AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ದಾಳಿ; ಮೂವರು ಸಾವು

Hindu Temple Attack: ನವರಾತ್ರಿ ಹಿನ್ನೆಲೆಯಲ್ಲಿ ದುರ್ಗಾ ಪೂಜೆ ನಡೆಸುತ್ತಿದ್ದಾಗ ಅಪರಿಚಿತರ ಗುಂಪೊಂದು ದೇವಸ್ಥಾನದ ಮೇಲೆ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ 22 ಜಿಲ್ಲೆಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ದಾಳಿ; ಮೂವರು ಸಾವು
ಬಾಂಗ್ಲಾದೇಶದ ದೇವಸ್ಥಾನದ ಮೇಲೆ ದಾಳಿ
TV9 Web
| Edited By: |

Updated on:Oct 14, 2021 | 4:11 PM

Share

ಢಾಕಾ: ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ಗೂಂಡಗಳು ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ನವರಾತ್ರಿ ಹಿನ್ನೆಲೆಯಲ್ಲಿ ದುರ್ಗಾ ಪೂಜೆ ನಡೆಸುತ್ತಿದ್ದಾಗ ಅಪರಿಚಿತರ ಗುಂಪೊಂದು ದೇವಸ್ಥಾನದ ಮೇಲೆ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ 22 ಜಿಲ್ಲೆಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಘಟನೆಯಲ್ಲಿ ಸಾಕಷ್ಟು ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಬಾಂಗ್ಲಾದೇಶದ ಸ್ಥಳೀಯ ಮಾಧ್ಯಮಗಳ ಪ್ರಕಾರ, ದುರ್ಗಾ ದೇವಿಯ ದೇವಸ್ಥಾನದಲ್ಲಿ ಹಿಂಸಾಚಾರ ನಡೆದ ಬಳಿಕ ಅಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಇದೇ ವೇಳೆ ಬಾಂಗ್ಲಾದೇಶದ ಚಂದ್​ಪುರದ ಹಜಿಗಂಜ್, ಚತ್ತೋಗ್ರಾಂನ ಬಾಂಶ್​ಖಲಿ ಮತ್ತು ಕಾಕ್ಸ್​ ಬಜಾರ್​ನ ಪೆಕುವಾದಲ್ಲಿ ಕೂಡ ಹಿಂದೂ ದೇವಾಲಯಗಳಲ್ಲಿ ದಾಂಧಲೆ ಎಬ್ಬಿಸಿರುವ ಘಟನೆ ವರದಿಯಾಗಿದೆ.

ಇಂದು ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಿಂದೂ ದೇವಾಲಯಗಳ ಎದುರು ಜನರು ಹಾಗೂ ಪೊಲೀಸರ ನಡುವೆ ಗಲಾಟೆಯೂ ನಡೆದಿದೆ. ಸರ್ಕಾರದಿಂದ ಹೆಚ್ಚುವರಿಯಾಗಿ ಭದ್ರತಾ ಪಡೆಯನ್ನು ಕೂಡ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Covaxin: ನವೆಂಬರ್​ನಲ್ಲಿ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ಲಭ್ಯ ಸಾಧ್ಯತೆ; ಆರೋಗ್ಯ ಸಮಸ್ಯೆ ಇರುವವರಿಗೆ ಆದ್ಯತೆ

Ramon Magsaysay Award: ಬಾಂಗ್ಲಾದೇಶಿ ಲಸಿಕಾ ವಿಜ್ಞಾನಿ, ಪಾಕಿಸ್ತಾನಿ ಅರ್ಥಶಾಸ್ತ್ರಜ್ಞ ಸೇರಿ ಐವರಿಗೆ ರಾಮನ್​ ಮ್ಯಾಗ್ಸೆಸೆ ಪ್ರಶಸ್ತಿ

Published On - 4:06 pm, Thu, 14 October 21

ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!