AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡರ್​ವೇರ್​ ಬಳಸಿ ನೇಣುಹಾಕಿಕೊಳ್ಳಲು ಹೊರಟಿದ್ದ ದಕ್ಷಿಣ ಕೊರಿಯಾದ ಮಾಜಿ ರಕ್ಷಣಾ ಸಚಿವ

ದಕ್ಷಿಣ ಕೊರಿಯಾದ ಮಾಜಿ ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿದ್ದಾಗ ಅವರು ಈ ಪ್ರಯತ್ನವನ್ನು ಮಾಡಿದರು, ಆದರೆ ರಕ್ಷಿಸಲಾಯಿತು.ದಕ್ಷಿಣ ಕೊರಿಯಾದ ಮಾಜಿ ರಕ್ಷಣಾ ಸಚಿವ ಕಿಮ್ ಯೋಂಗ್ ಹ್ಯುನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸ್​ ಕಸ್ಟಡಿಯಲ್ಲಿದ್ದಾಗಲೇ ಶೌಚಾಲಯದಲ್ಲಿ ತಮ್ಮ ಒಳ ಉಡುಪು ಬಳಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಅಂಡರ್​ವೇರ್​ ಬಳಸಿ ನೇಣುಹಾಕಿಕೊಳ್ಳಲು ಹೊರಟಿದ್ದ ದಕ್ಷಿಣ ಕೊರಿಯಾದ ಮಾಜಿ ರಕ್ಷಣಾ ಸಚಿವ
ಕಿಮ್
ನಯನಾ ರಾಜೀವ್
|

Updated on: Dec 11, 2024 | 11:20 AM

Share

ದಕ್ಷಿಣ ಕೊರಿಯಾದ ಮಾಜಿ ರಕ್ಷಣಾ ಸಚಿವ ಕಿಮ್ ಯೋಂಗ್ ಹ್ಯುನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸ್​ ಕಸ್ಟಡಿಯಲ್ಲಿದ್ದಾಗಲೇ ಶೌಚಾಲಯದಲ್ಲಿ ತಮ್ಮ ಒಳ ಉಡುಪು ಬಳಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ದಕ್ಷಿಣ ಕೊರಿಯಾದಲ್ಲಿ ಮಾರ್ಷಲ್ ಕಾನೂನನ್ನು ಹೇರುವುದುರಲ್ಲಿ ಅವರದ್ದು ಪ್ರಮುಖ ಪಾತ್ರವಿತ್ತು ಎಂದು ಆರೋಪಿಸಿ ಬಂಧಿಸಲಾಗಿತ್ತು.

ದಕ್ಷಿಣ ಕೊರಿಯಾ ತಿದ್ದುಪಡಿ ಸೇವೆಯ ಕಮಿಷನರ್ ಜನರಲ್ ಶಿನ್ ಯೋಂಗ್ ಹೈ, ಸಿಯೋಲ್ ಜೈಲಿನಲ್ಲಿ ಕಿಮ್ ತನ್ನನ್ನು ಕೊಲ್ಲಲು ಪ್ರಯತ್ನಿಸಿದ್ದರು, ಆದರೆ ಅವರ ಪ್ರಯತ್ನ ವಿಫಲವಾಗಿದೆ ಎಂದು ಅವರು ಹೇಳಿದರು, ಅವರು ಮಾಜಿ ಸಚಿವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಹೇಳಿದರು.

ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ದಕ್ಷಿಣ ಕೊರಿಯಾದಲ್ಲಿ ಸಮರ ಕಾನೂನನ್ನು ಹೇರಿದರು. ಕೆಲವು ಗಂಟೆಗಳ ನಂತರ, ಸಂಸತ್ತಿನಲ್ಲಿ ಮತ ಚಲಾಯಿಸುವ ಮೂಲಕ ಸಂಸದರು ಅದನ್ನು ತೆಗೆದುಹಾಕಿದರು. ಇದರ ವಿರುದ್ಧ ಬಂಧನಕ್ಕೊಳಗಾಗಿದ್ದ ಮೊದಲ ವ್ಯಕ್ತಿ ಕಿಮ್. ಈ ಮೂಲಕ ಪೂರ್ವ ಏಷ್ಯಾ ದೇಶವನ್ನು ರಾಜಕೀಯ ಬಿಕ್ಕಟ್ಟಿಗೆ ಸಿಲುಕಿಸಿದ್ದಾರೆ ಎಂಬ ಆರೋಪ ಅವರ ಮೇಲಿದೆ.

ಮಾರ್ಷಲ್ ಲಾ ಘೋಷಿಸಲು ಕಿಮ್ ಅಧ್ಯಕ್ಷರಿಗೆ ಸಲಹೆ ನೀಡಿದ್ದರು ಮತ್ತು ಶೀಘ್ರದಲ್ಲೇ ರಕ್ಷಣಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮಾಜಿ ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ಅವರ ಆತ್ಮಹತ್ಯೆಯ ಪ್ರಯತ್ನವನ್ನು ಕೆಲವರು ಒತ್ತಡದಿಂದ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ದಕ್ಷಿಣ ಕೊರಿಯಾದ ರಕ್ಷಣಾ ಸಚಿವ ಕಿಮ್ ರಾಜೀನಾಮೆ

ಏಕೆಂದರೆ ಸಮರ ಕಾನೂನಿನ ಹೇರಿಕೆಯನ್ನು ದೇಶಾದ್ಯಂತ ಟೀಕಿಸಲಾಗುತ್ತಿದೆ ಮತ್ತು ಅದಕ್ಕೆ ಸಂಬಂಧಿಸಿದ ನಾಯಕರು ಸಾರ್ವಜನಿಕ ಕೋಪವನ್ನು ಎದುರಿಸುತ್ತಿದ್ದಾರೆ. ದಂಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಮತ್ತು ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಿಯೋಲ್ ನ್ಯಾಯಾಲಯವು ಕಿಮ್ ಅವರನ್ನು ಬಂಧಿಸಲು ವಾರಂಟ್ ಹೊರಡಿಸಿತು.

ದಕ್ಷಿಣ ಕೊರಿಯಾದಲ್ಲಿ ಸಮರ ಕಾನೂನು? ಸಮರ ಕಾನೂನು ತಾತ್ಕಾಲಿಕ ತುರ್ತುಸ್ಥಿತಿಯ ಒಂದು ರೂಪವಾಗಿದೆ. ಅದನ್ನು ವಿಧಿಸುವಾಗ, ದಕ್ಷಿಣ ಕೊರಿಯಾದ ಅಧ್ಯಕ್ಷರು ದೇಶ ವಿರೋಧಿ ಶಕ್ತಿಗಳ ವಿರುದ್ಧ ಇದು ಅಗತ್ಯ ಎಂದು ವಾದಿಸಿದರು. ಆದಾಗ್ಯೂ, ಈ ಘೋಷಣೆಯ ಕೆಲವೇ ಗಂಟೆಗಳಲ್ಲಿ, ಜನರು ಪ್ರತಿಭಟನೆಯನ್ನು ಪ್ರಾರಂಭಿಸಿದರು ಮತ್ತು ರಾಷ್ಟ್ರೀಯ ಅಸೆಂಬ್ಲಿಯ 190 ಸದಸ್ಯರು ಅದರ ವಿರುದ್ಧ ಮತ ಚಲಾಯಿಸಿದರು. ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ನಡೆದವು. ಈ ಕಾನೂನಿನ ವಿರುದ್ಧ ಸಂಸತ್ತಿನ ಮುಂದೆ ಬೃಹತ್ ಪ್ರತಿಭಟನೆ ನಡೆದಿದ್ದು, ಅದನ್ನು ಹಿಂಪಡೆಯಬೇಕಾಯಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!