AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಇಮ್ರಾನ್ ನಿಯಾಜಿ ಎಂದು ಕರೆಯಿರಿ: ಪಾಕಿಸ್ತಾನದ ಮಾಜಿ ಪಿಎಂ ಇಮ್ರಾನ್ ಖಾನ್

2018 ರ ಆಗಸ್ಟ್‌ನಲ್ಲಿ ಪ್ರಧಾನಿ ಸ್ಥಾನವನ್ನು ವಹಿಸಿಕೊಂಡ ಕೆಲವೇ ದಿನಗಳಲ್ಲಿ ಕ್ಯಾಬಿನೆಟ್ ವಿಭಾಗವು ಅಧಿಸೂಚನೆಯನ್ನು ಹೊರಡಿಸಿ ಪ್ರಧಾನಿಯು ಎಲ್ಲಾ ಅಧಿಕೃತ ಸಂವಹನಗಳಲ್ಲಿ ಅವರ ಹೆಸರನ್ನು ಇಮ್ರಾನ್ ಅಹ್ಮದ್ ಖಾನ್ ನಿಯಾಜಿ...

ನನ್ನನ್ನು ಇಮ್ರಾನ್ ನಿಯಾಜಿ ಎಂದು ಕರೆಯಿರಿ: ಪಾಕಿಸ್ತಾನದ ಮಾಜಿ ಪಿಎಂ ಇಮ್ರಾನ್ ಖಾನ್
ಇಮ್ರಾನ್ ಖಾನ್
TV9 Web
| Edited By: |

Updated on:May 09, 2022 | 4:50 PM

Share

ಇಸ್ಲಾಮಾಬಾದ್: ತಮ್ಮ ಹಿಂದಿನ ಹೇಳಿಕೆಯಿಂದ ಯೂಟರ್ನ್ ಮಾಡಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತನ್ನನ್ನು ‘ಇಮ್ರಾನ್ ಖಾನ್’ (Imran Khan)ಎನ್ನುವುದಕ್ಕಿಂತ ‘ಇಮ್ರಾನ್ ನಿಯಾಜಿ’ (Imran Niazi) ಎಂದು ಕರೆಯಬೇಕು ಎಂದು ಭಾನುವಾರ ಹೇಳಿದ್ದಾರೆ. ಮಿಯಾನ್ವಾಲಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (PTI) ಮುಖ್ಯಸ್ಥರು ಡಕಾಯಿತರಿಂದ ನಾನು ಇಮ್ರಾನ್ ನಿಯಾಜಿ ಎಂದು ಕರೆಯಲು ಇಷ್ಟಪಡುತ್ತೇನೆ ಎಂದು ಹೇಳಿರುವುದಾಗಿ ದಿ ನ್ಯೂಸ್ ಇಂಟರ್​​ನ್ಯಾಷನಲ್ ವರದಿ ಮಾಡಿದೆ. 2018 ರ ಆಗಸ್ಟ್‌ನಲ್ಲಿ ಪ್ರಧಾನಿ ಸ್ಥಾನವನ್ನು ವಹಿಸಿಕೊಂಡ ಕೆಲವೇ ದಿನಗಳಲ್ಲಿ ಕ್ಯಾಬಿನೆಟ್ ವಿಭಾಗವು ಅಧಿಸೂಚನೆಯನ್ನು ಹೊರಡಿಸಿ ಪ್ರಧಾನಿಯು ಎಲ್ಲಾ ಅಧಿಕೃತ ಸಂವಹನಗಳಲ್ಲಿ ಅವರ ಹೆಸರನ್ನು ಇಮ್ರಾನ್ ಅಹ್ಮದ್ ಖಾನ್ ನಿಯಾಜಿ ಎಂಬುದರ ಬದಲು ಇಮ್ರಾನ್ ಖಾನ್ ಎಂದು ಬರೆಯಬೇಕೆಂದು ನಿರ್ದೇಶಿಸಿತ್ತು. ಪಾಕಿಸ್ತಾನಿ ಪ್ರಕಟಣೆಯ ಪ್ರಕಾರ ಕ್ಯಾಬಿನೆಟ್ ವಿಭಾಗದ ಕಾರ್ಯದರ್ಶಿ ಫಜಲ್ ಅಬ್ಬಾಸ್ ಮೈಕಾನ್ ಅವರ ಸಹಿಯೊಂದಿಗೆ ಕಚೇರಿ ಜ್ಞಾಪಕ ಪತ್ರವನ್ನು ನೀಡಲಾಗಿದೆ. ಆದಾಗ್ಯೂ ಇಮ್ರಾನ್ ಖಾನ್ ತಮ್ಮ ಮಾತುಗಳನ್ನು ವಾಪಸ್ ಪಡೆಯುವುದು ಅಥವಾ ವಿರೋಧವಾದ ಹೇಳಿಕೆಗಳನ್ನು ನೀಡುವುದು ಅನೇಕ ಬಾರಿ ಕಂಡುಬಂದಿದೆ.

ಈ ಹಿಂದೆ, ಅವರು ತಮ್ಮ “ವಿದೇಶಿ ಪಿತೂರಿ” ಪತ್ರದ ಬಗ್ಗೆ ಯು-ಟರ್ನ್ ಮಾಡಿದ್ದರು, ಇದರಲ್ಲಿ ಅವರು ಅಮೆರಿಕ ಮತ್ತು ದೇಶದ ವಿರೋಧ ಪಕ್ಷಗಳು ತಮ್ಮನ್ನು ಅಧಿಕಾರದಿಂದ ತೆಗೆದುಹಾಕಲು ಕೈಜೋಡಿಸಿದ್ದಾರೆ ಎಂದು ಆರೋಪಿಸಿದರು.

69ರ ಖಾನ್ ಕಳೆದ ತಿಂಗಳು ಅವಿಶ್ವಾಸ ನಿರ್ಣಯದ ಮೂಲಕ ಅಧಿಕಾರದಿಂದ ಕೆಳಗಿಳಿದಿದ್ದು, ಅವಿಶ್ವಾಸ ಮತದ ಮೂಲಕ ಪದಚ್ಯುತರಾದ ಮೊದಲ ಪ್ರಧಾನಿಯಾಗಿದ್ದಾರೆ.

ಇದನ್ನೂ ಓದಿ
Image
ರಷ್ಯಾಗೆ ಎದುರೇಟು ನೀಡಲು ಪಾಕ್​ ಜತೆ ಸ್ನೇಹ ಹಸ್ತ ಚಾಚಿದ ಅಮೆರಿಕ

Published On - 4:48 pm, Mon, 9 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ