ಅವಿಶ್ವಾಸ ಮತದಲ್ಲಿ ಅಧಿಕಾರದಿಂದ ಹೊರಹಾಕುವ ಒಂದು ತಿಂಗಳ ಮೊದಲು ಮಾರ್ಚ್ 2022 ರಲ್ಲಿ ರ್ಯಾಲಿಯಲ್ಲಿ ಕಾಣಿಸಿಕೊಂಡಿದ್ದಕ್ಕೆ ಸಂಬಂಧಿಸಿದೆ. ಇಮ್ರಾನ್ ಖಾನ್ ವೇದಿಕೆಯ ಮೇಲೆ ಕಾಣಿಸಿಕೊಂಡು, ತಮ್ಮ ವಿರುದ್ಧ ವಿದೇಶಿ ಪಿತೂರಿ ಎಂದು ಹೇಳುವ ಕಾಗದದ ತುಂಡನ್ನು ತೋರಿಸಿದ್ದರು.

ಇಮ್ರಾನ್ ಖಾನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ಎಲ್ಲವನ್ನೂ ಕ್ಷಮಿಸಲಾಗುವುದು ಎಂದು ಅವರು ವಿವರಿಸಿದ್ದಾರೆ. ಅವರು ದೇಶವನ್ನು ಹೆಸರಿಸಲಿಲ್ಲ. ಆದರೆ ತರುವಾಯ ಅಮೆರಿಕವನ್ನು ಹೆಚ್ಚು ಟೀಕಿಸಿದ್ದರು. ಖಾನ್ ಅವರ ಕ್ರಮಗಳು ಒಂದು ವರ್ಗೀಕೃತ ದಾಖಲೆಯನ್ನು ಸೋರಿಕೆ ಮಾಡಿ ರಾಜತಾಂತ್ರಿಕ ಸಂಬಂಧಗಳನ್ನು ಹಾಳುಮಾಡುತ್ತವೆ ಎಂದು ಪ್ರಾಸಿಕ್ಯೂಷನ್ ಹೇಳಿದೆ. ಈ ಆರೋಪವು ಜೀವಾವಧಿ ಶಿಕ್ಷೆಗೆ ಅಥವಾ ಮರಣದಂಡನೆಗೆ ಕಾರಣವಾಗಬಹುದು.

ಈ ಪ್ರಕರಣದ ವಿಚಾರಣೆಯನ್ನು ಕಳೆದ ಕೆಲವು ತಿಂಗಳುಗಳಿಂದ ಜೈಲಿನಲ್ಲಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯದಲ್ಲಿ ಆಗಸ್ಟ್‌ನಿಂದ  ಖಾನ್ ಅವರನ್ನು ಬಂಧಿಸಲಾಗಿದೆ. ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಹಾಜರಾಗಲು ಅವಕಾಶವಿರಲಿಲ್ಲ. ವಿಚಾರಣೆಯನ್ನು ತ್ವರಿತಗೊಳಿಸುವಂತೆ ನ್ಯಾಯಾಧೀಶರಿಗೆ ಇತ್ತೀಚೆಗೆ ತಿಳಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಖಾನ್ ಅವರ ಪಿಟಿಐ ಪಕ್ಷವು ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುವುದಾಗಿ ಹೇಳಿದ್ದು ಅದನ್ನು ತಮಾಷೆ ಎಂದು ಕರೆದಿದೆ.

ಪಿಟಿಐ ಪ್ರಚಾರ ಮಾಡದಂತೆ ಅಧಿಕಾರಿಗಳು ತಡೆಯುತ್ತಿದ್ದಾರೆ ಎಂಬ ಆರೋಪದ ನಡುವೆಯೇ ಫೆಬ್ರವರಿ 8 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಖಾನ್ ಇತರ ಕಾನೂನು ಪ್ರಕರಣಗಳ ವಿರುದ್ಧ ಹೋರಾಡುತ್ತಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ: ಅವರ ಜೀವಕ್ಕೆ ಅಪಾಯವಿದೆ, ಸುಪ್ರೀಂ ಮೊರೆ ಹೋದ ಇಮ್ರಾನ್ ಖಾನ್ ಪತ್ನಿ

ಖಾನ್ ಮತ್ತು ಖುರೇಷಿ ಇಬ್ಬರೂ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ಪ್ರಕರಣದಲ್ಲಿ ಸೇರ್ಪಡೆಗೊಂಡರು ಮತ್ತು ನಿರಪರಾಧಿ ಎಂದು ಒಪ್ಪಿಕೊಂಡಿದ್ದರು. ಇಸ್ಲಾಮಾಬಾದ್ ಹೈಕೋರ್ಟ್ (IHC) ಜೈಲು ವಿಚಾರಣೆಗೆ ಸರ್ಕಾರದ ಅಧಿಸೂಚನೆಯನ್ನು “ತಪ್ಪು” ಎಂದು ಬಣ್ಣಿಸಿದೆ ಮತ್ತು ಸಂಪೂರ್ಣ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ.

ಪ್ರಾಸಿಕ್ಯೂಷನ್ ಮತ್ತು ರಕ್ಷಣಾ ತಂಡ ಎರಡೂ ಸರ್ಕಾರಕ್ಕೆ ಸೇರಿದ ಕಾರಣ ವಿಚಾರಣೆಯು “ತಮಾಷೆ”ಗಿಂತ ಕಡಿಮೆಯಿಲ್ಲ ಎಂದು ಪಾಕ್ ಮಾಜಿ ಪ್ರಧಾನಿ ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:52 pm, Tue, 30 January 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು