AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Galwan Clash: ಗಾಲ್ವಾನ್ ಸಂಘರ್ಷದಲ್ಲಿ 4 ಸೈನಿಕರ ಸಾವು, ಕೊನೆಗೂ ಒಪ್ಪಿಕೊಂಡ ಚೀನಾ ಸರ್ಕಾರ

China Admits Casualties in Galwan: ಕಳೆದ ವರ್ಷ ಜೂನ್ 15ರಂದು ಗಾಲ್ವಾನ್‌ ಕಣಿವೆಯ ವಾಸ್ತವ ಗಡಿ ನಿಯಂತ್ರಣಾ ರೇಖೆ (ಎಲ್‌ಎಸಿ) ಬಳಿ ಭಾರತೀಯ ಸೇನೆ ಹಾಗೂ ಚೀನಾದ ಪೀಪಲ್‌ ಲಿಬರೇಷನ್‌ ಆರ್ಮಿ (ಪಿಎಲ್‌ಎ) ನಡುವೆ ಸಂಘರ್ಷವೇರ್ಪಟ್ಟಿತ್ತು.

Galwan Clash: ಗಾಲ್ವಾನ್ ಸಂಘರ್ಷದಲ್ಲಿ 4 ಸೈನಿಕರ ಸಾವು, ಕೊನೆಗೂ ಒಪ್ಪಿಕೊಂಡ ಚೀನಾ ಸರ್ಕಾರ
ಲಡಾಖ್​ನಲ್ಲಿ ಮಿಲಿಟರಿ ಟ್ರಕ್ ಸಂಚರಿಸುತ್ತಿರುವ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Feb 19, 2021 | 2:05 PM

Share

ಬೀಜಿಂಗ್: ಗಾಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ (Galwan Clash) ಹತರಾಗಿರುವ ಸೈನಿಕರ ಹೆಸರುಗಳನ್ನು ಚೀನಾ ಬಹಿರಂಗಪಡಿಸಿದೆ. ಪೂರ್ವ ಲಡಾಖ್ ನಲ್ಲಿ 8 ತಿಂಗಳುಗಳ ಹಿಂದೆ ಸಂಘರ್ಷ ನಡೆಿದಿದ್ದು, ನಾಲ್ವರು ಸೈನಿಕರು ಹತರಾಗಿದ್ದಾರೆ ಎಂದು ಚೀನಾ ಹೇಳಿದೆ. ಹತರಾಗಿರುವ ಯೋಧರಿಗೆ ಅಲ್ಲಿನ ಸರ್ಕಾರ ಶೌರ್ಯ ಪ್ರಶಸ್ತಿ ನೀಡಲು ಮುಂದಾಗಿದೆ ಎಂದು ಚೀನಾ ಮಿಲಿಟರಿಯ ಅಧಿಕೃತ ಪತ್ರಿಕೆ ಪಿಎಲ್ಎ ಡೈಲಿ ವರದಿ ಮಾಡಿದೆ.

ಕಳೆದ ವರ್ಷ ಜೂನ್ 15ರಂದು ಗಾಲ್ವಾನ್‌ ಕಣಿವೆಯ ವಾಸ್ತವ ಗಡಿ ನಿಯಂತ್ರಣಾ ರೇಖೆ (ಎಲ್‌ಎಸಿ) ಬಳಿ ಭಾರತೀಯ ಸೇನೆ ಹಾಗೂ ಚೀನಾದ ಪೀಪಲ್‌ ಲಿಬರೇಷನ್‌ ಆರ್ಮಿ (ಪಿಎಲ್‌ಎ) ನಡುವೆ ಸಂಘರ್ಷವೇರ್ಪಟ್ಟಿತ್ತು. ಈ ಸಂಘರ್ಷದಲ್ಲಿ ಭಾರತದ 20 ಸೈನಿಕರು ಹತರಾಗಿದ್ದರು ಎಂದು ಭಾರತ ಹೇಳಿತ್ತು. ಆದರೆ ಗಾಲ್ವಾನ್ ಘರ್ಷಣೆಯಲ್ಲಿ ಹತರಾದ ಸೈನಿಕರ ವಿವರಗಳನ್ನು ಬಹಿರಂಗಪಡಿಸಲು ಚೀನಾ ನಿರಾಕರಿಸಿತ್ತು. ಅಲ್ಲದೆ ಯಾವುದೇ ಸೈನಿಕರು ಹತರಾಗಿಲ್ಲ ಎಂದು ಹೇಳಿಕೆ ನೀಡಿತ್ತು.

ಚೆನ್ ಹೋಂಗ್ ಜುನ್, ಚೆನ್ ಕ್ಲಿಯಾಂಗ್ರಾಂಗ್, ಕ್ಸಿಯೊ ಸಿಯೊನ್ ಮತ್ತು ವಾಂಗ್ ಜೊರೊಮ್ ಎಂಬ ಹೆಸರಿನ ಯೋಧರು ಹುತಾತ್ಮರಾಗಿದ್ದಾರೆ ಎಂದು ಪಿಎಲ್ಎ ಡೈಲಿ ವರದಿಯಲ್ಲಿ ಉಲ್ಲೇಖವಿದೆ ಎಂದು ಗ್ಲೋಬಲ್ ಟೈಮ್ಸ್ ಹೇಳಿದೆ. ಸಂಘರ್ಷದಲ್ಲಿ ಚೀನಾಪಡೆಯ ಸಾವು ನೋವಿನ ಬಗ್ಗೆ ಅಲ್ಲಿನ ಸರ್ಕಾರ ಇಲ್ಲಿಯವರೆಗೆ ಯಾವುದೇ ಹೇಳಿಕೆ ನೀಡಿರಲಿಲ್ಲ. ಫೆಬ್ರವರಿ 10ರಂದು ರಷ್ಯಾದ ಸುದ್ದಿ ಸಂಸ್ಥೆ ಟಿಎಎಸ್ಎಸ್ ಗಾಲ್ವಾನ್ ಸಂಘರ್ಷದಲ್ಲಿ 45 ಯೋಧರು ಹತರಾಗಿದ್ದಾರೆ ಎಂದು ವರದಿ ಮಾಡಿರುವುದಾಗಿ ಭಾರತದ ಸೇನಾ ಕಮಾಂಡರ್ (ಉತ್ತರಭಾಗ) ಉಲ್ಲೇಖಿಸಿದ ಬೆನ್ನಲ್ಲೇ ಚೀನಾ ಯೋಧರ ಸಾವಿನ ಸಂಖ್ಯೆ ಬಹಿರಂಗಪಡಿಸಿದೆ.

ಗಾಲ್ವಾನ್ ಕಣಿವೆ ಬಳಿ ಗಸ್ತು ತಿರುಗುವುದಕ್ಕೆ ಚೀನಾ ಸೈನಿಕರು ಅಡ್ಡಿ ಪಡಿಸಿದ್ದು ಗಾಲ್ವಾನ್ ಸಂಘರ್ಷಕ್ಕೆ ಕಾರಣವಾಗಿತ್ತು. ಈ ಸಂಘರ್ಷದಲ್ಲಿ ಹಲವಾರು ಭಾರತೀಯರನ್ನು ಚೀನಾ ವಶಕ್ಕೆ ಪಡೆದುಕೊಂಡು ಆಮೇಲೆ ಬಿಡುಗಡೆ ಮಾಡಿತ್ತು . ಹುತಾತ್ಮರಾದ ಭಾರತೀಯ ಯೋಧ ಕರ್ನಲ್ ಸಂತೋಷ್ ಬಾಬು (ಕಮಾಂಡಿಗ್ ಆಫೀಸರ್ 16 ಬಿಹಾರ್) ಅವರಿಗೆ ಮರಣೋತ್ತರ ಮಹಾವೀರ ಚಕ್ರ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಜೂನ್ 15ರಂದು ನಡೆದದ್ದು ಏನು? ಭಾರತ-ಚೀನಾ ನಡುವಣ ಗಡಿ ಸಂಘರ್ಷ ದಶಕಗಳಷ್ಟು ಹಳೆಯದು. ಜೂನ್ 15ರಂದು,  20 ಭಾರತೀಯ ಯೋಧರು ಹುತಾತ್ಮರಾಗಲು ಕಾರಣವಾದ ಸಂಘರ್ಷದ ಮುನ್ಸೂಚನೆ ಜೂನ್ 6ರಂದೇ ದೊರೆತಿತ್ತು. ಲಡಾಖ್‌ನ ಗಾಲ್ವನ್ ವಾಸ್ತವ ಗಡಿ ರೇಖೆ ಬಳಿ ಚೀನಾದ ಪೀಪಲ್ಸ್‌ ಲಿಬರೇಷನ್ ಆರ್ಮಿಯ (ಪಿಎಲ್‌ಎ) ಸೈನಿಕರು ಭಾರತದ ಗಡಿಯೊಳಗೆ ಬೀಡುಬಿಟ್ಟಿದ್ದರು. ಭಾರತಕ್ಕೆ ಸೇರಿದ ಭೂಪ್ರದೇಶದಲ್ಲಿ ಚೀನಾ ಯೋಧರು ಟೆಂಟ್ ಹಾಕಿರುವ ವಿಚಾರವಾಗಿ ಉಭಯ ದೇಶಗಳ ಸೇನಾ ಕಮಾಂಡರ್‌ಗಳ ಮಟ್ಟದ ಮಾತುಕತೆ ಜೂನ್ 6ರಂದು ನಡೆದಿತ್ತು. ಚೀನಾ ಅಲ್ಲಿಂದ ಸೇನೆಯನ್ನು ಹಿಂಪಡೆದಿದೆ ಎಂದು ಹೇಳಿತ್ತಾದರೂ ಅದನ್ನು ಕಾರ್ಯರೂಪಕ್ಕೆ ತಂದಿರಲಿಲ್ಲ.

ಜೂನ್ 15ರಂದು 16ನೇ ಬಿಹಾರ ರೆಜಿಮೆಂಟ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ಬಿ. ಸಂತೋಷ್ ಬಾಬು ನೇತೃತ್ವದ ಯೋಧರ ತಂಡ ಗಸ್ತು ತಿರುಗಿದಾಗ ಗಸ್ತು ಪಾಯಿಂಟ್ 14 (ಪಿಪಿ14) ಬಳಿ ಚೀನಾ ಯೋಧರ ಟೆಂಟ್ ಇರುವುದು ಗಮನಕ್ಕೆ ಬಂದಿತ್ತು. ಈ ವೇಳೆ ಬಲ ಪ್ರಯೋಗದ ಮೂಲಕ ಚೀನಾ ಸೈನಿಕರನ್ನು ಭಾರತೀಯ ಯೋಧರು ಗಸ್ತು ಪಾಯಿಂಟ್‌ 14ರ ಆಚೆಗೆ ಹಿಮ್ಮೆಟ್ಟಿಸಿದ್ದರು. ಬಳಿಕ ಚೀನಾ ಯೋಧರು ಭಾರತದ ನೆಲದಲ್ಲಿ ಹಾಕಿದ್ದ ಟೆಂಟ್‌ಗಳನ್ನು ಸಂತೋಷ್ ಬಾಬು ನೇತೃತ್ವದ ತಂಡ ಸುಟ್ಟುಹಾಕಿ ವೀಕ್ಷಣಾ ಪೋಸ್ಟ್‌ ಅನ್ನೂ ನಾಶಪಡಿಸಿತ್ತು. ನಂತರ ನಡೆದ ಸಂಘರ್ಷದಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದರು.

ಇದನ್ನೂ ಓದಿ: ಗಾಲ್ವಾನ್ ಕಣಿವೆ ಸಂಘರ್ಷದಲ್ಲಿ ಹುತಾತ್ಮರಾದ ಕರ್ನಲ್ ಸಂತೋಷ್ ಬಾಬುಗೆ ಮಹಾವೀರ ಚಕ್ರ ಗೌರವ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು