AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ ಬೋರಿಸ್​ ಜಾನ್ಸನ್; ಬಲವಂತದ ಕ್ರಮ ಎಂದ ಬ್ರಿಟನ್ ಮಾಜಿ ಪ್ರಧಾನಿ

ಪಾರ್ಟಿಗೇಟ್ ಹಗರಣದಲ್ಲಿ ಈಗಾಗಲೇ ಜಾನ್ಸನ್ ವಿರುದ್ಧ ಸಂಸದೀಯ ಸಮಿತಿ ವರದಿ ಸಲ್ಲಿಸಿದ್ದು, ಅವರು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ ಬೋರಿಸ್​ ಜಾನ್ಸನ್; ಬಲವಂತದ ಕ್ರಮ ಎಂದ ಬ್ರಿಟನ್ ಮಾಜಿ ಪ್ರಧಾನಿ
ಬೋರಿಸ್​ ಜಾನ್ಸನ್
ಗಣಪತಿ ಶರ್ಮಾ
|

Updated on: Jun 10, 2023 | 11:31 AM

Share

ಲಂಡನ್: ಬ್ರಿಟನ್​ ಮಾಜಿ ಪ್ರಧಾನಿ ಬೋರಿಸ್​ ಜಾನ್ಸನ್ (Boris Johnson) ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಪಾರ್ಟಿಗೇಟ್ ಹಗರಣಕ್ಕೆ ಸಂಬಂಧಿಸಿ ಬಲವಂತದಿಂದ ತಾವು ರಾಜೀನಾಮೆ ನೀಡುವಂತೆ ಮಾಡಲಾಯಿತು ಎಂದು ಅವರು ಹೇಳಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಸಂತೋಷಕೂಟಗಳನ್ನು ಆಯೋಜಿಸಿದ್ದ ಬಗ್ಗೆ ಜಾನ್ಸನ್ ಅವರು ಸಂಸತ್​ಗೆ ತಪ್ಪು ಮಾಹಿತಿ ನೀಡಿದ್ದರು ಎಂಬ ಆರೋಪ ಅವರ ಮೇಲಿದೆ. ಇದು ಪಾರ್ಟಿಗೇಟ್ ಹಗರಣ ಎಂಬ ಹೆಸರಿನಲ್ಲಿ ಬ್ರಿಟನ್​​ನಲ್ಲಿ ದೊಡ್ಡ ಸುದ್ದಿಯಾಗಿತ್ತು. ನಂತರ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕಾಗಿ ಬಂದಿತ್ತು.

ಪಾರ್ಟಿಗೇಟ್ ಹಗರಣದಲ್ಲಿ ಈಗಾಗಲೇ ಜಾನ್ಸನ್ ವಿರುದ್ಧ ಸಂಸದೀಯ ಸಮಿತಿ ವರದಿ ಸಲ್ಲಿಸಿದ್ದು, ಅವರು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ವರದಿ ಬಿಡುಗಡೆಗೂ ಮೊದಲೇ ಜಾನ್ಸನ್ ಅವರು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ನಾನು ಎಲ್ಲಿಯೂ ಸುಳ್ಳು ಹೇಳಿಲ್ಲ. ನನ್ನ ವಿರುದ್ಧ ಪಿತೂರಿ ನಡೆದಿದೆ ಎಂದು ದೂರಿದ್ದಾರೆ.

ಆದರೆ, ಸದನದ ದಿಕ್ಕುತಪ್ಪಿಸುವ ಪ್ರಮಾದ ಎಸಗಿದ್ದಕ್ಕಾಗಿ ಬೋರಿಸ್ ಜಾನ್ಸನ್ ಅವರು ಮಾರ್ಚ್​​​ನಲ್ಲಿ ಕ್ಷಮೆಯಾಚಿಸಿದ್ದರು.

ಇದನ್ನೂ ಓದಿ: ಲಾಕ್​ಡೌನ್ ಸಮಯದಲ್ಲಿ ನಡೆದ ಪಾರ್ಟಿಯೊಂದರಲ್ಲಿ ಯುಕೆ ಮಾಜಿ ಪ್ರಧಾನಿ ಬೊರಿಸ್ ಜಾನ್ಸನ್ ಸಿಬ್ಬಂದಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು!

2021 ರ ಏಪ್ರಿಲ್​​​ನಲ್ಲಿ ಕೋವಿಡ್​​​ಗೆ ಸಂಬಂಧಿಸಿದ ನಿಬಂಧನೆಗಳು ಇನ್ನೂ ಜಾರಿಯಲ್ಲಿದ್ದಾಗ ಬ್ರಿಟನನ್ನಿನ ರಾಜಕುಮಾರ ಫಿಲಿಪ್ ಅವರ ಅಂತ್ಯಸಂಸ್ಕಾರದ ಮುನ್ನಾದಿನ ಜಾನ್ಸನ್ ಅವರ ಸಿಬ್ಬಂದಿಯ ಪೈಕಿ ಕೆಲವರು ಡೌನಿಂಗ್ ಸ್ಟ್ರೀಟ್ ಕಚೇರಿಯಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ನಡೆದ ಪಾರ್ಟಿಯಲ್ಲಿ ರತಿಕ್ರೀಡೆ ನಡೆಸಿದ್ದರು ಎಂದು ಕೆಲವು ಮೂಲಗಳನ್ನು ಆಧರಿಸಿ ಮಾಧ್ಯಮಗಳು ವರದಿ ಮಾಡಿದ್ದವು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ