AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಸರ್ಕಾರದ ವಿರುದ್ಧ ಇಮ್ರಾನ್ ಖಾನ್​​ ನೇತೃತ್ವದ ‘ಹಖೀಕಿ ಆಜಾದಿ’ ಬೃಹತ್ ಯಾತ್ರೆಗೆ ಕ್ಷಣಗಣನೆ

ಇಸ್ಲಾಮಾಬಾದ್‌ಗೆ ಪಿಟಿಐನ ಬೃಹತ್ ಮಾರ್ಚ್ ಅನ್ನು ತಕ್ಷಣವೇ ನಿಲ್ಲಿಸಲು ಆದೇಶಿಸಿ ಎಂದು ಸರ್ಕಾರ ಮಾಡಿದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.

ಪಾಕ್ ಸರ್ಕಾರದ ವಿರುದ್ಧ ಇಮ್ರಾನ್ ಖಾನ್​​ ನೇತೃತ್ವದ ‘ಹಖೀಕಿ ಆಜಾದಿ’ ಬೃಹತ್ ಯಾತ್ರೆಗೆ ಕ್ಷಣಗಣನೆ
Imran Khan
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 28, 2022 | 2:09 PM

Share

ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಮತ್ತು ಪಿಟಿಐ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ (Imran Khan)ಅವರು ಹೊಸ ಚುನಾವಣೆಗೆ ಒತ್ತಾಯಿಸಿ ಲಾಹೋರ್‌ನಿಂದ ಇಸ್ಲಾಮಾಬಾದ್‌ಗೆ ಇಂದು ಬೃಹತ್ ಮಾರ್ಚ್ ಆರಂಭಿಸಲಿದ್ದಾರೆ.  ಮೆರವಣಿಗೆಗೆ ಮುನ್ನ ಇಮ್ರಾನ್ ಖಾನ್ ರ್ಯಾಲಿಯನ್ನುದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.  ಮಾರ್ಚ್ ಸಾಗುವ ಮಾರ್ಗದಲ್ಲಿ ಮತ್ತು ಪಾಕಿಸ್ತಾನದ ರಾಜಧಾನಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.’ಹಖೀಕಿ ಆಜಾದಿ’ (Haqeeqi Azadi ನೈಜ ಸ್ವಾತಂತ್ರ್ಯ) ಮಾರ್ಚ್ ಕೆಲವೇ ಕ್ಷಣಗಳಲ್ಲಿ ಲಾಹೋರ್‌ನಿಂದ ಪ್ರಾರಂಭವಾಗಲಿದೆ ಎಂದು ಸ್ಥಳೀಯ ಮಾಧ್ಯಮಗಳು ಶುಕ್ರವಾರ ವರದಿ ಮಾಡಿವೆ. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (PTI) ನಾಯಕರಾದ ಯಾಸ್ಮೀನ್ ರಶೀದ್, ಹಮ್ಮದ್ ಅಜರ್, ಇತರರು ಮೆರವಣಿಗೆಯನ್ನು ಪ್ರಾರಂಭಿಸಲು ಲಾಹೋರ್‌ನ ಲಿಬರ್ಟಿ ಸ್ಕ್ವೇರ್‌ಗೆ ತೆರಳಿದ್ದಾರೆ. ಮಾರ್ಚ್ ಶಾಂತಿಯುತವಾಗಿ ಮತ್ತು ಕಾನೂನಿನ ಮಿತಿಯಲ್ಲಿ ನಡೆಯಲಿದೆ ಎಂದು ಪಿಟಿಐ ನಾಯಕರು ಭರವಸೆ ನೀಡಿದ್ದಾರೆ. ಪಿಟಿಐ ಬೆಂಬಲಿಗರು ಲಾಹೋರ್‌ನ ಲಿಬರ್ಟಿ ಚೌಕ್‌ನಲ್ಲಿ ಸೇರುತ್ತಾರೆ, ಅಲ್ಲಿಂದ ಮೆರವಣಿಗೆ ಪ್ರಾರಂಭವಾಗಲಿದೆ. ‘ಹಖೀಕಿ ಆಜಾದಿ ಲಾಂಗ್ ಮಾರ್ಚ್’ ಸರ್ಕಾರವನ್ನು ಪದಚ್ಯುತಗೊಳಿಸಲು ಅಥವಾ ರಚಿಸಲು ಅಲ್ಲ, ಆದರೆ ತಮ್ಮ ಭ್ರಷ್ಟಾಚಾರದ ಪ್ರಕರಣಗಳನ್ನು ಮನ್ನಾ ಮಾಡಲು ಅಧಿಕಾರವನ್ನು ಕಬಳಿಸಿದ ಕಳ್ಳರಿಂದ ದೇಶವನ್ನು ಮುಕ್ತಗೊಳಿಸುವುದಕ್ಕಾಗಿ ಈ ಮಾರ್ಚ್ ಕೈಗೊಂಡಿದ್ದೇವೆ ಎಂದು ಪಿಟಿಐ ಮುಖ್ಯಸ್ಥ ಇಮ್ರಾನ್ ಖಾನ್ ಹೇಳಿದ್ದಾರೆ.

ಇಸ್ಲಾಮಾಬಾದ್‌ಗೆ ಪಿಟಿಐನ ಬೃಹತ್ ಮಾರ್ಚ್ ಅನ್ನು ತಕ್ಷಣವೇ ನಿಲ್ಲಿಸಲು ಆದೇಶಿಸಿ ಎಂದು ಸರ್ಕಾರ ಮಾಡಿದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.

ಇಲ್ಲಿವರೆಗೆ ಖಾನ್ ಮತ್ತು ಅವರ ಪಕ್ಷವು ಆಯೋಜಿಸಿದ ರಾಜಕೀಯ ರ್ಯಾಲಿಗಳು ಮತ್ತು ಮೆರವಣಿಗೆಗಳು ಹಿಂಸಾಚಾರದ ಇತಿಹಾಸವನ್ನು ಹೊಂದಿವೆ. ಈ ರ್ಯಾಲಿಗಳಲ್ಲಿ ಸಾಮಾನ್ಯವಾಗಿ ಪೊಲೀಸ್ ಲಾಠಿ ಪ್ರಹಾರಗಳು ನಡೆದಿವೆ. ಇಸ್ಲಾಮಾಬಾದ್ ನಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಿದ್ದು ಸುತ್ತಮುತ್ತ 13,086 ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸಿಂಧ್ ಪ್ರಾಂತ್ಯದ 8,000 ಅರೆಸೈನಿಕ ಸಿಬ್ಬಂದಿ ಮತ್ತು 1,022 ಪೊಲೀಸರು ಕೂಡಾ ಕರ್ತವ್ಯ ನಿರತರಾಗಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ಹಲವಾರು ಪ್ರಮುಖ ರಸ್ತೆಗಳು ಮತ್ತು ಪ್ರಮುಖ ಸಾರ್ವಜನಿಕ ಸ್ಥಳಗಳನ್ನು ಶಿಪ್ಪಿಂಗ್ ಕಂಟೈನರ್‌ಗಳಿಂದ ಮುಚ್ಚಲಾಗಿದೆ.

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ