AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಮೊದಲ ಬಾರಿಗೆ ಅಮೆರಿಕಾದಲ್ಲಿ ಭಾರತೀಯ ರಾಯಭಾರಿಯನ್ನು ಭೇಟಿಯಾದ ಗೂಗಲ್ ಸಿಇಒ ಸುಂದರ್ ಪಿಚೈ

ಭಾರತೀಯ ರಾಯಭಾರಿಯೊಂದಿಗಿನ ಭೇಟಿಯ ಸಂದರ್ಭದಲ್ಲಿ ಸುಂದರ್ ಪಿಚೈ ಅವರು ಭಾರತ ಕೈಗೊಂಡಿರುವ ಹಲವು ಡಿಜಿಟಲೀಕರಣದ ಇನಿಷಿಯೇಟಿವ್ ಬಗ್ಗೆ ಬಹಳ ಶ್ಲಾಘಿಸಿದ್ದಾರೆ.

Big News: ಮೊದಲ ಬಾರಿಗೆ ಅಮೆರಿಕಾದಲ್ಲಿ ಭಾರತೀಯ ರಾಯಭಾರಿಯನ್ನು ಭೇಟಿಯಾದ ಗೂಗಲ್ ಸಿಇಒ ಸುಂದರ್ ಪಿಚೈ
ಅಮೆರಿಕಾದಲ್ಲಿ ಭಾರತೀಯ ರಾಯಭಾರಿಯನ್ನು ಭೇಟಿಯಾದ ಗೂಗಲ್ ಸಿಇಓ ಸುಂದರ್ ಪಿಚ್ಚೈ
TV9 Web
| Edited By: |

Updated on: Sep 20, 2022 | 12:20 PM

Share

ವಾಷಿಂಗ್ಟನ್: ಗೂಗಲ್ ಸಿಇಒ ಸುಂದರ್ ಪಿಚೈ (Sundar Pichai) ಅವರು ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿರುವ (Washington DC) ಭಾರತದ ರಾಯಭಾರ ಕಚೇರಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಅಮೆರಿಕಾದಲ್ಲಿರುವ ಭಾರತದ ರಾಯಭಾರಿ ತರಣ್​ಜಿತ್ ಸಿಂಗ್ ಸಂಧು (India’s Ambassador Taranjit Singh Sandhu) ಅವರೊಂದಿಗೆ ದೇಶದಲ್ಲಿ ಟೆಕ್ ಕಂಪನಿಯ ಚಟುವಟಿಕೆಗಳ ವಿವಿಧ ಅಂಶಗಳ ಬಗ್ಗೆ, ಅದರಲ್ಲೂ ವಿಶೇಷವಾಗಿ ಡಿಜಿಟಲೀಕರಣದ ಪ್ರಯತ್ನಗಳ ಕುರಿತು ಚರ್ಚೆ ನಡೆಸಿದ್ದಾರೆ.

ಭಾರತೀಯ ರಾಯಭಾರಿಯೊಂದಿಗಿನ ಭೇಟಿಯ ಸಂದರ್ಭದಲ್ಲಿ ಸುಂದರ್ ಪಿಚೈ ಅವರು ಭಾರತ ಕೈಗೊಂಡಿರುವ ಹಲವು ಡಿಜಿಟಲೀಕರಣದ ಇನಿಷಿಯೇಟಿವ್ ಬಗ್ಗೆ ಬಹಳ ಶ್ಲಾಘಿಸಿದ್ದಾರೆ. ಹಾಗೇ, ಗೂಗಲ್ ಭಾರತವನ್ನು ಸಕಾರಾತ್ಮಕ ಚೌಕಟ್ಟಿನಲ್ಲಿ ನೋಡುತ್ತಿದೆ ಎಂಬುದನ್ನು ಒತ್ತಿ ಹೇಳಿದ್ದಾರೆ.

ಗೂಗಲ್ ಸಿಇಒ ಸುಂದರ್ ಪಿಚೈ ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಭಾರತದೊಂದಿಗೆ ಗೂಗಲ್​ನ ಪಾಲುದಾರಿಕೆಯನ್ನು ಮುಂದುವರಿಸುವ ವಿವಿಧ ವಿಧಾನಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಡಿಜಿಟಲ್ ಪಾವತಿಗಳು ಮತ್ತು ಮೂಲಸೌಕರ್ಯ ಡಿಜಿಟಲೈಸೇಶನ್ ಸೇರಿದಂತೆ ಗೂಗಲ್ ತೊಡಗಿಸಿಕೊಂಡಿರುವ ಹಲವು ವಿಭಾಗಗಳಲ್ಲಿ ಭಾರತದ ಡಿಜಿಟಲೀಕರಣದ ಪ್ರಯತ್ನಗಳನ್ನು ಕೂಡ ಚರ್ಚಿಸಿದ್ದಾರೆ.

ಇದನ್ನೂ ಓದಿ: Googling Tricks: ಗೂಗಲ್ ಬಳಸುವ ಮುನ್ನ ಯಾವ ರೀತಿ ಸರ್ಚ್​ ಮಾಡಬೇಕು ಎಂಬುವುದನ್ನು ತಿಳಿಯಿರಿ

ಭಾರತದ ಡಿಜಿಟಲ್ ರೂಪಾಂತರದಲ್ಲಿ ಗೂಗಲ್ ಪ್ರಮುಖ ಪಾಲುದಾರವಾಗಿದೆ ಎಂದು ಅಮೆರಿಕಾದ ಭಾರತೀಯ ರಾಯಭಾರಿ ಹೇಳಿದ್ದಾರೆ. ಅಲ್ಲದೆ, ಇದು ಸರ್ಕಾರದ ಆದ್ಯತೆಯಾಗಿದೆ ಎಂದು ಕೂಡ ಅವರು ಅಭಿಪ್ರಾಯಪಟ್ಟಿದ್ದಾರೆ.

ಸುಂದರ್ ಪಿಚೈ ಅವರು ಕಳೆದ ವಾರಾಂತ್ಯದಲ್ಲಿ ವಾಷಿಂಗ್ಟನ್ ಡಿಸಿ ಡೌನ್‌ಟೌನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಭೇಟಿ ನೀಡಿದ ನಂತರ “ಧನ್ಯವಾದಗಳು” ಎಂದು ಟ್ವೀಟ್‌ ಮಾಡಿದ್ದರು. ಭಾರತೀಯ ಅಮೆರಿಕನ್ ಟೆಕ್ ಸಿಇಒ ಒಬ್ಬರು ಅಮೆರಿಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಭೇಟಿ ನೀಡಿರುವುದು ಇದೇ ಮೊದಲು.

ಇದನ್ನೂ ಓದಿ: Sundar Pichai: ಭಾರತದಲ್ಲಿ ಸ್ಟಾರ್ಟ್-ಅಪ್ ಸಂಸ್ಕೃತಿ ನೋಡಲು ಖುಷಿಯಾಗುತ್ತದೆ, ಇದನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುತ್ತಾರೆ: ಗೂಗಲ್ ಸಿಇಒ ಸುಂದರ್ ಪಿಚೈ

ಅಂದಹಾಗೆ, ಸುಂದರ್ ಪಿಚೈ ನೇತೃತ್ವದ ಗೂಗಲ್ ಭಾರತದಲ್ಲಿ ಭಾರೀ ಹೂಡಿಕೆ ಮಾಡಿದೆ. ಅಲ್ಲದೆ, ಯುವ ಪೀಳಿಗೆಗೆ ತನ್ನ ತರಬೇತಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತನ್ನ ಹೆಜ್ಜೆಗುರುತನ್ನು ಮೂಡಿಸಿದೆ. ಗೂಗಲ್ ಮತ್ತು ಅದರ ಮೂಲ ಕಂಪನಿ ಆಲ್ಫಾಬೆಟ್ ಕಳೆದ ವರ್ಷ ಕೊವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಮುಖ ಪಾತ್ರ ವಹಿಸಿದೆ. ಅವರು ಭಾರತವನ್ನು ಬೆಂಬಲಿಸುವ ದೃಷ್ಟಿಯಿಂದ ಸಾಕಷ್ಟು ಹಣವನ್ನು ಹಾಕಿದ್ದಾರೆ. ಸುಂದರ್ ಪಿಚ್ಚೈ ಈ ನಿಟ್ಟಿನಲ್ಲಿ ಸ್ಥಾಪಿಸಲಾಗಿದ್ದ ಅಮೆರಿಕದ ಸಿಇಓಗಳ ಜಾಗತಿಕ ಕಾರ್ಯಪಡೆಯ ಭಾಗವಾಗಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ