AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Greece: ದೋಣಿ ಮುಳುಗಿ 79 ವಲಸಿಗರ ಸಾವು, ನೂರಾರು ಮಂದಿ ನಾಪತ್ತೆಯಾಗಿರುವ ಶಂಕೆ

ದಕ್ಷಿಣ ಗ್ರೀಸ್‌ನ ಕರಾವಳಿಯಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿ ಕನಿಷ್ಠ 79 ವಲಸಿಗರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನೂರಾರು ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

Greece: ದೋಣಿ ಮುಳುಗಿ 79 ವಲಸಿಗರ ಸಾವು, ನೂರಾರು ಮಂದಿ ನಾಪತ್ತೆಯಾಗಿರುವ ಶಂಕೆ
ದೋಣಿ
ನಯನಾ ರಾಜೀವ್
|

Updated on: Jun 15, 2023 | 7:40 AM

Share

ದಕ್ಷಿಣ ಗ್ರೀಸ್‌ನ ಕರಾವಳಿಯಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿ ಕನಿಷ್ಠ 79 ವಲಸಿಗರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನೂರಾರು ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿಗಳು ಬುಧವಾರ ಈ ಮಾಹಿತಿ ನೀಡಿದ್ದಾರೆ, ಘಟನಾ ಸ್ಥಳದಲ್ಲಿ ವ್ಯಾಪಕ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ದೇಶದ ದಕ್ಷಿಣ ಪೆಲೋಪೊನೀಸ್ ಪ್ರದೇಶದ ನೈಋತ್ಯಕ್ಕೆ 75 ಕಿಲೋಮೀಟರ್ ದೂರದಲ್ಲಿ ರಾತ್ರಿ ವೇಳೆ ಘಟನೆ ಸಂಭವಿಸಿದ ನಂತರ ಇದುವರೆಗೆ 104 ಜನರನ್ನು ರಕ್ಷಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ ಆದರೆ ಅಧಿಕೃತವಾಗಿ ಇನ್ನೂ ತಿಳಿದುಬಂದಿಲ್ಲ.

79 ಮೃತದೇಹಗಳನ್ನು ಸಮುದ್ರದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಗ್ರೀಕ್ ಕೋಸ್ಟ್ ಗಾರ್ಡ್ ತಿಳಿಸಿದೆ, ಆದರೆ ದೋಣಿಯಲ್ಲಿ ಎಷ್ಟು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ ಎಂಬುದನ್ನು ಇನ್ನೂ ಖಚಿತಪಡಿಸಲು ಸಾಧ್ಯವಿಲ್ಲ.

ಪ್ರಾಥಮಿಕ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ಆರು ಕೋಸ್ಟ್ ಗಾರ್ಡ್ ಹಡಗುಗಳು, ನೌಕಾಪಡೆಯ ಹಡಗು, ಆರ್ಮಿ ಸಾರಿಗೆ ವಿಮಾನ ಮತ್ತು ವಾಯುಪಡೆಯ ಹೆಲಿಕಾಪ್ಟರ್ ಮತ್ತು ಡ್ರೋನ್‌ಗಳು ಸಹಾಯ ಮಾಡುತ್ತಿವೆ.

ಮತ್ತಷ್ಟು ಓದಿ: Nigeria Boat Capsized: ಮದುವೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ದೋಣಿ ಮಗುಚಿ 103 ಮಂದಿ ಸಾವು

ಘಟನೆಯಲ್ಲಿ ರಕ್ಷಿಸಲ್ಪಟ್ಟ ಹತ್ತಾರು ವಲಸಿಗರನ್ನು ಆಂಬ್ಯುಲೆನ್ಸ್ ಸೇವೆಯಿಂದ ಸ್ಥಾಪಿಸಲಾದ ಶಿಬಿರಗಳಿಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಈವರೆಗೆ 79 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಕರಾವಳಿ ರಕ್ಷಣಾ ಪಡೆ ತಿಳಿಸಿದೆ.

ಬದುಕುಳಿದವರಲ್ಲಿ 30 ಈಜಿಪ್ಟಿನವರು, 10 ಪಾಕಿಸ್ತಾನಿಗಳು, 35 ಸಿರಿಯನ್ನರು ಮತ್ತು ಇಬ್ಬರು ಪ್ಯಾಲೆಸ್ಟೀನಿಯಾದವರು ಸೇರಿದ್ದಾರೆ ಎಂದು ಅದು ಹೇಳಿದೆ. ಇಟಲಿಗೆ ಹೊರಟಿದ್ದ ದೋಣಿ ಪೂರ್ವ ಲಿಬಿಯಾದ ಟೊಬ್ರುಕ್ ಪ್ರದೇಶದಿಂದ ಹೊರಟಿತ್ತು ಎನ್ನಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ