AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ ಬೋರಿಸ್​ ಜಾನ್ಸನ್; ಬಲವಂತದ ಕ್ರಮ ಎಂದ ಬ್ರಿಟನ್ ಮಾಜಿ ಪ್ರಧಾನಿ

ಪಾರ್ಟಿಗೇಟ್ ಹಗರಣದಲ್ಲಿ ಈಗಾಗಲೇ ಜಾನ್ಸನ್ ವಿರುದ್ಧ ಸಂಸದೀಯ ಸಮಿತಿ ವರದಿ ಸಲ್ಲಿಸಿದ್ದು, ಅವರು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ ಬೋರಿಸ್​ ಜಾನ್ಸನ್; ಬಲವಂತದ ಕ್ರಮ ಎಂದ ಬ್ರಿಟನ್ ಮಾಜಿ ಪ್ರಧಾನಿ
ಬೋರಿಸ್​ ಜಾನ್ಸನ್
Ganapathi Sharma
|

Updated on: Jun 10, 2023 | 11:31 AM

Share

ಲಂಡನ್: ಬ್ರಿಟನ್​ ಮಾಜಿ ಪ್ರಧಾನಿ ಬೋರಿಸ್​ ಜಾನ್ಸನ್ (Boris Johnson) ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಪಾರ್ಟಿಗೇಟ್ ಹಗರಣಕ್ಕೆ ಸಂಬಂಧಿಸಿ ಬಲವಂತದಿಂದ ತಾವು ರಾಜೀನಾಮೆ ನೀಡುವಂತೆ ಮಾಡಲಾಯಿತು ಎಂದು ಅವರು ಹೇಳಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಸಂತೋಷಕೂಟಗಳನ್ನು ಆಯೋಜಿಸಿದ್ದ ಬಗ್ಗೆ ಜಾನ್ಸನ್ ಅವರು ಸಂಸತ್​ಗೆ ತಪ್ಪು ಮಾಹಿತಿ ನೀಡಿದ್ದರು ಎಂಬ ಆರೋಪ ಅವರ ಮೇಲಿದೆ. ಇದು ಪಾರ್ಟಿಗೇಟ್ ಹಗರಣ ಎಂಬ ಹೆಸರಿನಲ್ಲಿ ಬ್ರಿಟನ್​​ನಲ್ಲಿ ದೊಡ್ಡ ಸುದ್ದಿಯಾಗಿತ್ತು. ನಂತರ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕಾಗಿ ಬಂದಿತ್ತು.

ಪಾರ್ಟಿಗೇಟ್ ಹಗರಣದಲ್ಲಿ ಈಗಾಗಲೇ ಜಾನ್ಸನ್ ವಿರುದ್ಧ ಸಂಸದೀಯ ಸಮಿತಿ ವರದಿ ಸಲ್ಲಿಸಿದ್ದು, ಅವರು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ವರದಿ ಬಿಡುಗಡೆಗೂ ಮೊದಲೇ ಜಾನ್ಸನ್ ಅವರು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ನಾನು ಎಲ್ಲಿಯೂ ಸುಳ್ಳು ಹೇಳಿಲ್ಲ. ನನ್ನ ವಿರುದ್ಧ ಪಿತೂರಿ ನಡೆದಿದೆ ಎಂದು ದೂರಿದ್ದಾರೆ.

ಆದರೆ, ಸದನದ ದಿಕ್ಕುತಪ್ಪಿಸುವ ಪ್ರಮಾದ ಎಸಗಿದ್ದಕ್ಕಾಗಿ ಬೋರಿಸ್ ಜಾನ್ಸನ್ ಅವರು ಮಾರ್ಚ್​​​ನಲ್ಲಿ ಕ್ಷಮೆಯಾಚಿಸಿದ್ದರು.

ಇದನ್ನೂ ಓದಿ: ಲಾಕ್​ಡೌನ್ ಸಮಯದಲ್ಲಿ ನಡೆದ ಪಾರ್ಟಿಯೊಂದರಲ್ಲಿ ಯುಕೆ ಮಾಜಿ ಪ್ರಧಾನಿ ಬೊರಿಸ್ ಜಾನ್ಸನ್ ಸಿಬ್ಬಂದಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು!

2021 ರ ಏಪ್ರಿಲ್​​​ನಲ್ಲಿ ಕೋವಿಡ್​​​ಗೆ ಸಂಬಂಧಿಸಿದ ನಿಬಂಧನೆಗಳು ಇನ್ನೂ ಜಾರಿಯಲ್ಲಿದ್ದಾಗ ಬ್ರಿಟನನ್ನಿನ ರಾಜಕುಮಾರ ಫಿಲಿಪ್ ಅವರ ಅಂತ್ಯಸಂಸ್ಕಾರದ ಮುನ್ನಾದಿನ ಜಾನ್ಸನ್ ಅವರ ಸಿಬ್ಬಂದಿಯ ಪೈಕಿ ಕೆಲವರು ಡೌನಿಂಗ್ ಸ್ಟ್ರೀಟ್ ಕಚೇರಿಯಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ನಡೆದ ಪಾರ್ಟಿಯಲ್ಲಿ ರತಿಕ್ರೀಡೆ ನಡೆಸಿದ್ದರು ಎಂದು ಕೆಲವು ಮೂಲಗಳನ್ನು ಆಧರಿಸಿ ಮಾಧ್ಯಮಗಳು ವರದಿ ಮಾಡಿದ್ದವು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​