AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸಂಪರ್ಕದಲ್ಲಿದ್ದ ವ್ಯಕ್ತಿ ಸೋಂಕಿತರಾಗಿದ್ದಾರೆ, ಎಚ್ಚರಿಕೆ.. ಎಂದು ಸಂದೇಶ ಕಳಿಸುತ್ತದೆ ಈ ಆ್ಯಪ್​

ಆ್ಯಪ್​ ಇನ್​ಸ್ಟಾಲ್ ಮಾಡಿಕೊಂಡ ಗ್ರಾಹಕರು ಪರಸ್ಪರ ಹತ್ತಿರ ಬಂದರೆ ಆ್ಯಪ್​ ತಾನಾಗಿಯೇ ಡೇಟಾ ಸಂಗ್ರಹಿಸುತ್ತದೆ. ಒಮ್ಮೆ ಡೇಟಾ ಸಂಗ್ರಹವಾದ ನಂತರ ಆ ಇಬ್ಬರಲ್ಲಿ ಯಾವುದೇ ವ್ಯಕ್ತಿ ನಿರ್ದಿಷ್ಟ ದಿನದೊಳಗೆ ಸೋಂಕಿತನಾದರೂ ಇನ್ನೊಂದು ವ್ಯಕ್ತಿಗೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಎಚ್ಚರಿಕೆಯ ಸಂದೇಶ ರವಾನೆಯಾಗುತ್ತದೆ.

ನಿಮ್ಮ ಸಂಪರ್ಕದಲ್ಲಿದ್ದ ವ್ಯಕ್ತಿ ಸೋಂಕಿತರಾಗಿದ್ದಾರೆ, ಎಚ್ಚರಿಕೆ.. ಎಂದು ಸಂದೇಶ ಕಳಿಸುತ್ತದೆ ಈ ಆ್ಯಪ್​
ಪ್ರಾತಿನಿಧಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on:Dec 07, 2020 | 3:02 PM

Share

ಕೊವಿಡ್​ ಸೋಂಕಿತರ ಮೇಲೆ ನಿಗಾ ವಹಿಸೋಕೆ ತಾಂತ್ರಿಕವಾಗಿ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಭಾರತದಲ್ಲಿ ಆರಂಭಿಕ ಹಂತದಲ್ಲೇ ಆರೋಗ್ಯ ಸೇತು ಎಂಬ ಆ್ಯಪ್​ ಬಿಡುಗಡೆ ಮಾಡಲಾಗಿತ್ತು. ಆದರೆ ಅಮೆರಿಕಾದಲ್ಲಿ ಆರೋಗ್ಯ ಸೇತುವಿಗಿಂತಲೂ ಸುರಕ್ಷಿತ ಮತ್ತು ಸುಧಾರಿತ ತಂತ್ರಜ್ಞಾನವೊಂದು ಸಿದ್ಧವಾಗಿದೆ.

ಗೂಗಲ್ ಮತ್ತು ಆ್ಯಪಲ್ ಕಂಪೆನಿಯ ಸಹಭಾಗಿತ್ವದಲ್ಲಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ. ಮೊಬೈಲ್ ಬ್ಲೂಟೂತ್ ಮುಖಾಂತರ ಡೇಟಾ ಸಂಗ್ರಹಿಸುವ ಕ್ರಮ ಇದಾಗಿದ್ದು ಸಂಗ್ರಹವಾಗುವ ವಿವರಗಳು ಯಾವುದೇ ರೀತಿಯಲ್ಲೂ ಸೋರಿಕೆಯಾಗದು ಎಂದು ಕಂಪೆನಿಗಳು ಭರವಸೆ ನೀಡಿವೆ.

ಅಮೆರಿಕಾದ ಜನರಿಗೆ ಆ್ಯಪ್ ಲಭ್ಯ ಅಮೆರಿಕಾದ ಕೆಲ ಪ್ರಾಂತ್ಯಗಳ ಜನರಿಗೆ ಈ ಆ್ಯಪ್​ ಬಳಸಲು ಸ್ಥಳೀಯ ಆಡಳಿತದಿಂದ ಅನುಮತಿ ಸಿಕ್ಕಿದೆ. ಆ್ಯಪ್​ ಇನ್​ಸ್ಟಾಲ್ ಮಾಡಿಕೊಂಡ ಗ್ರಾಹಕರು ಪರಸ್ಪರ ಹತ್ತಿರ ಬಂದರೆ ಆ್ಯಪ್​ ತಾನಾಗಿಯೇ ಡೇಟಾ ಸಂಗ್ರಹಿಸುತ್ತದೆ. ಒಮ್ಮೆ ಡೇಟಾ ಸಂಗ್ರಹವಾದ ನಂತರ ಆ ಇಬ್ಬರಲ್ಲಿ ಯಾವುದೇ ವ್ಯಕ್ತಿ ನಿರ್ದಿಷ್ಟ ದಿನದೊಳಗೆ ಸೋಂಕಿತನಾದರೂ ಇನ್ನೊಂದು ವ್ಯಕ್ತಿಗೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಎಚ್ಚರಿಕೆಯ ಸಂದೇಶ ರವಾನೆಯಾಗುತ್ತದೆ.

ಆದರೆ, ಈ ಸಂದರ್ಭದಲ್ಲಿ ಸೋಂಕಿತನ ಹೆಸರು ಮತ್ತು ವಿವರ ಗೌಪ್ಯವಾಗಿಯೇ ಇರುತ್ತದೆ. ಬದಲಾಗಿ ನೀವು ಸೋಂಕಿತರ ಸಂಪರ್ಕಕ್ಕೆ ಬಂದಿದ್ದೀರಿ ಎಂಬ ಸಂದೇಶವಷ್ಟೇ ರವಾನೆಯಾಗುತ್ತದೆ. ಆ್ಯಪಲ್ ಮತ್ತು ಗೂಗಲ್​ ಸ್ಟೋರ್​ಗಳಲ್ಲಿ ಈ ಆ್ಯಪ್​ ಲಭ್ಯವಿದೆ.

ಅಮೆರಿಕಾದ ಕೆಲವು ಪ್ರಾಂತ್ಯಗಳನ್ನು ಹೊರತುಪಡಿಸಿದರೆ ಮಿಕ್ಕೆಲ್ಲಾ ಕಡೆಗಳಲ್ಲಿ ಅ್ಯಪ್​ ಬಳಕೆಗೆ ಲಭ್ಯವಿದೆ. ಒಂದು ವೇಳೆ ಬಳಕೆದಾರರು ಸೋಂಕಿತರ ಸಂಪರ್ಕಕ್ಕೆ ಬಂದ ನಂತರ ಆ್ಯಪ್ ಬಳಕೆಗೆ ಅನುಮತಿ ಇಲ್ಲದ ಪ್ರದೇಶಕ್ಕೆ ಹೋದರೂ ಎಚ್ಚರಿಕೆ ಸಂದೇಶ ರವಾನೆಯಾಗುತ್ತದೆ ಎಂದು ತಿಳಿದುಬಂದಿದೆ.

ಜನಪ್ರಿಯ ಆ್ಯಪ್​​ಗಳಲ್ಲಿಯೂ ವೈರಸ್ ಪತ್ತೆ​; ಇವು ನಿಮ್ಮ ಮೊಬೈಲ್​ನಲ್ಲೂ ಇವೆಯಾ ಒಮ್ಮೆ ಚೆಕ್​ ಮಾಡಿಕೊಳ್ಳಿ!

Published On - 2:59 pm, Mon, 7 December 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ