AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರ್ಯಾಮಿ ಪ್ರಶಸ್ತಿ ನಾಮನಿರ್ದೇಶನ: ಇತಿಹಾಸ ಬರೆದರು ಅಮೆರಿಕದ ಜನಪ್ರಿಯ ಗಾಯಕಿ ಬಿಯಾನ್ಸ್​

ಅಮೆರಿಕದ ರೆಕಾರ್ಡಿಂಗ್ ಅಕಾಡೆಮಿ ಮತ್ತು ಸಿಬಿಎಸ್ 63 ನೇ ವಾರ್ಷಿಕ ಗ್ರ್ಯಾಮಿ ಪ್ರಶಸ್ತಿಗಳಿಗೆ ನಾಮನಿರ್ದೇಶನ ಪಟ್ಟಿಯನ್ನು ಪ್ರಕಟಿಸಿದೆ. ಮಂಗಳವಾರ ನೇರ ಪ್ರಸಾರದಲ್ಲಿ ನಾಮ ನಿರ್ದೇಶನಗಳನ್ನು ಬಹಿರಂಗಪಡಿಸಲಾಗಿದೆ.

ಗ್ರ್ಯಾಮಿ ಪ್ರಶಸ್ತಿ ನಾಮನಿರ್ದೇಶನ: ಇತಿಹಾಸ ಬರೆದರು ಅಮೆರಿಕದ ಜನಪ್ರಿಯ ಗಾಯಕಿ ಬಿಯಾನ್ಸ್​
ಅಮೆರಿಕದ ಗಾಯಕಿ ಬಿಯಾನ್ಸ್
shruti hegde
| Edited By: |

Updated on: Nov 25, 2020 | 3:48 PM

Share

ಅಮೆರಿಕದ ರೆಕಾರ್ಡಿಂಗ್ ಅಕಾಡೆಮಿ ಮತ್ತು ಸಿಬಿಎಸ್ 63 ನೇ ವಾರ್ಷಿಕ ಗ್ರ್ಯಾಮಿ ಪ್ರಶಸ್ತಿಗಳಿಗೆ ನಾಮನಿರ್ದೇಶನ ಪಟ್ಟಿಯನ್ನು ಪ್ರಕಟಿಸಿದೆ. ಮಂಗಳವಾರ ನೇರ ಪ್ರಸಾರದಲ್ಲಿ ನಾಮ ನಿರ್ದೇಶನಗಳನ್ನು ಬಹಿರಂಗಪಡಿಸಲಾಗಿದೆ. ಅಮೇರಿಕದ ಗಾಯಕಿ ಬಿಯಾನ್ಸ್ ಒಂಬತ್ತು ನಾಮ ನಿರ್ದೇಶನಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಹಾಡುಗಾರರಾದ ಟೈಲರ್ ಸ್ವಿಫ್ಟ್ , ರೊಡ್ಡಿ ರಿಚ್ ಮತ್ತು ದುವಾ ಲಿಪಾ ತಲಾ ಆರು ನಾಮ ನಿರ್ದೇಶನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

24 ಗ್ರ್ಯಾಮಿಗಳ ವಿಜೇತೆ ಬಿಯಾನ್ಸ್ ಒಟ್ಟು 79 ನಾಮ ನಿರ್ದೇಶನಗಳೊಂದಿಗೆ ಪ್ರಶಸ್ತಿಯ ಇತಿಹಾಸದಲ್ಲಿ ಎರಡನೇ ಅತಿ ಹೆಚ್ಚು ನಾಮನಿರ್ದೇಶಿತರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಬಿಯಾನ್ಸ್ ಬಿಡುಗಡೆ ಮಾಡಿದ ‘ಬ್ಲ್ಯಾಕ್ ಪೆರೇಡ್’ ಹಾಡು, ಆಫ್ರಿಕನ್ ಅಮೆರಿಕನ್ನರು ತಾವು ಸ್ವತಂತ್ರರು ಎಂದು ತಿಳಿದಾಗ ನೆನಪಿಸಿಕೊಳ್ಳುವ ಹಾಡಾಗಿದ್ದು ಅತ್ಯುತ್ತಮ ಪ್ರದರ್ಶನಕ್ಕಾಗಿ ನಾಮನಿರ್ದೇಶನಗೊಂಡಿದೆ.

ಗ್ರ್ಯಾಮಿ ಅವಾರ್ಡ್ಸ್​ನಲ್ಲಿ ಒಟ್ಟು 83 ವಿಭಾಗಗಳಿವೆ. ಎಲ್ಲಾ ವಿಭಾಗಗಳ ಪ್ರಶಸ್ತಿ ಪುರಸ್ಕೃತ ನಾಮನಿರ್ದೇಶನಗಳ ಪಟ್ಟಿ ಬಿಡುಗಡೆಗೊಂಡಿದೆ. ಪ್ರತಿಷ್ಠಿತ ಸಂಗೀತ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಜನವರಿ 31, 2021 ರಂದು ನೇರ ಪ್ರಸಾರ ಮಾಡಲಾಗುವುದು. ಸಮಾರಂಭವನ್ನು ಹಾಸ್ಯನಟ ಟ್ರೆವರ್ ನೋವಾ ನಡೆಸಿಕೊಡಲಿದ್ದಾರೆ.

ಏನಿದು ಗ್ರ್ಯಾಮಿ ಪ್ರಶಸ್ತಿ? ಅಮೇರಿಕನ್ ಮ್ಯೂಸಿಕ್ ಅವಾರ್ಡ್ಸ್ ಮತ್ತು ಬಿಲ್ಬೋರ್ಡ್ ಮ್ಯೂಸಿಕ್ ಅವಾರ್ಡ್ಸ್ ಸೇರಿದಂತೆ ವಾರ್ಷಿಕವಾಗಿ ನಡೆಯುವ ಮೂರು ಪ್ರಮುಖ ಸಂಗೀತ ಪ್ರಶಸ್ತಿಗಳಲ್ಲಿ ಗ್ರ್ಯಾಮಿ ಪ್ರಶಸ್ತಿ ಸಮಾರಂಭವೂ ಒಂದು. ಸಂಗೀತ ಉದ್ಯಮದಲ್ಲಿನ ಸಾಧನೆಗಳನ್ನು ಗುರುತಿಸಲು, ದಿ ರೆಕಾರ್ಡಿಂಗ್ ಅಕಾಡೆಮಿ ನೀಡುವ ಪ್ರಶಸ್ತಿ ಇದಾಗಿದೆ. ವಾರ್ಷಿಕವಾಗಿ ಸಮಾರಂಭದಲ್ಲಿ ಪ್ರಮುಖ ಕಲಾವಿದರ ಪ್ರದರ್ಶನಗಳು ಮತ್ತು ಹೆಚ್ಚು ಜನಪ್ರಿಯ ಆಸಕ್ತಿಯನ್ನು ಹೊಂದಿರುವವರಿಗೆ ಈ ಪ್ರಶಸ್ತಿ ವಿತರಣೆ ಮಾಡಲಾಗುವುದು.

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ