AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ ಬೋರಿಸ್​ ಜಾನ್ಸನ್; ಬಲವಂತದ ಕ್ರಮ ಎಂದ ಬ್ರಿಟನ್ ಮಾಜಿ ಪ್ರಧಾನಿ

ಪಾರ್ಟಿಗೇಟ್ ಹಗರಣದಲ್ಲಿ ಈಗಾಗಲೇ ಜಾನ್ಸನ್ ವಿರುದ್ಧ ಸಂಸದೀಯ ಸಮಿತಿ ವರದಿ ಸಲ್ಲಿಸಿದ್ದು, ಅವರು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ ಬೋರಿಸ್​ ಜಾನ್ಸನ್; ಬಲವಂತದ ಕ್ರಮ ಎಂದ ಬ್ರಿಟನ್ ಮಾಜಿ ಪ್ರಧಾನಿ
ಬೋರಿಸ್​ ಜಾನ್ಸನ್
ಗಣಪತಿ ಶರ್ಮಾ
|

Updated on: Jun 10, 2023 | 11:31 AM

Share

ಲಂಡನ್: ಬ್ರಿಟನ್​ ಮಾಜಿ ಪ್ರಧಾನಿ ಬೋರಿಸ್​ ಜಾನ್ಸನ್ (Boris Johnson) ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಪಾರ್ಟಿಗೇಟ್ ಹಗರಣಕ್ಕೆ ಸಂಬಂಧಿಸಿ ಬಲವಂತದಿಂದ ತಾವು ರಾಜೀನಾಮೆ ನೀಡುವಂತೆ ಮಾಡಲಾಯಿತು ಎಂದು ಅವರು ಹೇಳಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಸಂತೋಷಕೂಟಗಳನ್ನು ಆಯೋಜಿಸಿದ್ದ ಬಗ್ಗೆ ಜಾನ್ಸನ್ ಅವರು ಸಂಸತ್​ಗೆ ತಪ್ಪು ಮಾಹಿತಿ ನೀಡಿದ್ದರು ಎಂಬ ಆರೋಪ ಅವರ ಮೇಲಿದೆ. ಇದು ಪಾರ್ಟಿಗೇಟ್ ಹಗರಣ ಎಂಬ ಹೆಸರಿನಲ್ಲಿ ಬ್ರಿಟನ್​​ನಲ್ಲಿ ದೊಡ್ಡ ಸುದ್ದಿಯಾಗಿತ್ತು. ನಂತರ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕಾಗಿ ಬಂದಿತ್ತು.

ಪಾರ್ಟಿಗೇಟ್ ಹಗರಣದಲ್ಲಿ ಈಗಾಗಲೇ ಜಾನ್ಸನ್ ವಿರುದ್ಧ ಸಂಸದೀಯ ಸಮಿತಿ ವರದಿ ಸಲ್ಲಿಸಿದ್ದು, ಅವರು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ವರದಿ ಬಿಡುಗಡೆಗೂ ಮೊದಲೇ ಜಾನ್ಸನ್ ಅವರು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ನಾನು ಎಲ್ಲಿಯೂ ಸುಳ್ಳು ಹೇಳಿಲ್ಲ. ನನ್ನ ವಿರುದ್ಧ ಪಿತೂರಿ ನಡೆದಿದೆ ಎಂದು ದೂರಿದ್ದಾರೆ.

ಆದರೆ, ಸದನದ ದಿಕ್ಕುತಪ್ಪಿಸುವ ಪ್ರಮಾದ ಎಸಗಿದ್ದಕ್ಕಾಗಿ ಬೋರಿಸ್ ಜಾನ್ಸನ್ ಅವರು ಮಾರ್ಚ್​​​ನಲ್ಲಿ ಕ್ಷಮೆಯಾಚಿಸಿದ್ದರು.

ಇದನ್ನೂ ಓದಿ: ಲಾಕ್​ಡೌನ್ ಸಮಯದಲ್ಲಿ ನಡೆದ ಪಾರ್ಟಿಯೊಂದರಲ್ಲಿ ಯುಕೆ ಮಾಜಿ ಪ್ರಧಾನಿ ಬೊರಿಸ್ ಜಾನ್ಸನ್ ಸಿಬ್ಬಂದಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು!

2021 ರ ಏಪ್ರಿಲ್​​​ನಲ್ಲಿ ಕೋವಿಡ್​​​ಗೆ ಸಂಬಂಧಿಸಿದ ನಿಬಂಧನೆಗಳು ಇನ್ನೂ ಜಾರಿಯಲ್ಲಿದ್ದಾಗ ಬ್ರಿಟನನ್ನಿನ ರಾಜಕುಮಾರ ಫಿಲಿಪ್ ಅವರ ಅಂತ್ಯಸಂಸ್ಕಾರದ ಮುನ್ನಾದಿನ ಜಾನ್ಸನ್ ಅವರ ಸಿಬ್ಬಂದಿಯ ಪೈಕಿ ಕೆಲವರು ಡೌನಿಂಗ್ ಸ್ಟ್ರೀಟ್ ಕಚೇರಿಯಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ನಡೆದ ಪಾರ್ಟಿಯಲ್ಲಿ ರತಿಕ್ರೀಡೆ ನಡೆಸಿದ್ದರು ಎಂದು ಕೆಲವು ಮೂಲಗಳನ್ನು ಆಧರಿಸಿ ಮಾಧ್ಯಮಗಳು ವರದಿ ಮಾಡಿದ್ದವು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ