AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಇಮ್ರಾನ್ ನಿಯಾಜಿ ಎಂದು ಕರೆಯಿರಿ: ಪಾಕಿಸ್ತಾನದ ಮಾಜಿ ಪಿಎಂ ಇಮ್ರಾನ್ ಖಾನ್

2018 ರ ಆಗಸ್ಟ್‌ನಲ್ಲಿ ಪ್ರಧಾನಿ ಸ್ಥಾನವನ್ನು ವಹಿಸಿಕೊಂಡ ಕೆಲವೇ ದಿನಗಳಲ್ಲಿ ಕ್ಯಾಬಿನೆಟ್ ವಿಭಾಗವು ಅಧಿಸೂಚನೆಯನ್ನು ಹೊರಡಿಸಿ ಪ್ರಧಾನಿಯು ಎಲ್ಲಾ ಅಧಿಕೃತ ಸಂವಹನಗಳಲ್ಲಿ ಅವರ ಹೆಸರನ್ನು ಇಮ್ರಾನ್ ಅಹ್ಮದ್ ಖಾನ್ ನಿಯಾಜಿ...

ನನ್ನನ್ನು ಇಮ್ರಾನ್ ನಿಯಾಜಿ ಎಂದು ಕರೆಯಿರಿ: ಪಾಕಿಸ್ತಾನದ ಮಾಜಿ ಪಿಎಂ ಇಮ್ರಾನ್ ಖಾನ್
ಇಮ್ರಾನ್ ಖಾನ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:May 09, 2022 | 4:50 PM

Share

ಇಸ್ಲಾಮಾಬಾದ್: ತಮ್ಮ ಹಿಂದಿನ ಹೇಳಿಕೆಯಿಂದ ಯೂಟರ್ನ್ ಮಾಡಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತನ್ನನ್ನು ‘ಇಮ್ರಾನ್ ಖಾನ್’ (Imran Khan)ಎನ್ನುವುದಕ್ಕಿಂತ ‘ಇಮ್ರಾನ್ ನಿಯಾಜಿ’ (Imran Niazi) ಎಂದು ಕರೆಯಬೇಕು ಎಂದು ಭಾನುವಾರ ಹೇಳಿದ್ದಾರೆ. ಮಿಯಾನ್ವಾಲಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (PTI) ಮುಖ್ಯಸ್ಥರು ಡಕಾಯಿತರಿಂದ ನಾನು ಇಮ್ರಾನ್ ನಿಯಾಜಿ ಎಂದು ಕರೆಯಲು ಇಷ್ಟಪಡುತ್ತೇನೆ ಎಂದು ಹೇಳಿರುವುದಾಗಿ ದಿ ನ್ಯೂಸ್ ಇಂಟರ್​​ನ್ಯಾಷನಲ್ ವರದಿ ಮಾಡಿದೆ. 2018 ರ ಆಗಸ್ಟ್‌ನಲ್ಲಿ ಪ್ರಧಾನಿ ಸ್ಥಾನವನ್ನು ವಹಿಸಿಕೊಂಡ ಕೆಲವೇ ದಿನಗಳಲ್ಲಿ ಕ್ಯಾಬಿನೆಟ್ ವಿಭಾಗವು ಅಧಿಸೂಚನೆಯನ್ನು ಹೊರಡಿಸಿ ಪ್ರಧಾನಿಯು ಎಲ್ಲಾ ಅಧಿಕೃತ ಸಂವಹನಗಳಲ್ಲಿ ಅವರ ಹೆಸರನ್ನು ಇಮ್ರಾನ್ ಅಹ್ಮದ್ ಖಾನ್ ನಿಯಾಜಿ ಎಂಬುದರ ಬದಲು ಇಮ್ರಾನ್ ಖಾನ್ ಎಂದು ಬರೆಯಬೇಕೆಂದು ನಿರ್ದೇಶಿಸಿತ್ತು. ಪಾಕಿಸ್ತಾನಿ ಪ್ರಕಟಣೆಯ ಪ್ರಕಾರ ಕ್ಯಾಬಿನೆಟ್ ವಿಭಾಗದ ಕಾರ್ಯದರ್ಶಿ ಫಜಲ್ ಅಬ್ಬಾಸ್ ಮೈಕಾನ್ ಅವರ ಸಹಿಯೊಂದಿಗೆ ಕಚೇರಿ ಜ್ಞಾಪಕ ಪತ್ರವನ್ನು ನೀಡಲಾಗಿದೆ. ಆದಾಗ್ಯೂ ಇಮ್ರಾನ್ ಖಾನ್ ತಮ್ಮ ಮಾತುಗಳನ್ನು ವಾಪಸ್ ಪಡೆಯುವುದು ಅಥವಾ ವಿರೋಧವಾದ ಹೇಳಿಕೆಗಳನ್ನು ನೀಡುವುದು ಅನೇಕ ಬಾರಿ ಕಂಡುಬಂದಿದೆ.

ಈ ಹಿಂದೆ, ಅವರು ತಮ್ಮ “ವಿದೇಶಿ ಪಿತೂರಿ” ಪತ್ರದ ಬಗ್ಗೆ ಯು-ಟರ್ನ್ ಮಾಡಿದ್ದರು, ಇದರಲ್ಲಿ ಅವರು ಅಮೆರಿಕ ಮತ್ತು ದೇಶದ ವಿರೋಧ ಪಕ್ಷಗಳು ತಮ್ಮನ್ನು ಅಧಿಕಾರದಿಂದ ತೆಗೆದುಹಾಕಲು ಕೈಜೋಡಿಸಿದ್ದಾರೆ ಎಂದು ಆರೋಪಿಸಿದರು.

69ರ ಖಾನ್ ಕಳೆದ ತಿಂಗಳು ಅವಿಶ್ವಾಸ ನಿರ್ಣಯದ ಮೂಲಕ ಅಧಿಕಾರದಿಂದ ಕೆಳಗಿಳಿದಿದ್ದು, ಅವಿಶ್ವಾಸ ಮತದ ಮೂಲಕ ಪದಚ್ಯುತರಾದ ಮೊದಲ ಪ್ರಧಾನಿಯಾಗಿದ್ದಾರೆ.

ಇದನ್ನೂ ಓದಿ
Image
ರಷ್ಯಾಗೆ ಎದುರೇಟು ನೀಡಲು ಪಾಕ್​ ಜತೆ ಸ್ನೇಹ ಹಸ್ತ ಚಾಚಿದ ಅಮೆರಿಕ

Published On - 4:48 pm, Mon, 9 May 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!