AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Greta Thunberg: ಆಹಾರ ಉತ್ಪಾದನೆ ಹಾಗೂ ಸ್ವೀಕರಿಸುವ ವಿಧಾನದಲ್ಲಿ ಬದಲಾವಣೆ ಅಗತ್ಯ: ಗ್ರೇಟಾ ಥನ್​ಬರ್ಗ್

ವಾತಾವರಣ, ಪರಿಸರ ಹಾಗೂ ಆರೋಗ್ಯ ಸಮಸ್ಯೆಗಳು ಒಂದಕ್ಕೆ ಒಂದು ಸಂಬಂಧ ಹೊಂದಿವೆ. ಕೊವಿಡ್-19, ಎಬೋಲಾ, ವೆಸ್ಟ್ ನೈಲ್ ಫಿವರ್, ಸಾರ್ಸ್, ಮರ್ಸ್, ಹೆಚ್​ಐವಿ-ಏಡ್ಸ್​ನಂತಹ ವೈರಾಣುವಿನಿಂದ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದಾರೆ.

Greta Thunberg: ಆಹಾರ ಉತ್ಪಾದನೆ ಹಾಗೂ ಸ್ವೀಕರಿಸುವ ವಿಧಾನದಲ್ಲಿ ಬದಲಾವಣೆ ಅಗತ್ಯ: ಗ್ರೇಟಾ ಥನ್​ಬರ್ಗ್
ಗ್ರೇಟಾ ಥನ್​ಬರ್ಗ್
TV9 Web
| Edited By: |

Updated on:Aug 21, 2021 | 9:59 AM

Share

ಸ್ವೀಡನ್: ಜಗತ್ತಿನಲ್ಲಿ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಿದೆ. ವಾತಾವರಣ, ಪರಿಸರ ತೊಂದರೆಗೆ ಒಳಗಾಗುತ್ತಿದೆ. ಆರೋಗ್ಯ ಸಮಸ್ಯೆಗಳು ತಲೆದೋರುತ್ತಿದೆ. ಹೀಗಾಗಿ ಆಹಾರ ಉತ್ಪಾದನೆ ಮತ್ತು ಸ್ವೀಕರಿಸುವ ವಿಧಾನದಲ್ಲಿ ಬದಲಾವಣೆ ಆಗಬೇಕು ಎಂದು ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್​ಬರ್ಗ್ ಶನಿವಾರ ತಿಳಿಸಿದ್ದಾರೆ.

ವಾತಾವರಣ, ಪರಿಸರ ಹಾಗೂ ಆರೋಗ್ಯ ಸಮಸ್ಯೆಗಳು ಒಂದಕ್ಕೆ ಒಂದು ಸಂಬಂಧ ಹೊಂದಿವೆ. ಕೊವಿಡ್-19, ಎಬೋಲಾ, ವೆಸ್ಟ್ ನೈಲ್ ಫಿವರ್, ಸಾರ್ಸ್, ಮರ್ಸ್, ಹೆಚ್​ಐವಿ-ಏಡ್ಸ್​ನಂತಹ ವೈರಾಣುವಿನಿಂದ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದಾರೆ ಎಂದು ಜೀವವೈವಿಧ್ಯ ದಿನದಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವಿಡಿಯೋ ಒಂದರಲ್ಲಿ ಥನ್​ಬರ್ಗ್ ಹೇಳಿದ್ದಾರೆ.

ನಾವು ಬೆಳೆ ಬೆಳೆಯುತ್ತಿರುವ ಕ್ರಮ, ಕಾಡು ಕಡಿದು, ಜೀವವಿಧಾನ ನಾಶ ಮಾಡುತ್ತಿರುವುದು ಇತ್ಯಾದಿಗಳಿಂದ ಪ್ರಾಣಿಗಳಿಂದ ಪ್ರಾಣಿಗೆ ಹಾಗೂ ಮನುಷ್ಯರಿಗೆ ರೋಗ ಹರಡಲು ಕಾರಣವಾಗುತ್ತಿದ್ದೇವೆ ಎಂದು 18 ವರ್ಷ ವಯಸ್ಸಿನ ಹೋರಾಟಗಾರ್ತಿ ಗ್ರೇಟಾ ಥನ್​ಬರ್ಗ್ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಕೊರೊನಾ ವೈರಾಣು ಕೂಡ ಪ್ರಾಣಿಯಿಂದ ಮಾನವರಿಗೆ ಹರಡಿರುವ ಸಾಧ್ಯತೆ ದಟ್ಟವಾಗಿದೆ. ಈಗಿರುವ ಕ್ರಮದಂತೆಯೇ ಮುಂದುವರಿದರೆ ಜೀವವೈವಿದ್ಯವನ್ನು ಹಾಳುಗೆಡಹುತ್ತಾ, ವಿವಿಧ ಸಸ್ಯ, ಪ್ರಾಣಿ ಸಂಕುಲ ನಾಶ ಮಾಡುತ್ತಾ ಹೋಗಲಿದ್ದೇವೆ ಎಂದು ಗ್ರೇಟಾ ಹೇಳಿದ್ದಾರೆ.

ಅವುಗಳೆಲ್ಲಾ ನಮ್ಮ ಜೀವನಕ್ಕೆ ಅಗತ್ಯವಾದ ವ್ಯವಸ್ಥೆಯಾಗಿದೆ. ನಾವು ಅವುಗಳನ್ನು ಕಳೆದುಕೊಂಡರೆ ನಮ್ಮನ್ನು ನಾವು ಕೂಡ ಕಳೆದುಕೊಳ್ಳಲಿದ್ದೇವೆ ಎಂದು ತಿಳಿಸಿದ್ಧಾರೆ. ವಾತಾವರಣದ ಬಗ್ಗೆಯೂ ಮಾತನಾಡಿ, ಅನಿಲ ಸೂಸುವಿಕೆ ಪ್ರಮಾಣ ಕಡಿಮೆ ಮಾಡುವಂತೆಯೂ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: Covid-19: ಕೊರೊನಾ ಸೋಂಕು ಗಂಭೀರ ಹಂತಕ್ಕೆ ಹೋಗದಂತೆ ತಡೆಯಲು ಈ ಸೂಚನೆಗಳನ್ನು ಪಾಲಿಸಿ

Karnataka Covid Update: ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ; ಕರ್ನಾಟಕದಲ್ಲಿ ಇಂದು 25,979 ಜನರಿಗೆ ಸೋಂಕು

Published On - 8:20 pm, Sun, 23 May 21

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?