AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜರ್ಮನ್​ ಸಂಸತ್ತನ್ನು ಉದ್ದೇಶಿಸಿ ಭಾವನಾತ್ಮಕವಾಗಿ ಮಾತನಾಡಿದ ಉಕ್ರೇನ್​ ಅಧ್ಯಕ್ಷ; ಎದ್ದುನಿಂತು ಗೌರವ ಸಲ್ಲಿಸಿದ ಜನಪ್ರತಿನಿಧಿಗಳು

ಈ ವಿಡಿಯೋದಲ್ಲಿ ಝೆಲೆನ್ಸ್ಕಿಯವರನ್ನು ನೋಡಿದರೆ, ಅವರೊಂದು ದೇಶದ ಅಧ್ಯಕ್ಷರಾ ಎಂಬ ಪ್ರಶ್ನೆ ಮೂಡುವಂತಾಗಿದೆ. ಒಂದು ಖಾಕಿ ಬಣ್ಣದ ಟಿ ಶರ್ಟ್​ ತೊಟ್ಟಿದ್ದಾರೆ. ಕಣ್ಣ ಕೆಳಗೆ ಕಪ್ಪಾಗಿವೆ.

ಜರ್ಮನ್​ ಸಂಸತ್ತನ್ನು ಉದ್ದೇಶಿಸಿ ಭಾವನಾತ್ಮಕವಾಗಿ ಮಾತನಾಡಿದ ಉಕ್ರೇನ್​ ಅಧ್ಯಕ್ಷ; ಎದ್ದುನಿಂತು ಗೌರವ ಸಲ್ಲಿಸಿದ ಜನಪ್ರತಿನಿಧಿಗಳು
ವೊಲೊಡಿಮಿರ್ ಝೆಲೆನ್ಸ್ಕಿಗೆ ಎದ್ದುನಿಂತು ಗೌರವ ಸಲ್ಲಿಸಿದ ಜರ್ಮನ್​ ಎಂಪಿಗಳು
TV9 Web
| Edited By: |

Updated on:Mar 17, 2022 | 5:27 PM

Share

ರಷ್ಯಾ ಆಕ್ರಮಣಕ್ಕೆ ತುತ್ತಾಗಿರುವ ಉಕ್ರೇನ್​​ನ ಸಹಾಯಕ್ಕೆ ಬನ್ನಿ, ಇಲ್ಲಿ ರಷ್ಯಾ ನಿರ್ಮಿಸುತ್ತಿರುವ ಗೋಡೆಯ ನಾಶ ಮಾಡಲು ಸಹಾಯ ಮಾಡಿ ಎಂದು ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜರ್ಮನಿಯ ಜನಪ್ರತಿನಿಧಿಗಳ ಬಳಿ ಭಾವನಾತ್ಮಕವಾಗಿ ಮನವಿ ಮಾಡಿದ್ದಾರೆ. ಇಂದು ಜರ್ಮನಿ ಸಂಸತ್ತನ್ನು ಉದ್ದೇಶಿಸಿ, ವಿಡಿಯೋ ಮೂಲಕ ಮಾತನಾಡಿದ ಝೆಲೆನ್ಸ್ಕಿ, ರಷ್ಯಾ ಉಕ್ರೇನ್​​ನಲ್ಲಿ ಗೋಡೆ ನಿರ್ಮಾಣ ಮಾಡುತ್ತಿದೆ. ಇದು ಬರ್ಲಿನ್​ ವಾಲ್​​ನಂತಲ್ಲ, ಇದು ಮಧ್ಯ ಏಷ್ಯಾದಲ್ಲಿ, ಸ್ವಾತಂತ್ರ್ಯವನ್ನು ತಡೆಯಲು ಕಟ್ಟಿದ ದಾಸ್ಯವೆಂಬ ಗೋಡೆ. ರಷ್ಯಾ ಉಕ್ರೇನ್​ ಮೇಲೆ ಒಂದೊಂದು ಬಾಂಬ್​ ಹಾಕಿದಾಗಲೂ ಈ ಗೋಡೆಯ ಗಾತ್ರ ಹೆಚ್ಚುತ್ತಲೇ ಹೋಗುತ್ತಿದೆ ಎಂದು ಜರ್ಮನ್​ ಸಂಸದರುಗಳ ಎದುರು ನೋವು ತೋಡಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ಝೆಲೆನ್ಸ್ಕಿಯವರನ್ನು ನೋಡಿದರೆ, ಅವರೊಂದು ದೇಶದ ಅಧ್ಯಕ್ಷರಾ ಎಂಬ ಪ್ರಶ್ನೆ ಮೂಡುವಂತಾಗಿದೆ. ಒಂದು ಖಾಕಿ ಬಣ್ಣದ ಟಿ ಶರ್ಟ್​ ತೊಟ್ಟಿದ್ದಾರೆ. ಕಣ್ಣ ಕೆಳಗೆ ಕಪ್ಪಾಗಿವೆ. ಝೆಲೆನ್ಸ್ಕಿ ಭಾವನಾತ್ಮಕವಾಗಿ ಮಾತನಾಡುತ್ತಿದ್ದಂತೆ, ಜರ್ಮನ್​ ಸಂಸತ್ತಿನ ಕೆಳಮನೆಯ ಸದಸ್ಯರೆಲ್ಲ ಎದ್ದು ನಿಂತು, ಚಪ್ಪಾಳೆ ಹೊಡೆಯುತ್ತ ಗೌರವ ಸೂಚಿಸಿದ್ದಾರೆ. ಈ ಮೂಲಕ ಝೆಲೆನ್ಸ್ಕಿಯವರಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಇದೇ ವೇಳೆ ಝೆಲೆನ್ಸ್ಕಿ, ರಷ್ಯಾದಿಂದ ಜರ್ಮನಿಗೆ ಬಾಲ್ಟಿಕ್​ ಸಮುದ್ರದ ಮೂಲಕ ತರಲು ಉದ್ದೇಶಿಸಿರುವ ನೈಸರ್ಗಿಕ ಅನಿಲ ಪೈಪ್​ಲೈನ್​ ಯೋಜನೆ ನಾರ್ಡ್​ ಸ್ಟ್ರೀಮ್​ ಬಗ್ಗೆಯೂ ಉಲ್ಲೇಖ ಮಾಡಿ, ಅದನ್ನು ವಿರೋಧಿಸಿದ್ದಾರೆ. ಈ ಯೋಜನೆ ಉಕ್ರೇನ್​ ಮತ್ತು ಯುರೋಪ್​ ಭದ್ರತೆಗೆ ಧಕ್ಕೆಯುಂಟು ಮಾಡುತ್ತದೆ ಎಂದೂ ಹೇಳಿದ್ದಾರೆ.

ಜರ್ಮನಿ ರಷ್ಯಾದ ತೈಲಗಳ ಮೇಲೆ ತುಂಬ ಅವಲಂಬಿತವಾದ ದೇಶ. ಹಾಗಿದ್ದಾಗ್ಯೂ ರಷ್ಯಾ ಉಕ್ರೇನ್ ಮೇಲೆ ಮಾಡಿದ ಆಕ್ರಮಣವನ್ನು ಖಂಡಿಸಿದ್ದಲ್ಲದೆ, ಈ ವರ್ಷದ ಅಂತ್ಯದಲ್ಲಿ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದರಿಂದ ಸಂಪೂರ್ಣವಾಗಿ ಮುಕ್ತವಾಗುವ ಘೋಷಣೆಯನ್ನೂ ಮಾಡಿದೆ. ಈಗಾಗಲೇ ರಷ್ಯಾದ ಮೇಲೆ ಹಲವು ದೇಶಗಳು ವಿವಿಧ ನಿರ್ಬಂಧ ವಿಧಿಸಿವೆ. ಹೀಗಾಗಿ ರಷ್ಯಾದ ಆರ್ಥಿಕತೆಯೂ ಸಂಕಷ್ಟಕ್ಕೀಡಾಗುತ್ತಿದೆ.

ಇದನ್ನೂ ಓದಿ: ನಿಮ್ಮಲ್ಲಿ ಯಾರಾದರೂ ಲಂಚ ಕೇಳಿದರೆ ಇಲ್ಲ ಎಂದು ಹೇಳಬೇಡಿ, ಸಂಭಾಷಣೆ ರೆಕಾರ್ಡ್ ಮಾಡಿ  ಕಳಿಸಿ: ಕೇಜ್ರಿವಾಲ್

Published On - 5:26 pm, Thu, 17 March 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ