AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಲಿಫೋರ್ನಿಯಾದಲ್ಲಿ 8 ತಿಂಗಳ ಹೆಣ್ಣು ಮಗು ಸೇರಿ ಭಾರತ ಮೂಲದ ನಾಲ್ವರ ಅಪಹರಣ

ಕ್ಯಾಲಿಫೋರ್ನಿಯಾದಲ್ಲಿ 8 ತಿಂಗಳ ಹೆಣ್ಣು ಮಗು ಸೇರಿ ಭಾರತ ಮೂಲದ ನಾಲ್ವರ ಅಪಹರಣ ಮಾಡಲಾಗಿದೆ. ಕಿಡ್ನ್ಯಾಪ್ ಮಾಡಿದವರು ಅತ್ಯಂತ ಅಪಾಯಕಾರಿ ಮತ್ತು ಶಸ್ತ್ರಸಜ್ಜಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ಯಾಲಿಫೋರ್ನಿಯಾದಲ್ಲಿ 8 ತಿಂಗಳ ಹೆಣ್ಣು ಮಗು ಸೇರಿ ಭಾರತ ಮೂಲದ ನಾಲ್ವರ ಅಪಹರಣ
ಕ್ಯಾಲಿಫೋರ್ನಿಯಾದಲ್ಲಿ 8 ತಿಂಗಳ ಹೆಣ್ಣು ಮಗು ಸೇರಿ ಭಾರತ ಮೂಲದ ನಾಲ್ವರ ಅಪಹರಣ
Follow us
TV9 Web
| Updated By: ಆಯೇಷಾ ಬಾನು

Updated on: Oct 04, 2022 | 3:18 PM

ವಾಷಿಂಗ್ಟನ್: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕ್ಯಾಲಿಫೋರ್ನಿಯಾದ ಮರ್ಸೆಡ್​​ ಸಿಟಿಯಲ್ಲಿ ಭಾರತೀಯ ಮೂಲದ ನಾಲ್ವರನ್ನು ಸೋಮವಾರ ಕಿಡ್ನ್ಯಾಪ್ ಮಾಡಲಾಗಿದೆ. ಇದರಲ್ಲಿ 8 ತಿಂಗಳ ಹೆಣ್ಣು ಮಗುವೂ ಸೇರಿದೆ. ಜಶ್​ದೀಪ್​ ಸಿಂಗ್​ ಹಾಗೂ ಪತ್ನಿ ಜಸ್ಲೀನ್​ ಕೌರ್​ ಮತ್ತು ಆಕೆಯ ಎಂಟು ತಿಂಗಳ ಮಗಳು ಅರೋಹಿ ಧೇರಿ, ಅಮನ್​ದೀಪ್​ ಸಿಂಗ್ ಸೇರಿ ನಾಲ್ವರ ಅಪಹರಣ ಆಗಿದೆ. ಇನ್ನು ಕಿಡ್ನ್ಯಾಪ್ ಮಾಡಿದವರು ಅತ್ಯಂತ ಅಪಾಯಕಾರಿ ಮತ್ತು ಶಸ್ತ್ರಸಜ್ಜಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸದ್ಯ ಈ ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಹೊರ ಬರಬೇಕಿದೆ. ಆದರೆ ದಕ್ಷಿಣ ಹೆದ್ದಾರಿ 59 ರ 800 ಬ್ಲಾಕ್‌ನಿಂದ 4 ಜನರನ್ನು ಬಲವಂತವಾಗಿ ಅಪಹರಿಸಲಾಗಿದೆ. ಚಿಲ್ಲರೆ ವ್ಯಾಪಾರಿಗಳು ಮತ್ತು ರೆಸ್ಟೋರೆಂಟ್‌ಗಳು ಇರುವ ಹೆಚ್ಚು ಜನ ಓಡಾಡುವ ಪ್ರದೇಶದಿಂದಲೇ ಈ ಕುಟುಂಬವನ್ನು ಅಪಹರಿಸಲಾಗಿದೆ. ಅಪಹರಣಕಾರರ ಹೆಸರು ಮತ್ತು ಅವರ ಉದ್ದೇಶವೇನು ಎಂಬುದನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಕಿಡ್ನ್ಯಾಪರ್ಸ್​ಗಳ ಬಗ್ಗೆ ಮಾಹಿತಿ ಇದ್ದರೆ 911ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಲು ಸ್ಥಳೀಯರಿಗೆ ತಿಳಿಸಲಾಗಿದೆ. ಇದನ್ನೂ ಓದಿ: ‘ಸೌತ್​ ಇಂಡಿಯನ್​ ಹೀರೋ’ ಬಗ್ಗೆ ನಿಮಗೆಷ್ಟು ಗೊತ್ತು? ಇವನ ಅವತಾರ ಒಂದೆರಡಲ್ಲ

2019 ರ ಹಿಂದೆ ಇದೇ ರೀತಿಯ ಘಟನೆಯೊಂದರಲ್ಲಿ, ಭಾರತೀಯ ಮೂಲದ ಉದ್ಯಮಿ ತುಷಾರ್ ಅತ್ರೆ ತನ್ನ ಗೆಳತಿಯ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದರು. ಅವರು ಡಿಜಿಟಲ್ ಮಾರ್ಕೆಟಿಂಗ್ ಕಂಪನಿಯ ಮಾಲೀಕರಾಗಿದ್ದರು. ಕ್ಯಾಲಿಫೋರ್ನಿಯಾದ ಅವರ ಐಷಾರಾಮಿ ಮನೆಯಿಂದ ಅವರನ್ನು ಅಪಹರಿಸಲಾಗಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ