AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸಂಪರ್ಕದಲ್ಲಿದ್ದ ವ್ಯಕ್ತಿ ಸೋಂಕಿತರಾಗಿದ್ದಾರೆ, ಎಚ್ಚರಿಕೆ.. ಎಂದು ಸಂದೇಶ ಕಳಿಸುತ್ತದೆ ಈ ಆ್ಯಪ್​

ಆ್ಯಪ್​ ಇನ್​ಸ್ಟಾಲ್ ಮಾಡಿಕೊಂಡ ಗ್ರಾಹಕರು ಪರಸ್ಪರ ಹತ್ತಿರ ಬಂದರೆ ಆ್ಯಪ್​ ತಾನಾಗಿಯೇ ಡೇಟಾ ಸಂಗ್ರಹಿಸುತ್ತದೆ. ಒಮ್ಮೆ ಡೇಟಾ ಸಂಗ್ರಹವಾದ ನಂತರ ಆ ಇಬ್ಬರಲ್ಲಿ ಯಾವುದೇ ವ್ಯಕ್ತಿ ನಿರ್ದಿಷ್ಟ ದಿನದೊಳಗೆ ಸೋಂಕಿತನಾದರೂ ಇನ್ನೊಂದು ವ್ಯಕ್ತಿಗೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಎಚ್ಚರಿಕೆಯ ಸಂದೇಶ ರವಾನೆಯಾಗುತ್ತದೆ.

ನಿಮ್ಮ ಸಂಪರ್ಕದಲ್ಲಿದ್ದ ವ್ಯಕ್ತಿ ಸೋಂಕಿತರಾಗಿದ್ದಾರೆ, ಎಚ್ಚರಿಕೆ.. ಎಂದು ಸಂದೇಶ ಕಳಿಸುತ್ತದೆ ಈ ಆ್ಯಪ್​
ಪ್ರಾತಿನಿಧಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on:Dec 07, 2020 | 3:02 PM

Share

ಕೊವಿಡ್​ ಸೋಂಕಿತರ ಮೇಲೆ ನಿಗಾ ವಹಿಸೋಕೆ ತಾಂತ್ರಿಕವಾಗಿ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಭಾರತದಲ್ಲಿ ಆರಂಭಿಕ ಹಂತದಲ್ಲೇ ಆರೋಗ್ಯ ಸೇತು ಎಂಬ ಆ್ಯಪ್​ ಬಿಡುಗಡೆ ಮಾಡಲಾಗಿತ್ತು. ಆದರೆ ಅಮೆರಿಕಾದಲ್ಲಿ ಆರೋಗ್ಯ ಸೇತುವಿಗಿಂತಲೂ ಸುರಕ್ಷಿತ ಮತ್ತು ಸುಧಾರಿತ ತಂತ್ರಜ್ಞಾನವೊಂದು ಸಿದ್ಧವಾಗಿದೆ.

ಗೂಗಲ್ ಮತ್ತು ಆ್ಯಪಲ್ ಕಂಪೆನಿಯ ಸಹಭಾಗಿತ್ವದಲ್ಲಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ. ಮೊಬೈಲ್ ಬ್ಲೂಟೂತ್ ಮುಖಾಂತರ ಡೇಟಾ ಸಂಗ್ರಹಿಸುವ ಕ್ರಮ ಇದಾಗಿದ್ದು ಸಂಗ್ರಹವಾಗುವ ವಿವರಗಳು ಯಾವುದೇ ರೀತಿಯಲ್ಲೂ ಸೋರಿಕೆಯಾಗದು ಎಂದು ಕಂಪೆನಿಗಳು ಭರವಸೆ ನೀಡಿವೆ.

ಅಮೆರಿಕಾದ ಜನರಿಗೆ ಆ್ಯಪ್ ಲಭ್ಯ ಅಮೆರಿಕಾದ ಕೆಲ ಪ್ರಾಂತ್ಯಗಳ ಜನರಿಗೆ ಈ ಆ್ಯಪ್​ ಬಳಸಲು ಸ್ಥಳೀಯ ಆಡಳಿತದಿಂದ ಅನುಮತಿ ಸಿಕ್ಕಿದೆ. ಆ್ಯಪ್​ ಇನ್​ಸ್ಟಾಲ್ ಮಾಡಿಕೊಂಡ ಗ್ರಾಹಕರು ಪರಸ್ಪರ ಹತ್ತಿರ ಬಂದರೆ ಆ್ಯಪ್​ ತಾನಾಗಿಯೇ ಡೇಟಾ ಸಂಗ್ರಹಿಸುತ್ತದೆ. ಒಮ್ಮೆ ಡೇಟಾ ಸಂಗ್ರಹವಾದ ನಂತರ ಆ ಇಬ್ಬರಲ್ಲಿ ಯಾವುದೇ ವ್ಯಕ್ತಿ ನಿರ್ದಿಷ್ಟ ದಿನದೊಳಗೆ ಸೋಂಕಿತನಾದರೂ ಇನ್ನೊಂದು ವ್ಯಕ್ತಿಗೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಎಚ್ಚರಿಕೆಯ ಸಂದೇಶ ರವಾನೆಯಾಗುತ್ತದೆ.

ಆದರೆ, ಈ ಸಂದರ್ಭದಲ್ಲಿ ಸೋಂಕಿತನ ಹೆಸರು ಮತ್ತು ವಿವರ ಗೌಪ್ಯವಾಗಿಯೇ ಇರುತ್ತದೆ. ಬದಲಾಗಿ ನೀವು ಸೋಂಕಿತರ ಸಂಪರ್ಕಕ್ಕೆ ಬಂದಿದ್ದೀರಿ ಎಂಬ ಸಂದೇಶವಷ್ಟೇ ರವಾನೆಯಾಗುತ್ತದೆ. ಆ್ಯಪಲ್ ಮತ್ತು ಗೂಗಲ್​ ಸ್ಟೋರ್​ಗಳಲ್ಲಿ ಈ ಆ್ಯಪ್​ ಲಭ್ಯವಿದೆ.

ಅಮೆರಿಕಾದ ಕೆಲವು ಪ್ರಾಂತ್ಯಗಳನ್ನು ಹೊರತುಪಡಿಸಿದರೆ ಮಿಕ್ಕೆಲ್ಲಾ ಕಡೆಗಳಲ್ಲಿ ಅ್ಯಪ್​ ಬಳಕೆಗೆ ಲಭ್ಯವಿದೆ. ಒಂದು ವೇಳೆ ಬಳಕೆದಾರರು ಸೋಂಕಿತರ ಸಂಪರ್ಕಕ್ಕೆ ಬಂದ ನಂತರ ಆ್ಯಪ್ ಬಳಕೆಗೆ ಅನುಮತಿ ಇಲ್ಲದ ಪ್ರದೇಶಕ್ಕೆ ಹೋದರೂ ಎಚ್ಚರಿಕೆ ಸಂದೇಶ ರವಾನೆಯಾಗುತ್ತದೆ ಎಂದು ತಿಳಿದುಬಂದಿದೆ.

ಜನಪ್ರಿಯ ಆ್ಯಪ್​​ಗಳಲ್ಲಿಯೂ ವೈರಸ್ ಪತ್ತೆ​; ಇವು ನಿಮ್ಮ ಮೊಬೈಲ್​ನಲ್ಲೂ ಇವೆಯಾ ಒಮ್ಮೆ ಚೆಕ್​ ಮಾಡಿಕೊಳ್ಳಿ!

Published On - 2:59 pm, Mon, 7 December 20

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ