AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ ಮೇಲೆ ರಷ್ಯಾ ಆಕ್ರಮಣದ ಬೆನ್ನಲ್ಲೇ ಒಂದು ಮಹತ್ವದ ಕ್ರಮ ಕೈಗೊಂಡ ಗೂಗಲ್​; ಏನದು?

ಕೆಲವು ದಿನಗಳಿಂದ ಉಕ್ರಾವ್ಟೋಡರ್ ಎಂಬ ಉಕ್ರೇನ್​​ನ ಸರ್ಕಾರಿ ಕಂಪನಿಯೊಂದು ಎಲ್ಲ ಕಡೆಗಳಲ್ಲಿರುವ ರಸ್ತೆ ಮಾರ್ಗ ತೋರುವ ಬೋರ್ಡ್​​ಗಳು, ಸಂಕೇತಗಳನ್ನು ತೆಗೆದುಹಾಕುತ್ತಿದೆ. 

ಉಕ್ರೇನ್​ ಮೇಲೆ ರಷ್ಯಾ ಆಕ್ರಮಣದ ಬೆನ್ನಲ್ಲೇ ಒಂದು ಮಹತ್ವದ ಕ್ರಮ ಕೈಗೊಂಡ ಗೂಗಲ್​; ಏನದು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 28, 2022 | 1:02 PM

Share

ಗೂಗಲ್​ ಮ್ಯಾಪ್​ (ಗೂಗಲ್​ ನಕ್ಷೆ)ನ ಕೆಲವು ಟೂಲ್ಸ್​​ಗಳನ್ನು ಉಕ್ರೇನ್​​ನಲ್ಲಿ ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸಿದ್ದಾಗಿ ಗೂಗಲ್​ ತಿಳಿಸಿದೆ. ವಿಶ್ವದ ದಿಗ್ಗಜ ಸರ್ಚ್​ ಎಂಜಿನ್​ ಆಗಿರುವ ಆಲ್ಪಾಬೆಟ್​​ ಸಂಸ್ಥೆಯ ಗೂಗಲ್​, ಸುರಕ್ಷತಾ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ಮಾಹಿತಿ ನೀಡಿದೆ. ಉಕ್ರೇನ್​​ ಮೇಲೆ ರಷ್ಯಾ ಆಕ್ರಮಣ ಮಾಡಿದೆ. ನಾಲ್ಕೈದು ದಿನಗಳಿಂದ ಬೀದಿಬೀದಿಗಳಲ್ಲಿ ಹೊಡೆದಾಟ, ದಾಳಿಗಳು ನಡೆಯುತ್ತಿವೆ. ಅಲ್ಲಿನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು, ಉಕ್ರೇನ್​​ನಾದ್ಯಂತ ಟ್ರಾಫಿಕ್​ ಸ್ಥಿತಿಗಳ ಮತ್ತು ವಿವಿಧ ಪ್ರದೇಶಗಳು ಎಷ್ಟು ದಟ್ಟಣೆಯಿಂದ ಕೂಡಿವೆ ಎಂಬ ಮಾಹಿತಿಯನ್ನು ಲೈವ್​ ಆಗಿ ತೋರಿಸುವ ಆ್ಯಪ್​​ಗಳನ್ನು ನಿಷ್ಕ್ರಿಯಗೊಳಿಸಿದ್ದಾಗಿ ಗೂಗಲ್​ ತಿಳಿಸಿದೆ.

ಗೂಗಲ್​ ಮ್ಯಾಪ್​​ನ ಟ್ರಾಫಿಕ್​ ಲೇಯರ್​ ಮತ್ತು ಅಂಗಡಿಗಳು, ರೆಸ್ಟೋರೆಂಟ್​ಗಳಂತಹ ಪ್ರದೇಶಗಳಲ್ಲಿ ಎಷ್ಟರ ಮಟ್ಟಿಗೆ ಜನದಟ್ಟಣೆ ಇದೆ, ಯಾವ ಪ್ರಮಾಣದಲ್ಲಿ ಕಾರ್ಯನಿರವಾಗಿವೆ ಎಂಬುದರ ಬಗ್ಗೆ ಲೈವ್​ ಮಾಹಿತಿ (ನೈಜ ಸಮಯದ ಮಾಹಿತಿ) ನೀಡುವ ಟೂಲ್​​ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಅಂದರೆ ಉಕ್ರೇನ್​​ನಲ್ಲಿನ ಈ ಮಾಹಿತಿ ಸದ್ಯ ಜಾಗತಿಕವಾಗಿ ಸಿಗುವುದಿಲ್ಲ. ಅಲ್ಲಿನ ಪ್ರಾದೇಶಕ ಆಡಳಿತಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಈ ಹೆಜ್ಜೆ ಇಡಲಾಗಿದ್ದು, ಜನರ ಸುರಕ್ಷತೆಗಾಗಿ ತೆಗೆದುಕೊಂಡ ಕ್ರಮ ಇದು ಎಂದೂ ಗೂಗಲ್ ಹೇಳಿಕೊಂಡಿದೆ.  ಹಾಗಿದ್ದಾಗ್ಯೂ ಗೂಗಲ್​ ಮ್ಯಾಪ್​​ನಲ್ಲಿ ಟರ್ನ್​ ಬೈ ಟರ್ನ್​ ನೇವಿಗೇಶನ್​ ಫೀಚರ್ ಬಳಸಿಕೊಂಡು ವಾಹನ ಚಾಲನೆ ಮಾಡಬಹುದಾಗಿದೆ. ಅಂಥವರಿಗೆ ಲೈವ್​ ಮಾಹಿತಿ ಲಭ್ಯ ಇರಲಿದೆ. ಯುದ್ಧ ಕಾರ್ಮೋಡದ ಮಧ್ಯೆ ಜನರ ಜೀವ ರಕ್ಷಣೆ ಎಷ್ಟು ಮುಖ್ಯವೋ ಅಷ್ಟೇ ಅವರ ಡಾಟಾ ರಕ್ಷಣೆ ಕೂಡ ಮುಖ್ಯ ಎಂದೂ ಗೂಗಲ್ ಅಭಿಪ್ರಾಯ ಪಟ್ಟಿದೆ.

ಇನ್ನು ಕೆಲವು ದಿನಗಳಿಂದ ಉಕ್ರಾವ್ಟೋಡರ್ ಎಂಬ ಉಕ್ರೇನ್​​ನ ಸರ್ಕಾರಿ ಕಂಪನಿಯೊಂದು ಎಲ್ಲ ಕಡೆಗಳಲ್ಲಿರುವ ರಸ್ತೆ ಮಾರ್ಗ ತೋರುವ ಬೋರ್ಡ್​​ಗಳು, ಸಂಕೇತಗಳನ್ನು ತೆಗೆದುಹಾಕುತ್ತಿದೆ.  ಜನರಿಗೆ ಅನುಕೂಲವಾಗುವಂತೆ ರಸ್ತೆ ಬದಿಯಲ್ಲಿ ರಸ್ತೆ ಮಾರ್ಗ ಸಂಕೇತಗಳ ಬೋರ್ಡ್​​ಗಳನ್ನು ಹಾಕುವುದು ಸಾಮಾನ್ಯ. ಹೊಸದಾಗಿ ಆ ಪ್ರದೇಶಗಳಿಗೆ ಬರುವವರು ಚಿಹ್ನೆ (Signs) ಗಳನ್ನು ನೋಡಿಯೇ ದಾರಿ ಅರಿಯುತ್ತಾರೆ. ಹಾಗೇ, ಉಕ್ರೇನ್​​ನಲ್ಲೂ ಹಾಕಲಾಗಿದ್ದ ಮಾರ್ಗಸೂಚಿ ಸೈನ್​ ಬೋರ್ಡ್​ಗಳನ್ನು ಈ ಕಂಪನಿ ತೆಗೆದುಹಾಕುತ್ತಿದೆ. ರಷ್ಯಾದ ಸೈನಿಕರಿಗೆ ಉಕ್ರೇನ್​ನ ದಾರಿಗಳು ಸರಿಯಾಗಿ ಗೊತ್ತಿಲ್ಲ. ಅಲ್ಲದೆ ಅವರು ಅತ್ಯಂತ ಕಳಪೆ ಸಂವಹನ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಇಲ್ಲಿನ ಭೂಪ್ರದೇಶಗಳನ್ನು ಸಂಕೇತಗಳ ಸಹಾಯವಿಲ್ಲದೆ ಪ್ರವೇಶಿಸಲಾರರು. ನಾವು ಶತ್ರುಗಳ ದಾರಿ ತಪ್ಪಿಸಲು ಆ ಬೋರ್ಡ್​ಗಳನ್ನೆಲ್ಲ ತೆಗೆದುಹಾಕುತ್ತಿದ್ದೇವೆ ಎಂದು ಫೇಸ್​ಬುಕ್ ಪೋಸ್ಟ್​ನಲ್ಲಿ ಹೇಳಿಕೊಂಡಿದೆ.

ಇದನ್ನೂ ಓದಿ: ಯುದ್ಧಭೂಮಿ ಉಕ್ರೇನ್​​ಗೆ ತೆರಳಲಿದ್ದಾರಂತೆ ಈ ನಾಲ್ವರು ಕೇಂದ್ರ ಸಚಿವರು; ಪ್ರಧಾನಿ ನರೇಂದ್ರ ಮೋದಿಯವರ ತುರ್ತು ಸಭೆಯಲ್ಲಿ ನಿರ್ಣಯ

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​