AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಾನ್ಸ್ ಅಧ್ಯಕ್ಷರ ಕಪಾಳಕ್ಕೆ ಬಾರಿಸಿದ ಜನಸಾಮಾನ್ಯ! ವಿಡಿಯೋ ವೈರಲ್

ಆತ ’ಡೌನ್ ವಿಥ್ ಮಾಕ್ರೋನಿಯಾ’ (ಅ ಬಸ್ ಲ ಮಾಕ್ರೋನಿಯಾ) ಎಂದು ಅಧ್ಯಕ್ಷರ ವಿರುದ್ಧ ಘೋಷಣೆ ಕೂಗಿದ್ದಾನೆ. ಬಳಿಕ, ಕೆನ್ನೆಗೆ ಹೊಡೆದಿದ್ದಾನೆ. ಆತನ ಹೆಸರು ಮತ್ತಿತರ ವಿವರಗಳು ಸದ್ಯಕ್ಕೆ ಲಭ್ಯವಾಗಿಲ್ಲ. 

ಫ್ರಾನ್ಸ್ ಅಧ್ಯಕ್ಷರ ಕಪಾಳಕ್ಕೆ ಬಾರಿಸಿದ ಜನಸಾಮಾನ್ಯ! ವಿಡಿಯೋ ವೈರಲ್
ಫ್ರಾನ್ಸ್ ಅಧ್ಯಕ್ಷ
TV9 Web
| Edited By: |

Updated on: Jun 08, 2021 | 11:38 PM

Share

ಫ್ರಾನ್ಸ್: ಜನರ ಭೇಟಿಯ ವೇಳೆ, ಜನಸಂದಣಿಯ ನಡುವೆ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮಾಕ್ರೊನ್ ಕೆನ್ನೆಗೆ ಸಾರ್ವಜನಿಕನೊಬ್ಬ ಏಟು ಕೊಟ್ಟ ಘಟನೆ ಮಂಗಳವಾರ ನಡೆದಿದೆ. ಫ್ರಾನ್ಸ್ ಸೌತ್​ಈಸ್ಟ್​ನ ಡ್ರೋಮ್ ಪ್ರದೇಶದಲ್ಲಿ ಫ್ರಾನ್ಸ್ ಅಧ್ಯಕ್ಷ ಸಾರ್ವಜನಿಕರೊಂದಿಗೆ ಭೇಟಿ ಹಾಗೂ ಮಾತುಕತೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ, ನೆರೆದಿದ್ದ ಜನರಲ್ಲಿ ಒಬ್ಬಾತ ಅಧ್ಯಕ್ಷರಿಗೇ ಕೆನ್ನೆಗೆ ಬಾರಿಸಿದ್ದಾನೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

ಅಲ್ಲಿನ ಬಿಎಫ್​ಎಮ್ ಟಿವಿ ಮತ್ತು ಆರ್​ಎಮ್​ಸಿ, ಅಧ್ಯಕ್ಷ ಇಮ್ಯಾನುಯೆಲ್ ಮಾಕ್ರೊನ್ ಕೆನ್ನೆಗೆ ಸಾರ್ವಜನಿಕರ ನಡುವೆ ನೆರೆದಿದ್ದ ಒಬ್ಬಾತ ಏಟು ಕೊಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದೆ. ಅದರಂತೆ, ಹಸಿರು ಬಣ್ಣದ ಅಂಗಿ ತೊಟ್ಟುಕೊಂಡಿದ್ದ, ಕನ್ನಡಕ ಧರಿಸಿದ್ದ ಹಾಗೂ ಮಾಸ್ಕ್ ಧರಿಸಿದ್ದ ವ್ಯಕ್ತಿ ಈ ಕೆಲಸ ಮಾಡಿದ್ದಾನೆ.

ಆತ ’ಡೌನ್ ವಿಥ್ ಮಾಕ್ರೋನಿಯಾ’ (ಅ ಬಸ್ ಲ ಮಾಕ್ರೋನಿಯಾ) ಎಂದು ಅಧ್ಯಕ್ಷರ ವಿರುದ್ಧ ಘೋಷಣೆ ಕೂಗಿದ್ದಾನೆ. ಬಳಿಕ, ಕೆನ್ನೆಗೆ ಹೊಡೆದಿದ್ದಾನೆ. ಆತನ ಹೆಸರು ಮತ್ತಿತರ ವಿವರಗಳು ಸದ್ಯಕ್ಕೆ ಲಭ್ಯವಾಗಿಲ್ಲ.

ವಿಡಿಯೋ ನೋಡಿ:

ಈ ಸಂದರ್ಭ ಮಾಕ್ರೋನ್​ನ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿದ್ದಾರೆ. ಕಪಾಳಕ್ಕೆ ಏಟು ಕೊಟ್ಟವನನ್ನು ಎಳೆದು, ಅಧ್ಯಕ್ಷರನ್ನು ದೂರ ಮಾಡಿದ್ದಾರೆ. ಈ ಘಟನೆಯನ್ನು ಅಧ್ಯಕ್ಷ ಇಮ್ಯಾನುಯೆಲ್ ಮಾಕ್ರೊನ್ ಭದ್ರತಾ ಪಡೆ ಕೂಡ ಒಪ್ಪಿಕೊಂಡಿದೆ.

ಇದನ್ನೂ ಓದಿ: World Record: ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ; ಗಿನ್ನಿಸ್ ದಾಖಲೆ ನಿರ್ಮಿಸಿದ ಅಮ್ಮ!

Viral Video: ಒಂದು ಕಾಲು ಕಳೆದುಕೊಂಡರೇನು? ಈಕೆಯ ಸಾಲ್ಸಾ ನೃತ್ಯ ನೋಡಿದರೆ ನಾವೇ ನಾಚಬೇಕು!

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ