AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾರಾಚೂಟ್ ವಿಫಲ: ವಿಮಾನದಿಂದ ಆಹಾರ ಪೊಟ್ಟಣಗಳು ನೇರವಾಗಿ ಮೈಮೇಲೆ ಬಿದ್ದು ಗಾಜಾದಲ್ಲಿ 5 ಮಂದಿ ಸಾವು

ಗಾಜಾದಲ್ಲಿ ಯುದ್ಧಪೀಡಿತ ಪ್ಯಾಲೆಸ್ತೀನಿಯನ್ನರಿಗೆ ಆಹಾರ, ಸರಬರಾಜು ಮತ್ತು ಔಷಧಗಳನಗನು ವಿಮಾನದಲ್ಲಿ ಸಾಗಿಸುವ ಮೊದಲ ಪ್ರಯತ್ನ ವಿಫಲವಾಗಿದೆ. ವಾಯು ನೆರವು ನೀಡುವಾಗ ಪ್ಯಾರಾಚೂಟ್‌ಗಳು ತೆರೆಯದ ಕಾರಣ ಐದು ಜನರು ಸಾವನ್ನಪ್ಪಿದ್ದಾರೆ. ಇದು ಗಾಜಾದಲ್ಲಿ ಭಯ ಮೂಡಿಸಿದೆ. ಮೃತರು ಯಾವ ದೇಶಕ್ಕೆ ಸೇರಿದವರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಪ್ಯಾರಾಚೂಟ್ ವಿಫಲ: ವಿಮಾನದಿಂದ ಆಹಾರ ಪೊಟ್ಟಣಗಳು ನೇರವಾಗಿ ಮೈಮೇಲೆ ಬಿದ್ದು ಗಾಜಾದಲ್ಲಿ 5 ಮಂದಿ ಸಾವು
ಗಾಜಾImage Credit source: NDTV
ನಯನಾ ರಾಜೀವ್
|

Updated on: Mar 09, 2024 | 2:54 PM

Share

ಗಾಜಾದಲ್ಲಿರುವ ಜನರಿಗೆ ಪ್ಯಾರಾಚೂಟ್​ ಮೂಲಕ ಆಹಾರ, ಔಷಧಗಳನ್ನು ವಿತರಿಸುವ ಸಂದರ್ಭದಲ್ಲಿ ಅಪಘಾತವೊಂದು ಸಂಭವಿದೆ. ವಿಮಾನದಿಂದ ಪ್ಯಾರಾಚೂಟ್​ ಮೂಲಕ ಜನರಿಗೆ ಆಹಾರ ವಿತರಿಸುವ ಸಮಯದಲ್ಲಿ ಪೊಟ್ಟಣಗಳು ನೇರವಾಗಿ ಜನರ ಮೇಲೆ ಬಿದ್ದು ಐವರು ಸಾವನ್ನಪ್ಪಿದ್ದಾರೆ.

ಗಾಜಾದ ಅತ್ಯಂತ ವಿನಾಶಕಾರಿ ಭಾಗಗಳಲ್ಲಿ ಒಂದಾದ ಅಲ್-ಶಾತಿ ಎಂದು ಕರೆಯಲ್ಪಡುವ ಕರಾವಳಿ ನಿರಾಶ್ರಿತರ ಶಿಬಿರದ ಬಳಿ ಶುಕ್ರವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪ್ಯಾರಾಚೂಟ್ ವಿಫಲಗೊಂಡು ಪರಿಹಾರ ಪೊಟ್ಟಣಗಳು ಕೆಳಗೆ ನಿಂತ ನಾಗರಿಕರ ಮೇಲೆ ಬಿದ್ದು ಸುಮಾರು ಐದು ಮಂದಿ ಮೃತಪಟ್ಟಿದ್ದಾರೆ ಅಲ್ಲದೆ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಗಾಜಾ ನಗರದ ನಿರಾಶ್ರಿತರ ಶಿಬಿರದ ಬಳಿ ನಾಗರಿಕರು ಪರಿಹಾರದ ಪ್ಯಾಕೇಜ್‌ಗಳಿಗಾಗಿ ಕಾಯುತ್ತಿದಾಗ ಈ ಅವಘಡ ಸಂಭವಿಸಿದೆ. ಪ್ಯಾರಾಚೂಟ್ ತೆರೆಯದೇ ರಾಕೆಟ್‌ನಂತೆ ಕೆಳಗೆ ಬಿದ್ದಿದ್ದು ಕೆಳಗೆ ಆಹಾರಕ್ಕಾಗಿ ಕಾಯುತ್ತಿದ್ದ ಐದು ಮಂದಿ ಮೃತಪಟ್ಟಿದ್ದಾರೆ.

ಮತ್ತಷ್ಟು ಓದಿ: ಇಸ್ರೇಲ್​ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

ಅನೇಕ ದೇಶಗಳು ಪರಿಹಾರ ಸಾಮಗ್ರಿಗಳನ್ನು ತಲುಪಿಸಲು ವಿಮಾನವನ್ನು ಆಶ್ರಯಿಸುತ್ತಿದ್ದಾರೆ. ಇದರಿಂದ ಪರಿಹಾರ ಸಾಮಗ್ರಿಗಳಿದ್ದ ಪಾರ್ಸೆಲ್‌ಗಳು ನಾಗರಿಕರ ತಲೆಯ ಮೇಲೆ ಬಿದ್ದಿವೆ. ಗಾಜಾ ನಗರದ ಶತಿ ನಿರಾಶ್ರಿತರ ಶಿಬಿರದ ಬಳಿ ಜನರು ಸಹಾಯ ಪ್ಯಾಕೇಜ್‌ಗಳಿಗಾಗಿ ಸರದಿಯಲ್ಲಿ ನಿಂತಿದ್ದಾಗ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆಯನ್ನು ಗಾಜಾ ಸರ್ಕಾರದ ಮಾಧ್ಯಮ ಕಚೇರಿ ದೃಢಪಡಿಸಿದೆ.

ಗಾಜಾ ಸರ್ಕಾರದ ಮಾಧ್ಯಮ ಕಚೇರಿಯು ಏರ್‌ಡ್ರಾಪ್ ಅನ್ನು ನಿಷ್ಪ್ರಯೋಜಕ ಎಂದು ಕರೆದಿದೆ. ಇಸ್ರೇಲಿ ಪಡೆಗಳು ಗಾಜಾದಲ್ಲಿ ಸಹಾಯ ಬೆಂಗಾವಲು ಪಡೆಯ ಬಳಿ ಗುಂಡಿನ ದಾಳಿ ನಡೆಸಿದಾಗ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಕಾಲ್ತುಳಿತದಲ್ಲಿ ಹೆಚ್ಚಿನ ಜನರು ಸಾವನ್ನಪ್ಪಿದ್ದರು ಎಂದು ಇಸ್ರೇಲ್ ಸೇನೆ ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ