AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಜಿಯಾ ಮರುಎಣಿಕೆಯಲ್ಲೂ ಟ್ರಂಪ್​ಗೆ ಮುಖಭಂಗ; ಬೈಡೆನ್​ಗೆ​ ಐತಿಹಾಸಿಕ ಗೆಲುವು

ವಾಷಿಂಗ್ಟನ್​: ಅಮೆರಿಕ ಚುನಾವಣೆ ಫಲಿತಾಂಶ ಈ ಬಾರಿ ಡೆಮಾಕ್ರಟಿಕ್​ ಪಕ್ಷದ ಜೋ ಬೈಡನ್​​ ಪರವಾಗಿ ಬಂದಿದ್ದರೂ ದಕ್ಷಿಣ ಅಮೆರಿಕದ ಜಾರ್ಜಿಯಾ ರಾಜ್ಯ ಇನ್ನೂ ಕುತೂಹಲ ಉಳಿಸಿಕೊಂಡಿತ್ತು. ಅಲ್ಲಿ ರಿಪಬ್ಲಿಕನ್​ ಪಕ್ಷದ ಡೊನಾಲ್ಡ್​ ಟ್ರಂಪ್​ಗಿಂತ ಬಿಡೆನ್​ ತುಂಬ ಕಡಿಮೆ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದರಿಂದ ಮರುಎಣಿಕೆಗೆ ಆದೇಶ ನೀಡಲಾಗಿತ್ತು. ಇದೀಗ ಜಾರ್ಜಿಯಾದ ಮತ ಎಣಿಕೆಯೂ ಮುಗಿದಿದ್ದು ಅಲ್ಲಿ ಕೂಡ ಜೋ ಬೈಡನ್​​​ ಅವರೇ ಗೆದ್ದಿದ್ದಾರೆ. ಬೈಡನ್​ಗೆ 12,284 ಮತಗಳ ಅಂತರದ ಗೆಲುವು.. ಸುಮಾರು 5 ಮಿಲಿಯನ್​ ಮತ ಚಲಾವಣೆ […]

ಜಾರ್ಜಿಯಾ ಮರುಎಣಿಕೆಯಲ್ಲೂ ಟ್ರಂಪ್​ಗೆ ಮುಖಭಂಗ; ಬೈಡೆನ್​ಗೆ​ ಐತಿಹಾಸಿಕ ಗೆಲುವು
ಜೋ ಬಿಡೆನ್ ಮತ್ತು ಡೊನಾಲ್ಡ್ ಟ್ರಂಪ್
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 20, 2020 | 1:46 PM

Share

ವಾಷಿಂಗ್ಟನ್​: ಅಮೆರಿಕ ಚುನಾವಣೆ ಫಲಿತಾಂಶ ಈ ಬಾರಿ ಡೆಮಾಕ್ರಟಿಕ್​ ಪಕ್ಷದ ಜೋ ಬೈಡನ್​​ ಪರವಾಗಿ ಬಂದಿದ್ದರೂ ದಕ್ಷಿಣ ಅಮೆರಿಕದ ಜಾರ್ಜಿಯಾ ರಾಜ್ಯ ಇನ್ನೂ ಕುತೂಹಲ ಉಳಿಸಿಕೊಂಡಿತ್ತು. ಅಲ್ಲಿ ರಿಪಬ್ಲಿಕನ್​ ಪಕ್ಷದ ಡೊನಾಲ್ಡ್​ ಟ್ರಂಪ್​ಗಿಂತ ಬಿಡೆನ್​ ತುಂಬ ಕಡಿಮೆ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದರಿಂದ ಮರುಎಣಿಕೆಗೆ ಆದೇಶ ನೀಡಲಾಗಿತ್ತು. ಇದೀಗ ಜಾರ್ಜಿಯಾದ ಮತ ಎಣಿಕೆಯೂ ಮುಗಿದಿದ್ದು ಅಲ್ಲಿ ಕೂಡ ಜೋ ಬೈಡನ್​​​ ಅವರೇ ಗೆದ್ದಿದ್ದಾರೆ.

ಬೈಡನ್​ಗೆ 12,284 ಮತಗಳ ಅಂತರದ ಗೆಲುವು.. ಸುಮಾರು 5 ಮಿಲಿಯನ್​ ಮತ ಚಲಾವಣೆ ಆಗಿದ್ದ ಜಾರ್ಜಿಯಾದಲ್ಲಿ  ಎರಡನೇ ಬಾರಿಗೆ ಮ್ಯಾನ್ಯುಯಲ್​ ಆಗಿ ಮತಎಣಿಕೆ ಮಾಡಲಾಗಿದ್ದು, ಬೈಡನ್​ 12,284 ಮತಗಳ ಅಂತರದಿಂದ ಟ್ರಂಪ್ ವಿರುದ್ಧ ಗೆಲುವು ಸಾಧಿಸಿದ್ದಾರೆ.  ಮೊದಲ ಬಾರಿ ಎಣಿಕೆ ಪೂರ್ಣಗೊಂಡಾಗ ಬೈಡನ್ 14,000 ಮತಗಳಿಂದ ಮುನ್ನಡೆ ಸಾಧಿಸಿದ್ದರು ಎಂದು ಜಾರ್ಜಿಯಾದ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಜಾರ್ಜಿಯಾದಲ್ಲಿ ಡೆಮಾಕ್ರಟಿಕ್​ ಪಕ್ಷದ ಅಭ್ಯರ್ಥಿ ಗೆದ್ದಿದ್ದೇ ಇಲ್ಲ.. 1992ರಿಂದಲೂ ಜಾರ್ಜಿಯಾದಲ್ಲಿ ರಿಪಬ್ಲಿಕನ್​ ಪಕ್ಷದ ಪಾರುಪತ್ಯವೇ ಇತ್ತು. ಅವತ್ತಿಂದಲೂ ಡೆಮಾಕ್ರಟಿಕ್​ ಪಕ್ಷದ ಅಭ್ಯರ್ಥಿ ಗೆದ್ದಿದ್ದೇ ಇಲ್ಲ. ಆದರೆ ಈ ಬಾರಿ ಉಲ್ಟಾ ಆಗಿದೆ. ನವೆಂಬರ್​ 3ರಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಯಾವುದೇ ವಂಚನೆ, ಜನರ ಹಾದಿ ತಪ್ಪಿಸುವ ಕೆಲಸಗಳು ಆಗಿಲ್ಲ ಎಂದು ಸ್ಥಳೀಯ ಲೆಕ್ಕಪರಿಶೋಧನಾ ಸಂಸ್ಥೆ ದೃಢಪಡಿಸಿದೆ. ಈ ಐತಿಹಾಸಿಕ ಗೆಲವು ದಕ್ಕಿದ್ದು ಜಾರ್ಜಿಯಾದಲ್ಲಿರುವ ನಮ್ಮ ಪಕ್ಷದ ಕಾರ್ಯಕರ್ತರು, ಚುನಾವಣಾ ಅಧಿಕಾರಿಗಳ ಕಠಿಣ ಪರಿಶ್ರಮದಿಂದ. ಅವರಿಗೆ ಮನ್ನಣೆ ನೀಡಲೇಬೇಕು ಎಂದು ರಿಪಬ್ಲಿಕನ್​ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್