Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಾನ್ಸ್: ಅಧ್ಯಕ್ಷರಾಗಿ 2ನೇ ಅವಧಿಗೆ ಮುಂದುವರಿದ ಎಮ್ಯಾನುಯೆಲ್‌ ಮ್ಯಾಕ್ರನ್‌, ಬಲಪಂಥೀಯ ನಾಯಕಿ ಲೆ ಪೆನ್​ ಸೋಲು

French Presidential Election 2022 Results: ತಮ್ಮ ಎದುರಾಳಿಯಾಗಿದ್ದ ಬಲಪಂಥೀಯ ನಾಯಕಿ ಮರೀನ್ ಲೆ ಪೆನ್ ಅವರನ್ನು ನಿರ್ಣಾಯಕವಾಗಿ ಸೋಲಿಸುವ ಮೂಲಕ ಐರೋಪ್ಯ ದೇಶಗಳನ್ನು ಆವರಿಸಿಕೊಳ್ಳುತ್ತಿದ್ದ ಕಟ್ಟರ್ ಬಲಪಂಥೀಯ ಚಳವಳಿಗೆ ತಡೆಯೊಡ್ಡಿದ್ದಾರೆ.

ಫ್ರಾನ್ಸ್: ಅಧ್ಯಕ್ಷರಾಗಿ 2ನೇ ಅವಧಿಗೆ ಮುಂದುವರಿದ ಎಮ್ಯಾನುಯೆಲ್‌ ಮ್ಯಾಕ್ರನ್‌, ಬಲಪಂಥೀಯ ನಾಯಕಿ ಲೆ ಪೆನ್​ ಸೋಲು
ಫ್ರಾನ್ಸ್ನ ಅಧ್ಯಕ್ಷರಾಗಿ ಪುನರಾಯ್ಕೆಯಾದ ಎಮ್ಯಾನುಯೆಲ್‌ ಮ್ಯಾಕ್ರನ್‌
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Apr 25, 2022 | 9:41 AM

ಪ್ಯಾರೀಸ್: ಫ್ರಾನ್ಸ್​ನ ಅಧ್ಯಕ್ಷೀಯ ಚುನಾವಣಾ ಪ್ರಕ್ರಿಯೆ ಭಾನುವಾರ ಪೂರ್ಣಗೊಂಡಿದೆ. ಹಾಲಿ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಸತತ 2ನೇ ಅವಧಿಗೆ ಪುನರಾಯ್ಕೆಯಾಗಿದ್ದಾರೆ. ತಮ್ಮ ಎದುರಾಳಿಯಾಗಿದ್ದ ಬಲಪಂಥೀಯ ನಾಯಕಿ ಮರೀನ್ ಲೆ ಪೆನ್ ಅವರನ್ನು ನಿರ್ಣಾಯಕವಾಗಿ ಸೋಲಿಸುವ ಮೂಲಕ ಐರೋಪ್ಯ ದೇಶಗಳನ್ನು ಆವರಿಸಿಕೊಳ್ಳುತ್ತಿದ್ದ ಕಟ್ಟರ್ ಬಲಪಂಥೀಯ ಚಳವಳಿಗೆ ತಡೆಯೊಡ್ಡಿದ್ದಾರೆ. ಚಲಾವಣೆಯಾಗಿದ್ದ ಒಟ್ಟು ಮತಗಳ ಪೈಕಿ ಶೇ 58ರಷ್ಟು ಮ್ಯಾಕ್ರನ್ ಪರವಾಗಿ, ಶೇ 42ರಷ್ಟು ಲೆ ಪೆನ್ ಪರವಾಗಿದ್ದವು. ಕಳೆದ 20 ವರ್ಷಗಳ ಅವಧಿಯಲ್ಲಿ 2ನೇ ಅವಧಿಗೆ ಅಧಿಕಾರ ಉಳಿಸಿಕೊಂಡ ಏಕೈಕ ಅಧ್ಯಕ್ಷ ಮ್ಯಾಕ್ರನ್. ಉದಾರವಾದಕ್ಕೆ ಹೆಸರುವಾಸಿಯಾದ ಫ್ರಾನ್ಸ್​ನಲ್ಲಿ ಸಂಪ್ರದಾಯವಾದಿ ಬಲಪಂಥೀಯರ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಫ್ರಾನ್ಸ್​ನಲ್ಲಿ ಇತ್ತೀಚಿನ ದಿನಗಳಲ್ಲಿ ಬಿರುಕು ಹೆಚ್ಚಾಗಿದ್ದು, ಹಲವು ವಿಚಾರಗಳಲ್ಲಿ ಭಿನ್ನಮತ ತಲೆದೋರುತ್ತಿದೆ. ಬಲಪಂಥೀಯ ಚಳವಳಿಗೆ ಜನಮನ್ನಣೆ ಸಿಗುತ್ತಿರುವ ಅಂಶವನ್ನೂ ಈ ಫಲಿತಾಂಶ ಎತ್ತಿ ತೋರಿಸಿದೆ.

ಇದೀಗ 44ರ ಹರೆಯಲ್ಲಿರುವ ಎಮ್ಯಾನುಯೆಲ್ ಮ್ಯಾಕ್ರನ್​ಗೆ ಈ ಗೆಲುವು ಸುಲಭವಾಗಿರಲಿಲ್ಲ. ಫ್ರಾನ್ಸ್​ನಲ್ಲಿ ಸುಧಾರಣೆ ಆರಂಭಿಸುವ ಕನಸು ಬಿತ್ತಿರುವ ಮ್ಯಾಕ್ರನ್ ಕಳೆದ ಜೂನ್​ನಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿಯೂ ಪ್ರಬಲ ಪೈಪೋಟಿ ಎದುರಿಸಬೇಕಾಯಿತು. ಸಂಸತ್ತಿನಲ್ಲಿ ಬಹುಮತ ಹೊಂದುವುದು ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸುಲಭವಾಗುತ್ತದೆ. ಹೀಗಾಗಿಯೇ ಇಬ್ಬರೂ ಅಭ್ಯರ್ಥಿಗಳು ಸಂಸತ್ತಿನಲ್ಲಿ ಪಕ್ಷದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಬೇಕು ಎಂದು ಇಬ್ಬರೂ ಬಯಸಿದ್ದರು.

ಫ್ಯಾರೀಸ್​ನ ವಿಶ್ವಪ್ರಸಿದ್ಧ ಐಫೆಲ್ ಟವರ್​ನ ಸಮೀಪವೇ ವಿಜಯೋತ್ಸವ ಆಚರಿಸಿದ ಮ್ಯಾಕ್ರನ್, ತಮ್ಮನ್ನು ವಿರೋಧಿಸಿದ ಮತದಾರರ ಸಿಟ್ಟು ಕಡಿಮೆ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳುತ್ತೇನೆ. ಸಚಿವ ಸಂಪುಟವನ್ನು ಹೊಸದಾಗಿ ರಚಿಸಲಾಗುವುದು. ಎಲ್ಲ ಹಳಬರಿಗೆ ಅಧಿಕಾರ ಸಿಗುವುದಿಲ್ಲ ಎಂದು ಹೇಳಿದರು. ‘ಹಿಂದಿನ ಅವಧಿಯ ಅಧಿಕಾರದ ಮುಂದುವರಿಕೆ ಇದಲ್ಲ. ಆಡಳಿತದಲ್ಲಿ ಆಮೂಲಾಗ್ರ ಬದಲಾವಣೆ ತರಲು ನಾವು ಉದ್ದೇಶಿಸುತ್ತಿದ್ದೇವೆ. ಬದಲಾವಣೆ ಶೀಘ್ರ ಜನರ ಅರಿವಿಗೆ ಬರುತ್ತದೆ’ ಎಂದು ಹೇಳಿದರು.

ಪರಾಜಿತ ಬಲಪಂಥೀಯ ಅಭ್ಯರ್ಥಿ ಲೆ ಪೆನ್ ಸಹ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಭಾಷಣ ಮಾಡಿ, ರಾಜಕಾರಣ ತೊರೆಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಜೂನ್ ತಿಂಗಳಲ್ಲಿ ನಡೆಯಲಿರುವ ಮತ್ತೊಂದು ಶಾಸಕಾಂಗ ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ. ನನಗೆ ಅಧ್ಯಕ್ಷ ಸ್ಥಾನಕ್ಕೆ ಬೇಕಿರುವಷ್ಟು ಮತ ಸಿಗದಿರಬಹುದು. ಆದರೂ ಇದು ನಮ್ಮ ವಿಜಯವೇ. ಅಧ್ಯಕ್ಷರ ವಿರೋಧಿಗಳು ನಮ್ಮ ನ್ಯಾಷನಲ್ ಱಲಿ ಪಕ್ಷವನ್ನು ಸೇರಬೇಕು ಎಂದು ಕರೆ ನೀಡಿದರು.

ಮೋದಿ ಅಭಿನಂದನೆ

ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವ ಎಮ್ಯಾನುಯೆಲ್ ಮ್ಯಾಕ್ರನ್​ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ. ಭಾರತ-ಫ್ರಾನ್ಸ್​ ಕಾರ್ಯತಂತ್ರದ ಸಹಭಾಗಿತ್ವ ಗಟ್ಟಿಗೊಳಿಸುವ ಕೆಲಸವನ್ನು ಒಟ್ಟಾಗಿ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಫ್ರಾನ್ಸ್​ನಲ್ಲೂ ಭುಗಿಲೆದ್ದ ಹಿಜಾಬ್ ಚರ್ಚೆ; ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರ ಸ್ಕಾರ್ಫ್ ಬ್ಯಾನ್ ಮಾಡುವುದಾಗಿ ಅಧ್ಯಕ್ಷೀಯ ಅಭ್ಯರ್ಥಿ ಘೋಷಣೆ

ಇದನ್ನೂ ಓದಿ: ಉಕ್ರೇನ್ ಬಿಕ್ಕಟ್ಟು ಶಮನಕ್ಕೆ ರಷ್ಯಾ ಮತ್ತು ಫ್ರಾನ್ಸ್ ಸಮ್ಮತಿ: ಶೀಘ್ರ ಪುಟಿನ್ ಮತ್ತು ಬೈಡೆನ್ ಭೇಟಿ

Published On - 6:52 am, Mon, 25 April 22

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್