AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ತಿಂಗಳಲ್ಲಿ ಜರ್ಮನಿಯಲ್ಲಿ ಬಹುತೇಕರು ಕೊರೊನಾದಿಂದ ಗುಣಮುಖರಾಗುತ್ತಾರೆ ಇಲ್ಲವೇ ಸಾಯುತ್ತಾರೆ: ಆರೋಗ್ಯ ಸಚಿವರ ಖಡಕ್​ ವಾರ್ನ್​

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಜರ್ಮನಿ ಕಳೆದ ವಾರ ಕಠಿಣ ನಿರ್ಬಂಧಗಳನ್ನು ಘೋಷಿಸಿದೆ.  ಲಸಿಕೆ ಹಾಕದವರಿಗೆ ಚಿತ್ರಮಂದಿರಗಳು, ಜಿಮ್​​ಗಳು, ಹೋಟೆಲ್​​ಗಳು ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧ ಹೇರಲಾಗುವುದು ಎಂದು ಹೇಳಿದೆ. 

ಕೆಲವೇ ತಿಂಗಳಲ್ಲಿ ಜರ್ಮನಿಯಲ್ಲಿ ಬಹುತೇಕರು ಕೊರೊನಾದಿಂದ ಗುಣಮುಖರಾಗುತ್ತಾರೆ ಇಲ್ಲವೇ ಸಾಯುತ್ತಾರೆ: ಆರೋಗ್ಯ ಸಚಿವರ ಖಡಕ್​ ವಾರ್ನ್​
ಜರ್ಮನಿ ಆರೋಗ್ಯ ಸಚಿವ
TV9 Web
| Edited By: |

Updated on: Nov 23, 2021 | 11:21 AM

Share

ಕೆಲವೇ ತಿಂಗಳುಗಳಲ್ಲಿ ಅಂದರೆ ಚಳಿಗಾಲ ಮುಗಿಯುವುದರೊಳಗೆ ಜರ್ಮನಿಯಲ್ಲಿ ಬಹುತೇಕರು ಅಥವಾ ಎಲ್ಲರೂ ಕೊರೊನಾ ಲಸಿಕೆಯನ್ನು ಪಡೆಯುತ್ತಾರೆ, ಕೊರೊನಾದಿಂದ ಗುಣಮುಖರಾಗುತ್ತಾರೆ ಇಲ್ಲವೇ ಸಾಯುತ್ತಾರೆ ಎಂದು ಜರ್ಮನ್​ ಆರೋಗ್ಯ ಸಚಿವ ಜೆನ್ಸ್ ಸ್ಪಾನ್ ಎಚ್ಚರಿಸಿದ್ದಾರೆ. ಜರ್ಮನಿಯಲ್ಲಿ ಕೊರೊನಾದ ಡೆಲ್ಟಾ ರೂಪಾಂತರ ವೈರಸ್ ಕಾಟ ಹೆಚ್ಚಾಗಿದೆ. ಈ ಮಧ್ಯೆ ಜರ್ಮನಿಯ ದಕ್ಷಿಣ ನೆರೆರಾಷ್ಟ್ರ ಆಸ್ಟ್ರಿಯಾ ಮತ್ತೆ ದೇಶಾದ್ಯಂತ ಲಾಕ್​ಡೌನ್​ ಹೇರಿದೆ.  ಅದರ ಬೆನ್ನಲ್ಲೇ ಜೆನ್ಸ್ ಸ್ಪಾನ್ ಹೀಗೊಂದು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಈ ಮೂಲಕ ಆದಷ್ಟು ಬೇಗನೇ ಎಲ್ಲರೂ ಕೊವಿಡ್​ 19 ಲಸಿಕೆ ಪಡೆಯಿರಿ ಎಂದು ಹೇಳಿದ್ದಾರೆ.

ಜರ್ಮನಿಯಲ್ಲಿ ಇತ್ತೀಚೆಗೆ ಕೊರೊನಾ ವೈರಸ್​ ಸೋಂಕಿತರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಾಣುತ್ತಿದೆ. ಆಸ್ಪತ್ರೆಗಳಲ್ಲಿ ಐಸಿಯು ಬೆಡ್​ಗಳ ಕೊರತೆ ಎದುರಾಗಿದ್ದು ವರದಿಯಾಗಿದೆ.  ಈ ಬಗ್ಗೆ ಆಸ್ಪತ್ರೆಗಳ ವೈದ್ಯರೇ ಎಚ್ಚರಿಕೆ ನೀಡುತ್ತಿದ್ದಾರೆ. ಜರ್ಮನಿಯಲ್ಲಿ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುತ್ತಿದ್ದರೂ ಕೂಡ ಇದುವರೆಗೆ ಶೇ.68ರಷ್ಟು ಜನರು ಮಾತ್ರ ಪೂರ್ಣ ಪ್ರಮಾಣದಲ್ಲಿ ಕೊರೊನಾ ಲಸಿಕೆ ಪಡೆದಿದ್ದಾರೆ. ಆದರೆ ಕೊರೊನಾ ಸಾಂಕ್ರಾಮಿಕವನ್ನು ನಿಯಂತ್ರಿಸುವ ದೃಷ್ಟಿಯಿಂದ ಈ ಪ್ರಮಾಣ ತುಂಬ ಕಡಿಮೆಯಾಯಿತು ಎಂದು ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಯುರೋಪ್​​ನಲ್ಲಿಯೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ದೇಶ ಜರ್ಮನಿ. ಇಲ್ಲಿ ಸೋಮವಾರ 30,643 ಹೊಸ ಕೊವಿಡ್​ 19 ಪ್ರಕರಣಗಳು ದಾಖಲಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 5.3ಮಿಲಿಯನ್​​ಗೆ ತಲುಪಿದೆ. ಇನ್ನು 24ಗಂಟೆಯಲ್ಲಿ 62 ಮಂದಿ ಕೊರೊನಾದಿಂದ ಮೃತಪಟ್ಟಿದ್ದು ಒಟ್ಟಾರೆ ಸಾವನ್ನಪ್ಪಿದವರ ಸಂಖ್ಯೆ 1,00,000ಕ್ಕೆ ಏರಿಕೆಯಾಗಿದೆ.  ಇದೀಗ ಮತ್ತೆ ಏರಿಕೆಯಾಗುತ್ತಿರುವ ಸೋಂಕಿತರ ಸಂಖ್ಯೆಯಿಂದಾಗಿ ಆಸ್ಪತ್ರೆಗಳಲ್ಲೂ ಅವ್ಯವಸ್ಥೆ ಆಗಿದೆ. ನಿಭಾಯಿಸುವುದು ಕಷ್ಟವಿದೆ ಎಂದು ಜೆನ್ಸ್ ಸ್ಪಾನ್ ತಿಳಿಸಿದ್ದಾರೆ.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಜರ್ಮನಿ ಕಳೆದ ವಾರ ಕಠಿಣ ನಿರ್ಬಂಧಗಳನ್ನು ಘೋಷಿಸಿದೆ.  ಲಸಿಕೆ ಹಾಕದವರಿಗೆ ಚಿತ್ರಮಂದಿರಗಳು, ಜಿಮ್​​ಗಳು, ಹೋಟೆಲ್​​ಗಳು ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧ ಹೇರಲಾಗುವುದು ಎಂದು ಹೇಳಿದೆ.  ಬವೇರಿಯಾ ಮತ್ತು ಸ್ಯಾಕ್ಸೋನಿ ಸೇರಿ ಜರ್ಮನಿಯ ಹಲವು ಪ್ರದೇಶಗಳಲ್ಲಿ ಕ್ರಿಸ್​ಮಸ್​ ಮಾರುಕಟ್ಟೆಯನ್ನು ನಿರ್ಬಂಧಿಸಲಾಗಿದೆ. ಲಸಿಕೆ ಹಾಕಿಸದವರು ಅನಿವಾರ್ಯ ಕಾರಣ ಹೊರತು, ಸಾರ್ವಜನಿಕ ಸ್ಥಳಕ್ಕೆ ಬರಬೇಡಿ ಎಂದೂ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:  ಫೂಟ್​ಬಾಲ್​ ತಾರೆಯೆನಿಸಿದ್ದ ಡಿಯೇಗೋ ಮೆರಡೋನ ವಿರುದ್ಧ ರೇಪ್​ ಆರೋಪ; ನನ್ನ ಬಾಲ್ಯವನ್ನು ಕರಾಳವಾಗಿಸಿದರು ಎಂದ ಮಹಿಳೆ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ