AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರನಡೆದಿದ್ದು ಒಳ್ಳೆಯದೇ ಆಯಿತು; ಜೋ ಕೆಂಟ್ ರಾಜೀನಾಮೆ ಕುರಿತು ಟ್ರಂಪ್ ಪ್ರತಿಕ್ರಿಯೆ

ಇರಾನ್ ಅಮೆರಿಕಕ್ಕೆ ಯಾವುದೇ ಬೆದರಿಕೆ ಒಡ್ಡಿರಲಿಲ್ಲ. ಇಸ್ರೇಲ್​ನ ಒತ್ತಡದಿಂದ ಅಮೆರಿಕ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿತು ಎಂದು ಹೇಳಿ ಅಮೆರಿಕದ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥನ ಸ್ಥಾನಕ್ಕೆ ಜೋ ಕೆಂಟ್ ರಾಜೀನಾಮೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೋ ಕೆಂಟ್ ಒಳ್ಳೆಯ ವ್ಯಕ್ತಿ ಎಂದುಕೊಂಡಿದ್ದೆ, ಅವರು ರಾಜೀನಾಮೆ ನೀಡಿ ಹೊರಹೋಗಿದ್ದೇ ಒಳ್ಳೆಯದಾಯಿತು ಎಂದಿದ್ದಾರೆ.

ಹೊರನಡೆದಿದ್ದು ಒಳ್ಳೆಯದೇ ಆಯಿತು; ಜೋ ಕೆಂಟ್ ರಾಜೀನಾಮೆ ಕುರಿತು ಟ್ರಂಪ್ ಪ್ರತಿಕ್ರಿಯೆ
Joe Kent Woth Trump
ಸುಷ್ಮಾ ಚಕ್ರೆ
|

Updated on: Mar 17, 2026 | 10:51 PM

Share

ವಾಷಿಂಗ್ಟನ್, ಮಾರ್ಚ್ 17: ಇರಾನ್ ಮೇಲೆ ಇಸ್ರೇಲ್ ಜೊತೆ ಕೈಜೋಡಿಸಿ ಅಮೆರಿಕ ಯುದ್ಧ ಸಾರಿದ ನಂತರ ಟ್ರಂಪ್ (Donald Trump) ಸರ್ಕಾರದ ಪ್ರಮುಖ ಅಧಿಕಾರಿಯಾದ ಜೋ ಕೆಂಟ್ ರಾಜೀನಾಮೆ ನೀಡಿದ್ದಾರೆ. ಅಮೆರಿಕದ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕನಾಗಿರುವ ಜೋ ಕೆಂಟ್ ಇಂದು ರಾಜೀನಾಮೆ ನೀಡಿದ್ದಾರೆ. ಈ ವೇಳೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದ ಅವರು ಅಮೆರಿಕಕ್ಕೆ ಇರಾನ್ ಬೆದರಿಕೆಯೊಡ್ಡಿರಲಿಲ್ಲ ಎಂದು ಹೇಳಿದ್ದರು.

ಈ ಬಗ್ಗೆ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ. “ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥ ಜೋ ಕೆಂಟ್ ರಾಜೀನಾಮೆ ನೀಡಿರುವುದು ಒಳ್ಳೆಯದೇ ಆಯಿತು. ನಾನು ಅವರ ಹೇಳಿಕೆಯನ್ನು ಓದಿದೆ. ಅವರು ಬಹಳ ಒಳ್ಳೆಯ ವ್ಯಕ್ತಿ ಎಂದು ನಾನು ಭಾವಿಸಿದ್ದೆ. ಆ ವ್ಯಕ್ತಿ ಒಳ್ಳೆಯವರೇ. ಆದರೆ ಅವರು ಯಾವಾಗಲೂ ಭದ್ರತೆಯ ವಿಚಾರದಲ್ಲಿ ದುರ್ಬಲರಾಗಿದ್ದರು. ಅವರು ರಾಜೀನಾಮೆ ನೀಡಿದ್ದೇ ಒಳ್ಳೆಯದಾಯಿತು” ಎಂದು ಶ್ವೇತಭವನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಟ್ರಂಪ್​ಗೆ ಭಾರೀ ಹೊಡೆತ; ಇರಾನ್ ಮೇಲಿನ ದಾಳಿಯನ್ನು ಖಂಡಿಸಿ ಅಮೆರಿಕದ ಅಧಿಕಾರಿ ರಾಜೀನಾಮೆ

“ನಾನು ಅವರ ಹೇಳಿಕೆಯನ್ನು ಓದಿದಾಗ ಅವರು ಹೊರಗೆ ಹೋಗಿದ್ದೇ ಒಳ್ಳೆಯದು ಎಂದುಕೊಂಡೆ. ಏಕೆಂದರೆ ಇರಾನ್ ಬೆದರಿಕೆಯೊಡ್ಡಿರಲಿಲ್ಲ ಎಂದು ಅವರು ಹೇಳಿದ್ದರು. ಆದರೆ, ಇರಾನ್ ಅಮೆರಿಕಕ್ಕೆ ಮಾತ್ರವಲ್ಲ ಪ್ರತಿಯೊಂದು ದೇಶಕ್ಕೂ ಬೆದರಿಕೆ” ಎಂದು ಟ್ರಂಪ್ ಹೇಳಿದ್ದಾರೆ.

“ಇರಾನ್ ಅಮೆರಿಕಕ್ಕೆ ಯಾವುದೇ ಬೆದರಿಕೆಯೊಡ್ಡಿರಲಿಲ್ಲ. ಇಸ್ರೇಲ್ ಪದೇಪದೆ ಒತ್ತಡ ಹೇರಿದ್ದರಿಂದ ಅಮೆರಿಕ ಇರಾನ್ ಮೇಲೆ ದಾಳಿ ನಡೆಸಲು ಕೈಜೋಡಿಸಿತು. ಬಹಳ ಯೋಚನೆಯ ಮಾಡಿ ನಾನು ಇಂದಿನಿಂದಲೇ ಜಾರಿಗೆ ಬರುವಂತೆ ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕನ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ” ಎಂದು ಜೋ ಕೆಂಟ್ ತಮ್ಮ ಎಕ್ಸ್​ ಪೇಜಿನಲ್ಲಿ ಪೋಸ್ಟ್‌ ಮಾಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು