AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರನಡೆದಿದ್ದು ಒಳ್ಳೆಯದೇ ಆಯಿತು; ಜೋ ಕೆಂಟ್ ರಾಜೀನಾಮೆ ಕುರಿತು ಟ್ರಂಪ್ ಪ್ರತಿಕ್ರಿಯೆ

ಇರಾನ್ ಅಮೆರಿಕಕ್ಕೆ ಯಾವುದೇ ಬೆದರಿಕೆ ಒಡ್ಡಿರಲಿಲ್ಲ. ಇಸ್ರೇಲ್​ನ ಒತ್ತಡದಿಂದ ಅಮೆರಿಕ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿತು ಎಂದು ಹೇಳಿ ಅಮೆರಿಕದ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥನ ಸ್ಥಾನಕ್ಕೆ ಜೋ ಕೆಂಟ್ ರಾಜೀನಾಮೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೋ ಕೆಂಟ್ ಒಳ್ಳೆಯ ವ್ಯಕ್ತಿ ಎಂದುಕೊಂಡಿದ್ದೆ, ಅವರು ರಾಜೀನಾಮೆ ನೀಡಿ ಹೊರಹೋಗಿದ್ದೇ ಒಳ್ಳೆಯದಾಯಿತು ಎಂದಿದ್ದಾರೆ.

ಹೊರನಡೆದಿದ್ದು ಒಳ್ಳೆಯದೇ ಆಯಿತು; ಜೋ ಕೆಂಟ್ ರಾಜೀನಾಮೆ ಕುರಿತು ಟ್ರಂಪ್ ಪ್ರತಿಕ್ರಿಯೆ
Joe Kent Woth Trump
ಸುಷ್ಮಾ ಚಕ್ರೆ
|

Updated on: Mar 17, 2026 | 10:51 PM

Share

ವಾಷಿಂಗ್ಟನ್, ಮಾರ್ಚ್ 17: ಇರಾನ್ ಮೇಲೆ ಇಸ್ರೇಲ್ ಜೊತೆ ಕೈಜೋಡಿಸಿ ಅಮೆರಿಕ ಯುದ್ಧ ಸಾರಿದ ನಂತರ ಟ್ರಂಪ್ (Donald Trump) ಸರ್ಕಾರದ ಪ್ರಮುಖ ಅಧಿಕಾರಿಯಾದ ಜೋ ಕೆಂಟ್ ರಾಜೀನಾಮೆ ನೀಡಿದ್ದಾರೆ. ಅಮೆರಿಕದ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕನಾಗಿರುವ ಜೋ ಕೆಂಟ್ ಇಂದು ರಾಜೀನಾಮೆ ನೀಡಿದ್ದಾರೆ. ಈ ವೇಳೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದ ಅವರು ಅಮೆರಿಕಕ್ಕೆ ಇರಾನ್ ಬೆದರಿಕೆಯೊಡ್ಡಿರಲಿಲ್ಲ ಎಂದು ಹೇಳಿದ್ದರು.

ಈ ಬಗ್ಗೆ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ. “ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥ ಜೋ ಕೆಂಟ್ ರಾಜೀನಾಮೆ ನೀಡಿರುವುದು ಒಳ್ಳೆಯದೇ ಆಯಿತು. ನಾನು ಅವರ ಹೇಳಿಕೆಯನ್ನು ಓದಿದೆ. ಅವರು ಬಹಳ ಒಳ್ಳೆಯ ವ್ಯಕ್ತಿ ಎಂದು ನಾನು ಭಾವಿಸಿದ್ದೆ. ಆ ವ್ಯಕ್ತಿ ಒಳ್ಳೆಯವರೇ. ಆದರೆ ಅವರು ಯಾವಾಗಲೂ ಭದ್ರತೆಯ ವಿಚಾರದಲ್ಲಿ ದುರ್ಬಲರಾಗಿದ್ದರು. ಅವರು ರಾಜೀನಾಮೆ ನೀಡಿದ್ದೇ ಒಳ್ಳೆಯದಾಯಿತು” ಎಂದು ಶ್ವೇತಭವನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಟ್ರಂಪ್​ಗೆ ಭಾರೀ ಹೊಡೆತ; ಇರಾನ್ ಮೇಲಿನ ದಾಳಿಯನ್ನು ಖಂಡಿಸಿ ಅಮೆರಿಕದ ಅಧಿಕಾರಿ ರಾಜೀನಾಮೆ

“ನಾನು ಅವರ ಹೇಳಿಕೆಯನ್ನು ಓದಿದಾಗ ಅವರು ಹೊರಗೆ ಹೋಗಿದ್ದೇ ಒಳ್ಳೆಯದು ಎಂದುಕೊಂಡೆ. ಏಕೆಂದರೆ ಇರಾನ್ ಬೆದರಿಕೆಯೊಡ್ಡಿರಲಿಲ್ಲ ಎಂದು ಅವರು ಹೇಳಿದ್ದರು. ಆದರೆ, ಇರಾನ್ ಅಮೆರಿಕಕ್ಕೆ ಮಾತ್ರವಲ್ಲ ಪ್ರತಿಯೊಂದು ದೇಶಕ್ಕೂ ಬೆದರಿಕೆ” ಎಂದು ಟ್ರಂಪ್ ಹೇಳಿದ್ದಾರೆ.

“ಇರಾನ್ ಅಮೆರಿಕಕ್ಕೆ ಯಾವುದೇ ಬೆದರಿಕೆಯೊಡ್ಡಿರಲಿಲ್ಲ. ಇಸ್ರೇಲ್ ಪದೇಪದೆ ಒತ್ತಡ ಹೇರಿದ್ದರಿಂದ ಅಮೆರಿಕ ಇರಾನ್ ಮೇಲೆ ದಾಳಿ ನಡೆಸಲು ಕೈಜೋಡಿಸಿತು. ಬಹಳ ಯೋಚನೆಯ ಮಾಡಿ ನಾನು ಇಂದಿನಿಂದಲೇ ಜಾರಿಗೆ ಬರುವಂತೆ ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕನ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ” ಎಂದು ಜೋ ಕೆಂಟ್ ತಮ್ಮ ಎಕ್ಸ್​ ಪೇಜಿನಲ್ಲಿ ಪೋಸ್ಟ್‌ ಮಾಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್