AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ ಬೋರಿಸ್​ ಜಾನ್ಸನ್; ಬಲವಂತದ ಕ್ರಮ ಎಂದ ಬ್ರಿಟನ್ ಮಾಜಿ ಪ್ರಧಾನಿ

ಪಾರ್ಟಿಗೇಟ್ ಹಗರಣದಲ್ಲಿ ಈಗಾಗಲೇ ಜಾನ್ಸನ್ ವಿರುದ್ಧ ಸಂಸದೀಯ ಸಮಿತಿ ವರದಿ ಸಲ್ಲಿಸಿದ್ದು, ಅವರು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ ಬೋರಿಸ್​ ಜಾನ್ಸನ್; ಬಲವಂತದ ಕ್ರಮ ಎಂದ ಬ್ರಿಟನ್ ಮಾಜಿ ಪ್ರಧಾನಿ
ಬೋರಿಸ್​ ಜಾನ್ಸನ್
Ganapathi Sharma
|

Updated on: Jun 10, 2023 | 11:31 AM

Share

ಲಂಡನ್: ಬ್ರಿಟನ್​ ಮಾಜಿ ಪ್ರಧಾನಿ ಬೋರಿಸ್​ ಜಾನ್ಸನ್ (Boris Johnson) ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಪಾರ್ಟಿಗೇಟ್ ಹಗರಣಕ್ಕೆ ಸಂಬಂಧಿಸಿ ಬಲವಂತದಿಂದ ತಾವು ರಾಜೀನಾಮೆ ನೀಡುವಂತೆ ಮಾಡಲಾಯಿತು ಎಂದು ಅವರು ಹೇಳಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಸಂತೋಷಕೂಟಗಳನ್ನು ಆಯೋಜಿಸಿದ್ದ ಬಗ್ಗೆ ಜಾನ್ಸನ್ ಅವರು ಸಂಸತ್​ಗೆ ತಪ್ಪು ಮಾಹಿತಿ ನೀಡಿದ್ದರು ಎಂಬ ಆರೋಪ ಅವರ ಮೇಲಿದೆ. ಇದು ಪಾರ್ಟಿಗೇಟ್ ಹಗರಣ ಎಂಬ ಹೆಸರಿನಲ್ಲಿ ಬ್ರಿಟನ್​​ನಲ್ಲಿ ದೊಡ್ಡ ಸುದ್ದಿಯಾಗಿತ್ತು. ನಂತರ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕಾಗಿ ಬಂದಿತ್ತು.

ಪಾರ್ಟಿಗೇಟ್ ಹಗರಣದಲ್ಲಿ ಈಗಾಗಲೇ ಜಾನ್ಸನ್ ವಿರುದ್ಧ ಸಂಸದೀಯ ಸಮಿತಿ ವರದಿ ಸಲ್ಲಿಸಿದ್ದು, ಅವರು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ವರದಿ ಬಿಡುಗಡೆಗೂ ಮೊದಲೇ ಜಾನ್ಸನ್ ಅವರು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ನಾನು ಎಲ್ಲಿಯೂ ಸುಳ್ಳು ಹೇಳಿಲ್ಲ. ನನ್ನ ವಿರುದ್ಧ ಪಿತೂರಿ ನಡೆದಿದೆ ಎಂದು ದೂರಿದ್ದಾರೆ.

ಆದರೆ, ಸದನದ ದಿಕ್ಕುತಪ್ಪಿಸುವ ಪ್ರಮಾದ ಎಸಗಿದ್ದಕ್ಕಾಗಿ ಬೋರಿಸ್ ಜಾನ್ಸನ್ ಅವರು ಮಾರ್ಚ್​​​ನಲ್ಲಿ ಕ್ಷಮೆಯಾಚಿಸಿದ್ದರು.

ಇದನ್ನೂ ಓದಿ: ಲಾಕ್​ಡೌನ್ ಸಮಯದಲ್ಲಿ ನಡೆದ ಪಾರ್ಟಿಯೊಂದರಲ್ಲಿ ಯುಕೆ ಮಾಜಿ ಪ್ರಧಾನಿ ಬೊರಿಸ್ ಜಾನ್ಸನ್ ಸಿಬ್ಬಂದಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು!

2021 ರ ಏಪ್ರಿಲ್​​​ನಲ್ಲಿ ಕೋವಿಡ್​​​ಗೆ ಸಂಬಂಧಿಸಿದ ನಿಬಂಧನೆಗಳು ಇನ್ನೂ ಜಾರಿಯಲ್ಲಿದ್ದಾಗ ಬ್ರಿಟನನ್ನಿನ ರಾಜಕುಮಾರ ಫಿಲಿಪ್ ಅವರ ಅಂತ್ಯಸಂಸ್ಕಾರದ ಮುನ್ನಾದಿನ ಜಾನ್ಸನ್ ಅವರ ಸಿಬ್ಬಂದಿಯ ಪೈಕಿ ಕೆಲವರು ಡೌನಿಂಗ್ ಸ್ಟ್ರೀಟ್ ಕಚೇರಿಯಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ನಡೆದ ಪಾರ್ಟಿಯಲ್ಲಿ ರತಿಕ್ರೀಡೆ ನಡೆಸಿದ್ದರು ಎಂದು ಕೆಲವು ಮೂಲಗಳನ್ನು ಆಧರಿಸಿ ಮಾಧ್ಯಮಗಳು ವರದಿ ಮಾಡಿದ್ದವು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ