AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಜಿಯಾ ಮರುಎಣಿಕೆಯಲ್ಲೂ ಟ್ರಂಪ್​ಗೆ ಮುಖಭಂಗ; ಬೈಡೆನ್​ಗೆ​ ಐತಿಹಾಸಿಕ ಗೆಲುವು

ವಾಷಿಂಗ್ಟನ್​: ಅಮೆರಿಕ ಚುನಾವಣೆ ಫಲಿತಾಂಶ ಈ ಬಾರಿ ಡೆಮಾಕ್ರಟಿಕ್​ ಪಕ್ಷದ ಜೋ ಬೈಡನ್​​ ಪರವಾಗಿ ಬಂದಿದ್ದರೂ ದಕ್ಷಿಣ ಅಮೆರಿಕದ ಜಾರ್ಜಿಯಾ ರಾಜ್ಯ ಇನ್ನೂ ಕುತೂಹಲ ಉಳಿಸಿಕೊಂಡಿತ್ತು. ಅಲ್ಲಿ ರಿಪಬ್ಲಿಕನ್​ ಪಕ್ಷದ ಡೊನಾಲ್ಡ್​ ಟ್ರಂಪ್​ಗಿಂತ ಬಿಡೆನ್​ ತುಂಬ ಕಡಿಮೆ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದರಿಂದ ಮರುಎಣಿಕೆಗೆ ಆದೇಶ ನೀಡಲಾಗಿತ್ತು. ಇದೀಗ ಜಾರ್ಜಿಯಾದ ಮತ ಎಣಿಕೆಯೂ ಮುಗಿದಿದ್ದು ಅಲ್ಲಿ ಕೂಡ ಜೋ ಬೈಡನ್​​​ ಅವರೇ ಗೆದ್ದಿದ್ದಾರೆ. ಬೈಡನ್​ಗೆ 12,284 ಮತಗಳ ಅಂತರದ ಗೆಲುವು.. ಸುಮಾರು 5 ಮಿಲಿಯನ್​ ಮತ ಚಲಾವಣೆ […]

ಜಾರ್ಜಿಯಾ ಮರುಎಣಿಕೆಯಲ್ಲೂ ಟ್ರಂಪ್​ಗೆ ಮುಖಭಂಗ; ಬೈಡೆನ್​ಗೆ​ ಐತಿಹಾಸಿಕ ಗೆಲುವು
ಜೋ ಬಿಡೆನ್ ಮತ್ತು ಡೊನಾಲ್ಡ್ ಟ್ರಂಪ್
ಪೃಥ್ವಿಶಂಕರ
| Edited By: |

Updated on: Nov 20, 2020 | 1:46 PM

Share

ವಾಷಿಂಗ್ಟನ್​: ಅಮೆರಿಕ ಚುನಾವಣೆ ಫಲಿತಾಂಶ ಈ ಬಾರಿ ಡೆಮಾಕ್ರಟಿಕ್​ ಪಕ್ಷದ ಜೋ ಬೈಡನ್​​ ಪರವಾಗಿ ಬಂದಿದ್ದರೂ ದಕ್ಷಿಣ ಅಮೆರಿಕದ ಜಾರ್ಜಿಯಾ ರಾಜ್ಯ ಇನ್ನೂ ಕುತೂಹಲ ಉಳಿಸಿಕೊಂಡಿತ್ತು. ಅಲ್ಲಿ ರಿಪಬ್ಲಿಕನ್​ ಪಕ್ಷದ ಡೊನಾಲ್ಡ್​ ಟ್ರಂಪ್​ಗಿಂತ ಬಿಡೆನ್​ ತುಂಬ ಕಡಿಮೆ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದರಿಂದ ಮರುಎಣಿಕೆಗೆ ಆದೇಶ ನೀಡಲಾಗಿತ್ತು. ಇದೀಗ ಜಾರ್ಜಿಯಾದ ಮತ ಎಣಿಕೆಯೂ ಮುಗಿದಿದ್ದು ಅಲ್ಲಿ ಕೂಡ ಜೋ ಬೈಡನ್​​​ ಅವರೇ ಗೆದ್ದಿದ್ದಾರೆ.

ಬೈಡನ್​ಗೆ 12,284 ಮತಗಳ ಅಂತರದ ಗೆಲುವು.. ಸುಮಾರು 5 ಮಿಲಿಯನ್​ ಮತ ಚಲಾವಣೆ ಆಗಿದ್ದ ಜಾರ್ಜಿಯಾದಲ್ಲಿ  ಎರಡನೇ ಬಾರಿಗೆ ಮ್ಯಾನ್ಯುಯಲ್​ ಆಗಿ ಮತಎಣಿಕೆ ಮಾಡಲಾಗಿದ್ದು, ಬೈಡನ್​ 12,284 ಮತಗಳ ಅಂತರದಿಂದ ಟ್ರಂಪ್ ವಿರುದ್ಧ ಗೆಲುವು ಸಾಧಿಸಿದ್ದಾರೆ.  ಮೊದಲ ಬಾರಿ ಎಣಿಕೆ ಪೂರ್ಣಗೊಂಡಾಗ ಬೈಡನ್ 14,000 ಮತಗಳಿಂದ ಮುನ್ನಡೆ ಸಾಧಿಸಿದ್ದರು ಎಂದು ಜಾರ್ಜಿಯಾದ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಜಾರ್ಜಿಯಾದಲ್ಲಿ ಡೆಮಾಕ್ರಟಿಕ್​ ಪಕ್ಷದ ಅಭ್ಯರ್ಥಿ ಗೆದ್ದಿದ್ದೇ ಇಲ್ಲ.. 1992ರಿಂದಲೂ ಜಾರ್ಜಿಯಾದಲ್ಲಿ ರಿಪಬ್ಲಿಕನ್​ ಪಕ್ಷದ ಪಾರುಪತ್ಯವೇ ಇತ್ತು. ಅವತ್ತಿಂದಲೂ ಡೆಮಾಕ್ರಟಿಕ್​ ಪಕ್ಷದ ಅಭ್ಯರ್ಥಿ ಗೆದ್ದಿದ್ದೇ ಇಲ್ಲ. ಆದರೆ ಈ ಬಾರಿ ಉಲ್ಟಾ ಆಗಿದೆ. ನವೆಂಬರ್​ 3ರಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಯಾವುದೇ ವಂಚನೆ, ಜನರ ಹಾದಿ ತಪ್ಪಿಸುವ ಕೆಲಸಗಳು ಆಗಿಲ್ಲ ಎಂದು ಸ್ಥಳೀಯ ಲೆಕ್ಕಪರಿಶೋಧನಾ ಸಂಸ್ಥೆ ದೃಢಪಡಿಸಿದೆ. ಈ ಐತಿಹಾಸಿಕ ಗೆಲವು ದಕ್ಕಿದ್ದು ಜಾರ್ಜಿಯಾದಲ್ಲಿರುವ ನಮ್ಮ ಪಕ್ಷದ ಕಾರ್ಯಕರ್ತರು, ಚುನಾವಣಾ ಅಧಿಕಾರಿಗಳ ಕಠಿಣ ಪರಿಶ್ರಮದಿಂದ. ಅವರಿಗೆ ಮನ್ನಣೆ ನೀಡಲೇಬೇಕು ಎಂದು ರಿಪಬ್ಲಿಕನ್​ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು