AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ ಮೇಲೆ ರಷ್ಯಾ ಆಕ್ರಮಣದ ಬೆನ್ನಲ್ಲೇ ಒಂದು ಮಹತ್ವದ ಕ್ರಮ ಕೈಗೊಂಡ ಗೂಗಲ್​; ಏನದು?

ಕೆಲವು ದಿನಗಳಿಂದ ಉಕ್ರಾವ್ಟೋಡರ್ ಎಂಬ ಉಕ್ರೇನ್​​ನ ಸರ್ಕಾರಿ ಕಂಪನಿಯೊಂದು ಎಲ್ಲ ಕಡೆಗಳಲ್ಲಿರುವ ರಸ್ತೆ ಮಾರ್ಗ ತೋರುವ ಬೋರ್ಡ್​​ಗಳು, ಸಂಕೇತಗಳನ್ನು ತೆಗೆದುಹಾಕುತ್ತಿದೆ. 

ಉಕ್ರೇನ್​ ಮೇಲೆ ರಷ್ಯಾ ಆಕ್ರಮಣದ ಬೆನ್ನಲ್ಲೇ ಒಂದು ಮಹತ್ವದ ಕ್ರಮ ಕೈಗೊಂಡ ಗೂಗಲ್​; ಏನದು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 28, 2022 | 1:02 PM

Share

ಗೂಗಲ್​ ಮ್ಯಾಪ್​ (ಗೂಗಲ್​ ನಕ್ಷೆ)ನ ಕೆಲವು ಟೂಲ್ಸ್​​ಗಳನ್ನು ಉಕ್ರೇನ್​​ನಲ್ಲಿ ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸಿದ್ದಾಗಿ ಗೂಗಲ್​ ತಿಳಿಸಿದೆ. ವಿಶ್ವದ ದಿಗ್ಗಜ ಸರ್ಚ್​ ಎಂಜಿನ್​ ಆಗಿರುವ ಆಲ್ಪಾಬೆಟ್​​ ಸಂಸ್ಥೆಯ ಗೂಗಲ್​, ಸುರಕ್ಷತಾ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ಮಾಹಿತಿ ನೀಡಿದೆ. ಉಕ್ರೇನ್​​ ಮೇಲೆ ರಷ್ಯಾ ಆಕ್ರಮಣ ಮಾಡಿದೆ. ನಾಲ್ಕೈದು ದಿನಗಳಿಂದ ಬೀದಿಬೀದಿಗಳಲ್ಲಿ ಹೊಡೆದಾಟ, ದಾಳಿಗಳು ನಡೆಯುತ್ತಿವೆ. ಅಲ್ಲಿನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು, ಉಕ್ರೇನ್​​ನಾದ್ಯಂತ ಟ್ರಾಫಿಕ್​ ಸ್ಥಿತಿಗಳ ಮತ್ತು ವಿವಿಧ ಪ್ರದೇಶಗಳು ಎಷ್ಟು ದಟ್ಟಣೆಯಿಂದ ಕೂಡಿವೆ ಎಂಬ ಮಾಹಿತಿಯನ್ನು ಲೈವ್​ ಆಗಿ ತೋರಿಸುವ ಆ್ಯಪ್​​ಗಳನ್ನು ನಿಷ್ಕ್ರಿಯಗೊಳಿಸಿದ್ದಾಗಿ ಗೂಗಲ್​ ತಿಳಿಸಿದೆ.

ಗೂಗಲ್​ ಮ್ಯಾಪ್​​ನ ಟ್ರಾಫಿಕ್​ ಲೇಯರ್​ ಮತ್ತು ಅಂಗಡಿಗಳು, ರೆಸ್ಟೋರೆಂಟ್​ಗಳಂತಹ ಪ್ರದೇಶಗಳಲ್ಲಿ ಎಷ್ಟರ ಮಟ್ಟಿಗೆ ಜನದಟ್ಟಣೆ ಇದೆ, ಯಾವ ಪ್ರಮಾಣದಲ್ಲಿ ಕಾರ್ಯನಿರವಾಗಿವೆ ಎಂಬುದರ ಬಗ್ಗೆ ಲೈವ್​ ಮಾಹಿತಿ (ನೈಜ ಸಮಯದ ಮಾಹಿತಿ) ನೀಡುವ ಟೂಲ್​​ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಅಂದರೆ ಉಕ್ರೇನ್​​ನಲ್ಲಿನ ಈ ಮಾಹಿತಿ ಸದ್ಯ ಜಾಗತಿಕವಾಗಿ ಸಿಗುವುದಿಲ್ಲ. ಅಲ್ಲಿನ ಪ್ರಾದೇಶಕ ಆಡಳಿತಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಈ ಹೆಜ್ಜೆ ಇಡಲಾಗಿದ್ದು, ಜನರ ಸುರಕ್ಷತೆಗಾಗಿ ತೆಗೆದುಕೊಂಡ ಕ್ರಮ ಇದು ಎಂದೂ ಗೂಗಲ್ ಹೇಳಿಕೊಂಡಿದೆ.  ಹಾಗಿದ್ದಾಗ್ಯೂ ಗೂಗಲ್​ ಮ್ಯಾಪ್​​ನಲ್ಲಿ ಟರ್ನ್​ ಬೈ ಟರ್ನ್​ ನೇವಿಗೇಶನ್​ ಫೀಚರ್ ಬಳಸಿಕೊಂಡು ವಾಹನ ಚಾಲನೆ ಮಾಡಬಹುದಾಗಿದೆ. ಅಂಥವರಿಗೆ ಲೈವ್​ ಮಾಹಿತಿ ಲಭ್ಯ ಇರಲಿದೆ. ಯುದ್ಧ ಕಾರ್ಮೋಡದ ಮಧ್ಯೆ ಜನರ ಜೀವ ರಕ್ಷಣೆ ಎಷ್ಟು ಮುಖ್ಯವೋ ಅಷ್ಟೇ ಅವರ ಡಾಟಾ ರಕ್ಷಣೆ ಕೂಡ ಮುಖ್ಯ ಎಂದೂ ಗೂಗಲ್ ಅಭಿಪ್ರಾಯ ಪಟ್ಟಿದೆ.

ಇನ್ನು ಕೆಲವು ದಿನಗಳಿಂದ ಉಕ್ರಾವ್ಟೋಡರ್ ಎಂಬ ಉಕ್ರೇನ್​​ನ ಸರ್ಕಾರಿ ಕಂಪನಿಯೊಂದು ಎಲ್ಲ ಕಡೆಗಳಲ್ಲಿರುವ ರಸ್ತೆ ಮಾರ್ಗ ತೋರುವ ಬೋರ್ಡ್​​ಗಳು, ಸಂಕೇತಗಳನ್ನು ತೆಗೆದುಹಾಕುತ್ತಿದೆ.  ಜನರಿಗೆ ಅನುಕೂಲವಾಗುವಂತೆ ರಸ್ತೆ ಬದಿಯಲ್ಲಿ ರಸ್ತೆ ಮಾರ್ಗ ಸಂಕೇತಗಳ ಬೋರ್ಡ್​​ಗಳನ್ನು ಹಾಕುವುದು ಸಾಮಾನ್ಯ. ಹೊಸದಾಗಿ ಆ ಪ್ರದೇಶಗಳಿಗೆ ಬರುವವರು ಚಿಹ್ನೆ (Signs) ಗಳನ್ನು ನೋಡಿಯೇ ದಾರಿ ಅರಿಯುತ್ತಾರೆ. ಹಾಗೇ, ಉಕ್ರೇನ್​​ನಲ್ಲೂ ಹಾಕಲಾಗಿದ್ದ ಮಾರ್ಗಸೂಚಿ ಸೈನ್​ ಬೋರ್ಡ್​ಗಳನ್ನು ಈ ಕಂಪನಿ ತೆಗೆದುಹಾಕುತ್ತಿದೆ. ರಷ್ಯಾದ ಸೈನಿಕರಿಗೆ ಉಕ್ರೇನ್​ನ ದಾರಿಗಳು ಸರಿಯಾಗಿ ಗೊತ್ತಿಲ್ಲ. ಅಲ್ಲದೆ ಅವರು ಅತ್ಯಂತ ಕಳಪೆ ಸಂವಹನ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಇಲ್ಲಿನ ಭೂಪ್ರದೇಶಗಳನ್ನು ಸಂಕೇತಗಳ ಸಹಾಯವಿಲ್ಲದೆ ಪ್ರವೇಶಿಸಲಾರರು. ನಾವು ಶತ್ರುಗಳ ದಾರಿ ತಪ್ಪಿಸಲು ಆ ಬೋರ್ಡ್​ಗಳನ್ನೆಲ್ಲ ತೆಗೆದುಹಾಕುತ್ತಿದ್ದೇವೆ ಎಂದು ಫೇಸ್​ಬುಕ್ ಪೋಸ್ಟ್​ನಲ್ಲಿ ಹೇಳಿಕೊಂಡಿದೆ.

ಇದನ್ನೂ ಓದಿ: ಯುದ್ಧಭೂಮಿ ಉಕ್ರೇನ್​​ಗೆ ತೆರಳಲಿದ್ದಾರಂತೆ ಈ ನಾಲ್ವರು ಕೇಂದ್ರ ಸಚಿವರು; ಪ್ರಧಾನಿ ನರೇಂದ್ರ ಮೋದಿಯವರ ತುರ್ತು ಸಭೆಯಲ್ಲಿ ನಿರ್ಣಯ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ