AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಹಣ ದುರ್ಬಳಕೆ; ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಬಂಧನ

ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಬಂಧಿಸಲಾಗಿದೆ. ಸೆಪ್ಟೆಂಬರ್ 2023ರಲ್ಲಿ ಅವರು ಶ್ರೀಲಂಕಾದ ಅಧ್ಯಕ್ಷರಾಗಿದ್ದಾಗ ಬ್ರಿಟಿಷ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿಗಾಗಿ ನಡೆದ ಸಮಾರಂಭದಲ್ಲಿ ಭಾಗವಹಿಸಲು ಲಂಡನ್‌ಗೆ ಭೇಟಿ ನೀಡಿದ್ದಕ್ಕಾಗಿ ವಿಚಾರಣೆ ನಡೆಸಿದ ನಂತರ ಅವರನ್ನು ವಶಕ್ಕೆ ಪಡೆಯಲಾಯಿತು.

ಸರ್ಕಾರದ ಹಣ ದುರ್ಬಳಕೆ; ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಬಂಧನ
Ranil Wickremesinghe
ಸುಷ್ಮಾ ಚಕ್ರೆ
|

Updated on: Aug 22, 2025 | 5:41 PM

Share

ನವದೆಹಲಿ, ಆಗಸ್ಟ್ 22: ಶ್ರೀಲಂಕಾದ (Sri Lanka) ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ (Ranil Wickremesinghe) ತಾವು ಅಧ್ಯಕ್ಷರಾಗಿದ್ದಾಗ ಯುನೈಟೆಡ್ ಕಿಂಗ್‌ಡಮ್‌ಗೆ (UK) ನೀಡಿದ ವೈಯಕ್ತಿಕ ಭೇಟಿಗಾಗಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಕುರಿತು ಹೇಳಿಕೆ ದಾಖಲಿಸಲು ಆಗಮಿಸಿದ್ದರು. ಇದಾದ ನಂತರ ಅವರನ್ನು ಕೊಲಂಬೊದಲ್ಲಿ ಕ್ರಿಮಿನಲ್ ತನಿಖಾ ಇಲಾಖೆ (ಸಿಐಡಿ) ಇಂದು ಬಂಧಿಸಿದೆ. 2022ರಿಂದ 2024ರವರೆಗೆ ಶ್ರೀಲಂಕಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರನಿಲ್ ವಿಕ್ರಮಸಿಂಘೆ, ಸೆಪ್ಟೆಂಬರ್ 2023ರಲ್ಲಿ ವೊಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿ ಪ್ರೊಫೆಸರ್ ಮೈತ್ರೀ ವಿಕ್ರಮಸಿಂಘೆ ಅವರ ಪಿಎಚ್‌ಡಿ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸರ್ಕಾರಿ ಹಣವನ್ನು ಬಳಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ.

ಪತ್ನಿಯ ಕಾರ್ಯಕ್ರಮಕ್ಕೆ ತೆರಳಲು ಬಳಸಲಾಗಿದ್ದ ಸರ್ಕಾರಿ ಹಣವನ್ನು ವಾಪಾಸ್ ನೀಡಿದ್ದಾರೆಯೇ ಎಂಬ ಬಗ್ಗೆ ನಡೆಯುತ್ತಿರುವ ತನಿಖೆಯ ಬಳಿಕ ಅನಿರೀಕ್ಷತವಾಗಿ ಅವರನ್ನು ಬಂಧಿಸಲಾಗಿದೆ. ಈ ಬಂಧನವು ನಾಟಕೀಯ ತಿರುವು ಪಡೆದಿದೆ. 76 ವರ್ಷದ ವಿಕ್ರಮಸಿಂಘೆ ಅವರನ್ನು ಅಪರಾಧ ತನಿಖಾ ಇಲಾಖೆ(ಸಿಐಡಿ) ಪ್ರಧಾನ ಕಚೇರಿಯಲ್ಲಿ ಬಂಧಿಸಲಾಗಿದ್ದು, ಸರ್ಕಾರಿ ಹಣ ದುರುಪಯೋಗದ ತನಿಖೆಗೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸಲು ಅವರನ್ನು ಇಲ್ಲಿಗೆ ಕರೆಸಲಾಗಿತ್ತು ಎಂದು ಪೊಲೀಸರು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾದಲ್ಲಿ ಉಪ್ಪಿನ ಬಿಕ್ಕಟ್ಟು; ದ್ವೀಪ ರಾಷ್ಟ್ರಕ್ಕೆ 3,050 ಮೆಟ್ರಿಕ್ ಟನ್ ಉಪ್ಪು ಕಳುಹಿಸಿದ ಭಾರತ

ಕೊಲಂಬೊ ಫೋರ್ಟ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಲಾದ ಪೊಲೀಸ್ ದಾಖಲೆಗಳ ಪ್ರಕಾರ, ಕ್ಯೂಬಾ ಮತ್ತು ಯುನೈಟೆಡ್ ಸ್ಟೇಟ್ಸ್‌ಗೆ ಅಧಿಕೃತ ಭೇಟಿಗಾಗಿ ರನಿಲ್ ವಿಕ್ರಮಸಿಂಘೆ ತೆರಳಿದ್ದರು. ಅಲ್ಲಿಂದ ವಾಪಾಸ್ ಬರುವಾಗ ಹೆಂಡತಿಯ ಕಾರ್ಯಕ್ರಮಕ್ಕಾಗಿ ಸರ್ಕಾರಿ ಹಣದಲ್ಲಿ ಲಂಡನ್​ಗೆ ಪ್ರಯಾಣ ಬೆಳೆಸಿದ್ದರು. ಆದರೆ, ಅವರ ಅಧಿಕೃತ ಭೇಟಿಯ ಪಟ್ಟಿಯಲ್ಲಿ ಇಂಗ್ಲೆಂಡ್ ಪ್ರವಾಸ ಇರಲಿಲ್ಲ ಎಂದು ತಿಳಿದುಬಂದಿದೆ. ಇದಕ್ಕಾಗಿ ಸುಮಾರು 16.9 ಮಿಲಿಯನ್ ರೂ.ಗಳಷ್ಟು ಸಾರ್ವಜನಿಕ ನಿಧಿಯನ್ನು ಬಳಸಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ವಿಕ್ರಮಸಿಂಘೆ ಅವರು ಅಧಿಕೃತ ಕಾರ್ಯಕ್ರಮದ ನಂತರ ಅಮೆರಿಕದಿಂದ ವಾಪಾಸ್ ಬರುವಾಗ ಅವರ ಪತ್ನಿಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸರ್ಕಾರದ ವೆಚ್ಚದಲ್ಲಿ ಯುಕೆಗೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸಿಐಡಿ ಈ ಹಿಂದೆ ಅವರ ಸಿಬ್ಬಂದಿಯ ಪ್ರಯಾಣ ವೆಚ್ಚದ ಬಗ್ಗೆ ವಿಚಾರಣೆ ನಡೆಸಿತ್ತು. ವಿಕ್ರಮಸಿಂಘೆ ಮಾತ್ರವಲ್ಲದೆ ಅವರ ಜೊತೆ ತೆರಳಿದ್ದ 10 ಸದಸ್ಯರ ನಿಯೋಗ ಕೂಡ ಇಂಗ್ಲೆಂಡ್​ಗೆ ಸರ್ಕಾರದ ವೆಚ್ಚದಲ್ಲಿ ಪ್ರಯಾಣಿಸಿತ್ತು. ಆದರೆ, ವಿಕ್ರಮಸಿಂಘೆ ಅವರ ಕಚೇರಿ ಈ ಆರೋಪಗಳನ್ನು ತಳ್ಳಿಹಾಕಿದೆ.

ಇದನ್ನೂ ಓದಿ: ಟ್ರಂಪ್ ಭಾರತದ ಚುನಾವಣೆಗೆ 21 ಮಿಲಿಯನ್ ಡಾಲರ್ ಹಣ ನೀಡಿಲ್ಲ ಎಂದ ಅಮೆರಿಕ ರಾಯಭಾರ ಕಚೇರಿ!

ವಿಕ್ರಮಸಿಂಘೆ ಅವರು ಜುಲೈ 2022 ರಿಂದ ಸೆಪ್ಟೆಂಬರ್ 2024 ರವರೆಗೆ ಶ್ರೀಲಂಕಾ ಅಧ್ಯಕ್ಷರಾಗಿದ್ದರು. ಅನುಭವಿ ರಾಜಕಾರಣಿ ಶ್ರೀಲಂಕಾದ ಪ್ರಧಾನಿಯಾಗಿಯೂ 6 ಬಾರಿ ಸೇವೆ ಸಲ್ಲಿಸಿದ್ದಾರೆ. ಸಿಐಡಿ ಜಾಮೀನು ವಿಚಾರಣೆಗಾಗಿ ಕೊಲಂಬೊ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ರನಿಲ್ ವಿಕ್ರಮಸಿಂಘೆ ಅವರನ್ನು ಹಾಜರುಪಡಿಸುವ ನಿರೀಕ್ಷೆಯಿದೆ. ಈ ಬಂಧನವು ಶ್ರೀಲಂಕಾದ ಭ್ರಷ್ಟಾಚಾರ ವಿರೋಧಿ ಅಭಿಯಾನದಲ್ಲಿ ಹೊಸ ಹಂತವನ್ನು ಸೂಚಿಸುತ್ತದೆ ಎಂದು ಕಾನೂನು ತಜ್ಞರು ಹೇಳುತ್ತಿದ್ದು, ಮುಂಬರುವ ತಿಂಗಳುಗಳಲ್ಲಿ ಇನ್ನಷ್ಟು ಉನ್ನತ ವ್ಯಕ್ತಿಗಳು ತನಿಖೆಗೆ ಒಳಪಡುವ ಸಾಧ್ಯತೆಯಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್