AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್ ವಿಶ್ವವಿದ್ಯಾಲಯದ ಬಳಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ, ಗಾಂಧಿ ಜಯಂತಿಗೆ 2 ದಿನ ಮೊದಲು ನಾಚಿಕೆಗೇಡಿನ ಕೃತ್ಯ

ಗಾಂಧಿ ಜಯಂತಿ(Gandhi Jayanti)ಗೆ ಕೇವಲ ಎರಡು ದಿನಗಳ ಮೊದಲು ಲಂಡನ್ ವಿಶ್ವವಿದ್ಯಾಲಯದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ. ಭಾರತದ ಹೈಕಮಿಷನ್ ಈ ಘಟನೆಯನ್ನು ಬಲವಾಗಿ ಖಂಡಿಸಿದ್ದು, ಇದನ್ನು ನಾಚಿಕೆಗೇಡಿನ ಕೃತ್ಯ ಮತ್ತು ಅಹಿಂಸೆಯ ಪರಂಪರೆಯ ಮೇಲಿನ ದಾಳಿ ಎಂದು ಕರೆದಿದೆ.

ಲಂಡನ್ ವಿಶ್ವವಿದ್ಯಾಲಯದ ಬಳಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ, ಗಾಂಧಿ ಜಯಂತಿಗೆ 2 ದಿನ ಮೊದಲು ನಾಚಿಕೆಗೇಡಿನ ಕೃತ್ಯ
ಮಹಾತ್ಮ ಗಾಂಧಿ
ನಯನಾ ರಾಜೀವ್
|

Updated on: Sep 30, 2025 | 7:52 AM

Share

ಲಂಡನ್, ಸೆಪ್ಟೆಂಬರ್ 30: ಗಾಂಧಿ ಜಯಂತಿ(Gandhi Jayanti)ಗೆ ಕೇವಲ ಎರಡು ದಿನಗಳ ಮೊದಲು ಲಂಡನ್ ವಿಶ್ವವಿದ್ಯಾಲಯದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ. ಭಾರತದ ಹೈಕಮಿಷನ್ ಈ ಘಟನೆಯನ್ನು ಬಲವಾಗಿ ಖಂಡಿಸಿದ್ದು, ಇದನ್ನು ನಾಚಿಕೆಗೇಡಿನ ಕೃತ್ಯ ಮತ್ತು ಅಹಿಂಸೆಯ ಪರಂಪರೆಯ ಮೇಲಿನ ದಾಳಿ ಎಂದು ಕರೆದಿದೆ.

ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಧ್ಯಾನಸ್ಥ ಭಂಗಿಯಲ್ಲಿ ಕುಳಿತಿರುವುದನ್ನು ಚಿತ್ರಿಸುವ ಈ ಪ್ರತಿಮೆಯ ಪೀಠದ ಮೇಲೆ ಭಾರತ ವಿರೋಧಿ ಬರಹಗಳು ಕಂಡುಬಂದಿವೆ. ಪ್ರತಿಮೆಯ ಮೇಲೆ ಬಿಳಿ ಬಣ್ಣವನ್ನು ಬಳಿಯಲಾಗಿತ್ತು. ವಿಶ್ವಸಂಸ್ಥೆಯು ಅಕ್ಟೋಬರ್ 2ರಂದು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಘೋಷಿಸಿದೆ. ಅಂದು ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವುದರ ಜತೆಗೆ ಭಜನೆಗಳನ್ನು ಹಾಡಲಾಗುತ್ತದೆ.

ಕಲಾವಿದೆ ಫ್ರೆಡ್ಡಾ ಬ್ರಿಲಿಯಂಟ್ ಕೆತ್ತಿದ ಮತ್ತು ಇಂಡಿಯಾ ಲೀಗ್‌ನ ಬೆಂಬಲದೊಂದಿಗೆ ರಚಿಸಲಾದ ಕಂಚಿನ ಪ್ರತಿಮೆಯನ್ನು 1968 ರಲ್ಲಿ ಚೌಕದಲ್ಲಿ ಅನಾವರಣಗೊಳಿಸಲಾಯಿತು, ಮಹಾತ್ಮ ಗಾಂಧಿಯವರು ಯೂನಿವರ್ಸಿಟಿ ಕಾಲೇಜ್ ಲಂಡನ್‌ನಲ್ಲಿ ಕಾನೂನು ವಿದ್ಯಾರ್ಥಿಯಾಗಿದ್ದರು.

ಭಾರತೀಯ ಹೈಕಮಿಷನ್ ಈ ವಿಷಯವನ್ನು ಸ್ಥಳೀಯ ಆಡಳಿತ ಮತ್ತು ಮೆಟ್ರೋಪಾಲಿಟನ್ ಪೊಲೀಸರೊಂದಿಗೆ ಪ್ರಸ್ತಾಪಿಸಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ ಎಂದು ಹೇಳಿದೆ. ಭಾರತೀಯ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಪ್ರತಿಮೆಯನ್ನು ದುರಸ್ತಿ ಮಾಡಿ ಅದರ ಘನತೆಯನ್ನು ಪುನಃಸ್ಥಾಪಿಸಲು ಕೆಲಸ ಮಾಡುತ್ತಿದ್ದಾರೆ.

ಮತ್ತಷ್ಟು ಓದಿ: ಮಹಾತ್ಮಾ ಗಾಂಧಿ ಕುರಿತ ಹತ್ತು ಅತ್ಯುತ್ತಮ ಸಿನಿಮಾಗಳು ಇವು

ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ ಈ ಘಟನೆ ಗಾಂಧಿ ಜಯಂತಿಗೆ (ಅಕ್ಟೋಬರ್ 2) ಕೆಲವೇ ದಿನಗಳ ಮೊದಲು ಸಂಭವಿಸಿದೆ ಎಂಬುದು ಗಮನಿಸಬೇಕಾದ ಸಂಗತಿ, ಈ ಸಮಯದಲ್ಲಿ ಪ್ರತಿ ವರ್ಷ ಈ ಸ್ಥಳದಲ್ಲಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಲಾಗುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು