AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸಂಪರ್ಕದಲ್ಲಿದ್ದ ವ್ಯಕ್ತಿ ಸೋಂಕಿತರಾಗಿದ್ದಾರೆ, ಎಚ್ಚರಿಕೆ.. ಎಂದು ಸಂದೇಶ ಕಳಿಸುತ್ತದೆ ಈ ಆ್ಯಪ್​

ಆ್ಯಪ್​ ಇನ್​ಸ್ಟಾಲ್ ಮಾಡಿಕೊಂಡ ಗ್ರಾಹಕರು ಪರಸ್ಪರ ಹತ್ತಿರ ಬಂದರೆ ಆ್ಯಪ್​ ತಾನಾಗಿಯೇ ಡೇಟಾ ಸಂಗ್ರಹಿಸುತ್ತದೆ. ಒಮ್ಮೆ ಡೇಟಾ ಸಂಗ್ರಹವಾದ ನಂತರ ಆ ಇಬ್ಬರಲ್ಲಿ ಯಾವುದೇ ವ್ಯಕ್ತಿ ನಿರ್ದಿಷ್ಟ ದಿನದೊಳಗೆ ಸೋಂಕಿತನಾದರೂ ಇನ್ನೊಂದು ವ್ಯಕ್ತಿಗೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಎಚ್ಚರಿಕೆಯ ಸಂದೇಶ ರವಾನೆಯಾಗುತ್ತದೆ.

ನಿಮ್ಮ ಸಂಪರ್ಕದಲ್ಲಿದ್ದ ವ್ಯಕ್ತಿ ಸೋಂಕಿತರಾಗಿದ್ದಾರೆ, ಎಚ್ಚರಿಕೆ.. ಎಂದು ಸಂದೇಶ ಕಳಿಸುತ್ತದೆ ಈ ಆ್ಯಪ್​
ಪ್ರಾತಿನಿಧಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on:Dec 07, 2020 | 3:02 PM

Share

ಕೊವಿಡ್​ ಸೋಂಕಿತರ ಮೇಲೆ ನಿಗಾ ವಹಿಸೋಕೆ ತಾಂತ್ರಿಕವಾಗಿ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಭಾರತದಲ್ಲಿ ಆರಂಭಿಕ ಹಂತದಲ್ಲೇ ಆರೋಗ್ಯ ಸೇತು ಎಂಬ ಆ್ಯಪ್​ ಬಿಡುಗಡೆ ಮಾಡಲಾಗಿತ್ತು. ಆದರೆ ಅಮೆರಿಕಾದಲ್ಲಿ ಆರೋಗ್ಯ ಸೇತುವಿಗಿಂತಲೂ ಸುರಕ್ಷಿತ ಮತ್ತು ಸುಧಾರಿತ ತಂತ್ರಜ್ಞಾನವೊಂದು ಸಿದ್ಧವಾಗಿದೆ.

ಗೂಗಲ್ ಮತ್ತು ಆ್ಯಪಲ್ ಕಂಪೆನಿಯ ಸಹಭಾಗಿತ್ವದಲ್ಲಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ. ಮೊಬೈಲ್ ಬ್ಲೂಟೂತ್ ಮುಖಾಂತರ ಡೇಟಾ ಸಂಗ್ರಹಿಸುವ ಕ್ರಮ ಇದಾಗಿದ್ದು ಸಂಗ್ರಹವಾಗುವ ವಿವರಗಳು ಯಾವುದೇ ರೀತಿಯಲ್ಲೂ ಸೋರಿಕೆಯಾಗದು ಎಂದು ಕಂಪೆನಿಗಳು ಭರವಸೆ ನೀಡಿವೆ.

ಅಮೆರಿಕಾದ ಜನರಿಗೆ ಆ್ಯಪ್ ಲಭ್ಯ ಅಮೆರಿಕಾದ ಕೆಲ ಪ್ರಾಂತ್ಯಗಳ ಜನರಿಗೆ ಈ ಆ್ಯಪ್​ ಬಳಸಲು ಸ್ಥಳೀಯ ಆಡಳಿತದಿಂದ ಅನುಮತಿ ಸಿಕ್ಕಿದೆ. ಆ್ಯಪ್​ ಇನ್​ಸ್ಟಾಲ್ ಮಾಡಿಕೊಂಡ ಗ್ರಾಹಕರು ಪರಸ್ಪರ ಹತ್ತಿರ ಬಂದರೆ ಆ್ಯಪ್​ ತಾನಾಗಿಯೇ ಡೇಟಾ ಸಂಗ್ರಹಿಸುತ್ತದೆ. ಒಮ್ಮೆ ಡೇಟಾ ಸಂಗ್ರಹವಾದ ನಂತರ ಆ ಇಬ್ಬರಲ್ಲಿ ಯಾವುದೇ ವ್ಯಕ್ತಿ ನಿರ್ದಿಷ್ಟ ದಿನದೊಳಗೆ ಸೋಂಕಿತನಾದರೂ ಇನ್ನೊಂದು ವ್ಯಕ್ತಿಗೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಎಚ್ಚರಿಕೆಯ ಸಂದೇಶ ರವಾನೆಯಾಗುತ್ತದೆ.

ಆದರೆ, ಈ ಸಂದರ್ಭದಲ್ಲಿ ಸೋಂಕಿತನ ಹೆಸರು ಮತ್ತು ವಿವರ ಗೌಪ್ಯವಾಗಿಯೇ ಇರುತ್ತದೆ. ಬದಲಾಗಿ ನೀವು ಸೋಂಕಿತರ ಸಂಪರ್ಕಕ್ಕೆ ಬಂದಿದ್ದೀರಿ ಎಂಬ ಸಂದೇಶವಷ್ಟೇ ರವಾನೆಯಾಗುತ್ತದೆ. ಆ್ಯಪಲ್ ಮತ್ತು ಗೂಗಲ್​ ಸ್ಟೋರ್​ಗಳಲ್ಲಿ ಈ ಆ್ಯಪ್​ ಲಭ್ಯವಿದೆ.

ಅಮೆರಿಕಾದ ಕೆಲವು ಪ್ರಾಂತ್ಯಗಳನ್ನು ಹೊರತುಪಡಿಸಿದರೆ ಮಿಕ್ಕೆಲ್ಲಾ ಕಡೆಗಳಲ್ಲಿ ಅ್ಯಪ್​ ಬಳಕೆಗೆ ಲಭ್ಯವಿದೆ. ಒಂದು ವೇಳೆ ಬಳಕೆದಾರರು ಸೋಂಕಿತರ ಸಂಪರ್ಕಕ್ಕೆ ಬಂದ ನಂತರ ಆ್ಯಪ್ ಬಳಕೆಗೆ ಅನುಮತಿ ಇಲ್ಲದ ಪ್ರದೇಶಕ್ಕೆ ಹೋದರೂ ಎಚ್ಚರಿಕೆ ಸಂದೇಶ ರವಾನೆಯಾಗುತ್ತದೆ ಎಂದು ತಿಳಿದುಬಂದಿದೆ.

ಜನಪ್ರಿಯ ಆ್ಯಪ್​​ಗಳಲ್ಲಿಯೂ ವೈರಸ್ ಪತ್ತೆ​; ಇವು ನಿಮ್ಮ ಮೊಬೈಲ್​ನಲ್ಲೂ ಇವೆಯಾ ಒಮ್ಮೆ ಚೆಕ್​ ಮಾಡಿಕೊಳ್ಳಿ!

Published On - 2:59 pm, Mon, 7 December 20

Follow Us
Skanda
Skanda
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು