AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸಂಪರ್ಕದಲ್ಲಿದ್ದ ವ್ಯಕ್ತಿ ಸೋಂಕಿತರಾಗಿದ್ದಾರೆ, ಎಚ್ಚರಿಕೆ.. ಎಂದು ಸಂದೇಶ ಕಳಿಸುತ್ತದೆ ಈ ಆ್ಯಪ್​

ಆ್ಯಪ್​ ಇನ್​ಸ್ಟಾಲ್ ಮಾಡಿಕೊಂಡ ಗ್ರಾಹಕರು ಪರಸ್ಪರ ಹತ್ತಿರ ಬಂದರೆ ಆ್ಯಪ್​ ತಾನಾಗಿಯೇ ಡೇಟಾ ಸಂಗ್ರಹಿಸುತ್ತದೆ. ಒಮ್ಮೆ ಡೇಟಾ ಸಂಗ್ರಹವಾದ ನಂತರ ಆ ಇಬ್ಬರಲ್ಲಿ ಯಾವುದೇ ವ್ಯಕ್ತಿ ನಿರ್ದಿಷ್ಟ ದಿನದೊಳಗೆ ಸೋಂಕಿತನಾದರೂ ಇನ್ನೊಂದು ವ್ಯಕ್ತಿಗೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಎಚ್ಚರಿಕೆಯ ಸಂದೇಶ ರವಾನೆಯಾಗುತ್ತದೆ.

ನಿಮ್ಮ ಸಂಪರ್ಕದಲ್ಲಿದ್ದ ವ್ಯಕ್ತಿ ಸೋಂಕಿತರಾಗಿದ್ದಾರೆ, ಎಚ್ಚರಿಕೆ.. ಎಂದು ಸಂದೇಶ ಕಳಿಸುತ್ತದೆ ಈ ಆ್ಯಪ್​
ಪ್ರಾತಿನಿಧಿಕ ಚಿತ್ರ
Skanda
| Updated By: ಸಾಧು ಶ್ರೀನಾಥ್​|

Updated on:Dec 07, 2020 | 3:02 PM

Share

ಕೊವಿಡ್​ ಸೋಂಕಿತರ ಮೇಲೆ ನಿಗಾ ವಹಿಸೋಕೆ ತಾಂತ್ರಿಕವಾಗಿ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಭಾರತದಲ್ಲಿ ಆರಂಭಿಕ ಹಂತದಲ್ಲೇ ಆರೋಗ್ಯ ಸೇತು ಎಂಬ ಆ್ಯಪ್​ ಬಿಡುಗಡೆ ಮಾಡಲಾಗಿತ್ತು. ಆದರೆ ಅಮೆರಿಕಾದಲ್ಲಿ ಆರೋಗ್ಯ ಸೇತುವಿಗಿಂತಲೂ ಸುರಕ್ಷಿತ ಮತ್ತು ಸುಧಾರಿತ ತಂತ್ರಜ್ಞಾನವೊಂದು ಸಿದ್ಧವಾಗಿದೆ.

ಗೂಗಲ್ ಮತ್ತು ಆ್ಯಪಲ್ ಕಂಪೆನಿಯ ಸಹಭಾಗಿತ್ವದಲ್ಲಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ. ಮೊಬೈಲ್ ಬ್ಲೂಟೂತ್ ಮುಖಾಂತರ ಡೇಟಾ ಸಂಗ್ರಹಿಸುವ ಕ್ರಮ ಇದಾಗಿದ್ದು ಸಂಗ್ರಹವಾಗುವ ವಿವರಗಳು ಯಾವುದೇ ರೀತಿಯಲ್ಲೂ ಸೋರಿಕೆಯಾಗದು ಎಂದು ಕಂಪೆನಿಗಳು ಭರವಸೆ ನೀಡಿವೆ.

ಅಮೆರಿಕಾದ ಜನರಿಗೆ ಆ್ಯಪ್ ಲಭ್ಯ ಅಮೆರಿಕಾದ ಕೆಲ ಪ್ರಾಂತ್ಯಗಳ ಜನರಿಗೆ ಈ ಆ್ಯಪ್​ ಬಳಸಲು ಸ್ಥಳೀಯ ಆಡಳಿತದಿಂದ ಅನುಮತಿ ಸಿಕ್ಕಿದೆ. ಆ್ಯಪ್​ ಇನ್​ಸ್ಟಾಲ್ ಮಾಡಿಕೊಂಡ ಗ್ರಾಹಕರು ಪರಸ್ಪರ ಹತ್ತಿರ ಬಂದರೆ ಆ್ಯಪ್​ ತಾನಾಗಿಯೇ ಡೇಟಾ ಸಂಗ್ರಹಿಸುತ್ತದೆ. ಒಮ್ಮೆ ಡೇಟಾ ಸಂಗ್ರಹವಾದ ನಂತರ ಆ ಇಬ್ಬರಲ್ಲಿ ಯಾವುದೇ ವ್ಯಕ್ತಿ ನಿರ್ದಿಷ್ಟ ದಿನದೊಳಗೆ ಸೋಂಕಿತನಾದರೂ ಇನ್ನೊಂದು ವ್ಯಕ್ತಿಗೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಎಚ್ಚರಿಕೆಯ ಸಂದೇಶ ರವಾನೆಯಾಗುತ್ತದೆ.

ಆದರೆ, ಈ ಸಂದರ್ಭದಲ್ಲಿ ಸೋಂಕಿತನ ಹೆಸರು ಮತ್ತು ವಿವರ ಗೌಪ್ಯವಾಗಿಯೇ ಇರುತ್ತದೆ. ಬದಲಾಗಿ ನೀವು ಸೋಂಕಿತರ ಸಂಪರ್ಕಕ್ಕೆ ಬಂದಿದ್ದೀರಿ ಎಂಬ ಸಂದೇಶವಷ್ಟೇ ರವಾನೆಯಾಗುತ್ತದೆ. ಆ್ಯಪಲ್ ಮತ್ತು ಗೂಗಲ್​ ಸ್ಟೋರ್​ಗಳಲ್ಲಿ ಈ ಆ್ಯಪ್​ ಲಭ್ಯವಿದೆ.

ಅಮೆರಿಕಾದ ಕೆಲವು ಪ್ರಾಂತ್ಯಗಳನ್ನು ಹೊರತುಪಡಿಸಿದರೆ ಮಿಕ್ಕೆಲ್ಲಾ ಕಡೆಗಳಲ್ಲಿ ಅ್ಯಪ್​ ಬಳಕೆಗೆ ಲಭ್ಯವಿದೆ. ಒಂದು ವೇಳೆ ಬಳಕೆದಾರರು ಸೋಂಕಿತರ ಸಂಪರ್ಕಕ್ಕೆ ಬಂದ ನಂತರ ಆ್ಯಪ್ ಬಳಕೆಗೆ ಅನುಮತಿ ಇಲ್ಲದ ಪ್ರದೇಶಕ್ಕೆ ಹೋದರೂ ಎಚ್ಚರಿಕೆ ಸಂದೇಶ ರವಾನೆಯಾಗುತ್ತದೆ ಎಂದು ತಿಳಿದುಬಂದಿದೆ.

ಜನಪ್ರಿಯ ಆ್ಯಪ್​​ಗಳಲ್ಲಿಯೂ ವೈರಸ್ ಪತ್ತೆ​; ಇವು ನಿಮ್ಮ ಮೊಬೈಲ್​ನಲ್ಲೂ ಇವೆಯಾ ಒಮ್ಮೆ ಚೆಕ್​ ಮಾಡಿಕೊಳ್ಳಿ!

Published On - 2:59 pm, Mon, 7 December 20

ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ