AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ, ಚೇತರಿಕೆ ಸಾಧ್ಯವಿಲ್ಲ: ಪರ್ವೇಜ್​​ ಮುಷರಫ್ ಕುಟುಂಬ ಟ್ವೀಟ್

Pervez Musharraf ಪರ್ವೇಜ್ ಮುಷರಫ್ ಅವರು ವೆಂಟಿಲೇಟರ್‌ನಲ್ಲಿಲ್ಲ. ಕಳೆದ 3 ವಾರಗಳಿಂದ ಅವರ ಅನಾರೋಗ್ಯದ (ಅಮಿಲೋಡೋಸಿಸ್) ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೇತರಿಕೆ ಸಾಧ್ಯವಾಗದ ಮತ್ತು ಅಂಗಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ..

ಅಂಗಾಂಗಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ, ಚೇತರಿಕೆ ಸಾಧ್ಯವಿಲ್ಲ: ಪರ್ವೇಜ್​​ ಮುಷರಫ್ ಕುಟುಂಬ ಟ್ವೀಟ್
ಪರ್ವೇಜ್ ಮುಷರಫ್
TV9 Web
| Edited By: |

Updated on:Jun 10, 2022 | 8:37 PM

Share

ಲಾಹೋರ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ (Pervez Musharraf) ಅವರ ಕುಟುಂಬ ಶುಕ್ರವಾರ ಟ್ವೀಟ್ ಮಾಡಿದ್ದು ಮುಷರಫ್ ಅವರ್ ವೆಂಟಿಲೇಟರ್ (ventilation) ಬೆಂಬಲದಲ್ಲಿ ಇಲ್ಲ ಎಂದು ಹೇಳಿದೆ. ಮುಷರಫ್ ಅವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಕುಟುಂಬ ಟ್ವೀಟ್ ಮಾಡಿದ್ದು, ಅಮಿಲೋಡೋಸಿಸ್ (Amyloidosis) ಸಮಸ್ಯೆಯಿಂದಾಗಿ ಕಳೆದ ಮೂರು ವಾರಗಳಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರೀಗ ಚೇತರಿಕೆ ಸಾಧ್ಯವಾಗದೇ ಇದ್ದು ಕಠಿಣ ಹಂತವನ್ನು ಎದುರಿಸುತ್ತಿದ್ದಾರೆ ಎಂದು ಕುಟುಂಬ ತಿಳಿಸಿದೆ. ಅವರ ದೈನಂದಿನ ಜೀವನ ಸುಲಭವಾಗುವಂತೆ ಪ್ರಾರ್ಥನೆಗಾಗಿ ಮನವಿ ಮಾಡಿದ ಕುಟುಂಬ, ಅವರ ಅಂಗಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದರು. ಕುಟುಂಬದಿಂದ ಸಂದೇಶ: ಅವರು ವೆಂಟಿಲೇಟರ್‌ನಲ್ಲಿಲ್ಲ. ಕಳೆದ 3 ವಾರಗಳಿಂದ ಅವರ ಅನಾರೋಗ್ಯದ (ಅಮಿಲೋಡೋಸಿಸ್) ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೇತರಿಕೆ ಸಾಧ್ಯವಾಗದ ಮತ್ತು ಅಂಗಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸದೇ ಇರುವ ಕಾರಣ ಕಠಿಣ ಹಂತವನ್ನು ಎದುರಿಸುತಿದ್ದಾರೆ. ಅವರಿಗಾಗಿ ಪ್ರಾರ್ಥಿಸಿ ಎಂದು ಟ್ವೀಟ್ ಮಾಡಿದೆ.

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ಶುಕ್ರವಾರ ನಿಧನರಾಗಿದ್ದಾರೆ ಎಂದು ಪಾಕಿಸ್ತಾನದ ಕೆಲವು ಸುದ್ದಿ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ ಮುಷರಫ್ ಕುಟುಂಬ ಆ ಟ್ವೀಟ್ ಮಾಡಿದೆ. ಪಾಕಿಸ್ತಾನದ ಮಾಧ್ಯಮ ಸಂಸ್ಥೆ ವಕ್ತ್ ನ್ಯೂಸ್ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಪರ್ವೇಜ್ ಮುಷರಫ್ ನಿಧನರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದು , ಆನಂತರ ಅದನ್ನು ಡಿಲೀಟ್ ಮಾಡಿದೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 8:21 pm, Fri, 10 June 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?