AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರ್ಯಾಮಿ ಪ್ರಶಸ್ತಿ ನಾಮನಿರ್ದೇಶನ: ಇತಿಹಾಸ ಬರೆದರು ಅಮೆರಿಕದ ಜನಪ್ರಿಯ ಗಾಯಕಿ ಬಿಯಾನ್ಸ್​

ಅಮೆರಿಕದ ರೆಕಾರ್ಡಿಂಗ್ ಅಕಾಡೆಮಿ ಮತ್ತು ಸಿಬಿಎಸ್ 63 ನೇ ವಾರ್ಷಿಕ ಗ್ರ್ಯಾಮಿ ಪ್ರಶಸ್ತಿಗಳಿಗೆ ನಾಮನಿರ್ದೇಶನ ಪಟ್ಟಿಯನ್ನು ಪ್ರಕಟಿಸಿದೆ. ಮಂಗಳವಾರ ನೇರ ಪ್ರಸಾರದಲ್ಲಿ ನಾಮ ನಿರ್ದೇಶನಗಳನ್ನು ಬಹಿರಂಗಪಡಿಸಲಾಗಿದೆ.

ಗ್ರ್ಯಾಮಿ ಪ್ರಶಸ್ತಿ ನಾಮನಿರ್ದೇಶನ: ಇತಿಹಾಸ ಬರೆದರು ಅಮೆರಿಕದ ಜನಪ್ರಿಯ ಗಾಯಕಿ ಬಿಯಾನ್ಸ್​
ಅಮೆರಿಕದ ಗಾಯಕಿ ಬಿಯಾನ್ಸ್
shruti hegde
| Edited By: |

Updated on: Nov 25, 2020 | 3:48 PM

Share

ಅಮೆರಿಕದ ರೆಕಾರ್ಡಿಂಗ್ ಅಕಾಡೆಮಿ ಮತ್ತು ಸಿಬಿಎಸ್ 63 ನೇ ವಾರ್ಷಿಕ ಗ್ರ್ಯಾಮಿ ಪ್ರಶಸ್ತಿಗಳಿಗೆ ನಾಮನಿರ್ದೇಶನ ಪಟ್ಟಿಯನ್ನು ಪ್ರಕಟಿಸಿದೆ. ಮಂಗಳವಾರ ನೇರ ಪ್ರಸಾರದಲ್ಲಿ ನಾಮ ನಿರ್ದೇಶನಗಳನ್ನು ಬಹಿರಂಗಪಡಿಸಲಾಗಿದೆ. ಅಮೇರಿಕದ ಗಾಯಕಿ ಬಿಯಾನ್ಸ್ ಒಂಬತ್ತು ನಾಮ ನಿರ್ದೇಶನಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಹಾಡುಗಾರರಾದ ಟೈಲರ್ ಸ್ವಿಫ್ಟ್ , ರೊಡ್ಡಿ ರಿಚ್ ಮತ್ತು ದುವಾ ಲಿಪಾ ತಲಾ ಆರು ನಾಮ ನಿರ್ದೇಶನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

24 ಗ್ರ್ಯಾಮಿಗಳ ವಿಜೇತೆ ಬಿಯಾನ್ಸ್ ಒಟ್ಟು 79 ನಾಮ ನಿರ್ದೇಶನಗಳೊಂದಿಗೆ ಪ್ರಶಸ್ತಿಯ ಇತಿಹಾಸದಲ್ಲಿ ಎರಡನೇ ಅತಿ ಹೆಚ್ಚು ನಾಮನಿರ್ದೇಶಿತರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಬಿಯಾನ್ಸ್ ಬಿಡುಗಡೆ ಮಾಡಿದ ‘ಬ್ಲ್ಯಾಕ್ ಪೆರೇಡ್’ ಹಾಡು, ಆಫ್ರಿಕನ್ ಅಮೆರಿಕನ್ನರು ತಾವು ಸ್ವತಂತ್ರರು ಎಂದು ತಿಳಿದಾಗ ನೆನಪಿಸಿಕೊಳ್ಳುವ ಹಾಡಾಗಿದ್ದು ಅತ್ಯುತ್ತಮ ಪ್ರದರ್ಶನಕ್ಕಾಗಿ ನಾಮನಿರ್ದೇಶನಗೊಂಡಿದೆ.

ಗ್ರ್ಯಾಮಿ ಅವಾರ್ಡ್ಸ್​ನಲ್ಲಿ ಒಟ್ಟು 83 ವಿಭಾಗಗಳಿವೆ. ಎಲ್ಲಾ ವಿಭಾಗಗಳ ಪ್ರಶಸ್ತಿ ಪುರಸ್ಕೃತ ನಾಮನಿರ್ದೇಶನಗಳ ಪಟ್ಟಿ ಬಿಡುಗಡೆಗೊಂಡಿದೆ. ಪ್ರತಿಷ್ಠಿತ ಸಂಗೀತ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಜನವರಿ 31, 2021 ರಂದು ನೇರ ಪ್ರಸಾರ ಮಾಡಲಾಗುವುದು. ಸಮಾರಂಭವನ್ನು ಹಾಸ್ಯನಟ ಟ್ರೆವರ್ ನೋವಾ ನಡೆಸಿಕೊಡಲಿದ್ದಾರೆ.

ಏನಿದು ಗ್ರ್ಯಾಮಿ ಪ್ರಶಸ್ತಿ? ಅಮೇರಿಕನ್ ಮ್ಯೂಸಿಕ್ ಅವಾರ್ಡ್ಸ್ ಮತ್ತು ಬಿಲ್ಬೋರ್ಡ್ ಮ್ಯೂಸಿಕ್ ಅವಾರ್ಡ್ಸ್ ಸೇರಿದಂತೆ ವಾರ್ಷಿಕವಾಗಿ ನಡೆಯುವ ಮೂರು ಪ್ರಮುಖ ಸಂಗೀತ ಪ್ರಶಸ್ತಿಗಳಲ್ಲಿ ಗ್ರ್ಯಾಮಿ ಪ್ರಶಸ್ತಿ ಸಮಾರಂಭವೂ ಒಂದು. ಸಂಗೀತ ಉದ್ಯಮದಲ್ಲಿನ ಸಾಧನೆಗಳನ್ನು ಗುರುತಿಸಲು, ದಿ ರೆಕಾರ್ಡಿಂಗ್ ಅಕಾಡೆಮಿ ನೀಡುವ ಪ್ರಶಸ್ತಿ ಇದಾಗಿದೆ. ವಾರ್ಷಿಕವಾಗಿ ಸಮಾರಂಭದಲ್ಲಿ ಪ್ರಮುಖ ಕಲಾವಿದರ ಪ್ರದರ್ಶನಗಳು ಮತ್ತು ಹೆಚ್ಚು ಜನಪ್ರಿಯ ಆಸಕ್ತಿಯನ್ನು ಹೊಂದಿರುವವರಿಗೆ ಈ ಪ್ರಶಸ್ತಿ ವಿತರಣೆ ಮಾಡಲಾಗುವುದು.

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ