ಪ್ಯಾರಾಚೂಟ್ ವಿಫಲ: ವಿಮಾನದಿಂದ ಆಹಾರ ಪೊಟ್ಟಣಗಳು ನೇರವಾಗಿ ಮೈಮೇಲೆ ಬಿದ್ದು ಗಾಜಾದಲ್ಲಿ 5 ಮಂದಿ ಸಾವು

ಗಾಜಾದಲ್ಲಿ ಯುದ್ಧಪೀಡಿತ ಪ್ಯಾಲೆಸ್ತೀನಿಯನ್ನರಿಗೆ ಆಹಾರ, ಸರಬರಾಜು ಮತ್ತು ಔಷಧಗಳನಗನು ವಿಮಾನದಲ್ಲಿ ಸಾಗಿಸುವ ಮೊದಲ ಪ್ರಯತ್ನ ವಿಫಲವಾಗಿದೆ. ವಾಯು ನೆರವು ನೀಡುವಾಗ ಪ್ಯಾರಾಚೂಟ್‌ಗಳು ತೆರೆಯದ ಕಾರಣ ಐದು ಜನರು ಸಾವನ್ನಪ್ಪಿದ್ದಾರೆ. ಇದು ಗಾಜಾದಲ್ಲಿ ಭಯ ಮೂಡಿಸಿದೆ. ಮೃತರು ಯಾವ ದೇಶಕ್ಕೆ ಸೇರಿದವರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಪ್ಯಾರಾಚೂಟ್ ವಿಫಲ: ವಿಮಾನದಿಂದ ಆಹಾರ ಪೊಟ್ಟಣಗಳು ನೇರವಾಗಿ ಮೈಮೇಲೆ ಬಿದ್ದು ಗಾಜಾದಲ್ಲಿ 5 ಮಂದಿ ಸಾವು
ಗಾಜಾImage Credit source: NDTV
Follow us
|

Updated on: Mar 09, 2024 | 2:54 PM

ಗಾಜಾದಲ್ಲಿರುವ ಜನರಿಗೆ ಪ್ಯಾರಾಚೂಟ್​ ಮೂಲಕ ಆಹಾರ, ಔಷಧಗಳನ್ನು ವಿತರಿಸುವ ಸಂದರ್ಭದಲ್ಲಿ ಅಪಘಾತವೊಂದು ಸಂಭವಿದೆ. ವಿಮಾನದಿಂದ ಪ್ಯಾರಾಚೂಟ್​ ಮೂಲಕ ಜನರಿಗೆ ಆಹಾರ ವಿತರಿಸುವ ಸಮಯದಲ್ಲಿ ಪೊಟ್ಟಣಗಳು ನೇರವಾಗಿ ಜನರ ಮೇಲೆ ಬಿದ್ದು ಐವರು ಸಾವನ್ನಪ್ಪಿದ್ದಾರೆ.

ಗಾಜಾದ ಅತ್ಯಂತ ವಿನಾಶಕಾರಿ ಭಾಗಗಳಲ್ಲಿ ಒಂದಾದ ಅಲ್-ಶಾತಿ ಎಂದು ಕರೆಯಲ್ಪಡುವ ಕರಾವಳಿ ನಿರಾಶ್ರಿತರ ಶಿಬಿರದ ಬಳಿ ಶುಕ್ರವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪ್ಯಾರಾಚೂಟ್ ವಿಫಲಗೊಂಡು ಪರಿಹಾರ ಪೊಟ್ಟಣಗಳು ಕೆಳಗೆ ನಿಂತ ನಾಗರಿಕರ ಮೇಲೆ ಬಿದ್ದು ಸುಮಾರು ಐದು ಮಂದಿ ಮೃತಪಟ್ಟಿದ್ದಾರೆ ಅಲ್ಲದೆ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಗಾಜಾ ನಗರದ ನಿರಾಶ್ರಿತರ ಶಿಬಿರದ ಬಳಿ ನಾಗರಿಕರು ಪರಿಹಾರದ ಪ್ಯಾಕೇಜ್‌ಗಳಿಗಾಗಿ ಕಾಯುತ್ತಿದಾಗ ಈ ಅವಘಡ ಸಂಭವಿಸಿದೆ. ಪ್ಯಾರಾಚೂಟ್ ತೆರೆಯದೇ ರಾಕೆಟ್‌ನಂತೆ ಕೆಳಗೆ ಬಿದ್ದಿದ್ದು ಕೆಳಗೆ ಆಹಾರಕ್ಕಾಗಿ ಕಾಯುತ್ತಿದ್ದ ಐದು ಮಂದಿ ಮೃತಪಟ್ಟಿದ್ದಾರೆ.

ಮತ್ತಷ್ಟು ಓದಿ: ಇಸ್ರೇಲ್​ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

ಅನೇಕ ದೇಶಗಳು ಪರಿಹಾರ ಸಾಮಗ್ರಿಗಳನ್ನು ತಲುಪಿಸಲು ವಿಮಾನವನ್ನು ಆಶ್ರಯಿಸುತ್ತಿದ್ದಾರೆ. ಇದರಿಂದ ಪರಿಹಾರ ಸಾಮಗ್ರಿಗಳಿದ್ದ ಪಾರ್ಸೆಲ್‌ಗಳು ನಾಗರಿಕರ ತಲೆಯ ಮೇಲೆ ಬಿದ್ದಿವೆ. ಗಾಜಾ ನಗರದ ಶತಿ ನಿರಾಶ್ರಿತರ ಶಿಬಿರದ ಬಳಿ ಜನರು ಸಹಾಯ ಪ್ಯಾಕೇಜ್‌ಗಳಿಗಾಗಿ ಸರದಿಯಲ್ಲಿ ನಿಂತಿದ್ದಾಗ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆಯನ್ನು ಗಾಜಾ ಸರ್ಕಾರದ ಮಾಧ್ಯಮ ಕಚೇರಿ ದೃಢಪಡಿಸಿದೆ.

ಗಾಜಾ ಸರ್ಕಾರದ ಮಾಧ್ಯಮ ಕಚೇರಿಯು ಏರ್‌ಡ್ರಾಪ್ ಅನ್ನು ನಿಷ್ಪ್ರಯೋಜಕ ಎಂದು ಕರೆದಿದೆ. ಇಸ್ರೇಲಿ ಪಡೆಗಳು ಗಾಜಾದಲ್ಲಿ ಸಹಾಯ ಬೆಂಗಾವಲು ಪಡೆಯ ಬಳಿ ಗುಂಡಿನ ದಾಳಿ ನಡೆಸಿದಾಗ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಕಾಲ್ತುಳಿತದಲ್ಲಿ ಹೆಚ್ಚಿನ ಜನರು ಸಾವನ್ನಪ್ಪಿದ್ದರು ಎಂದು ಇಸ್ರೇಲ್ ಸೇನೆ ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್