AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Greta Thunberg: ಆಹಾರ ಉತ್ಪಾದನೆ ಹಾಗೂ ಸ್ವೀಕರಿಸುವ ವಿಧಾನದಲ್ಲಿ ಬದಲಾವಣೆ ಅಗತ್ಯ: ಗ್ರೇಟಾ ಥನ್​ಬರ್ಗ್

ವಾತಾವರಣ, ಪರಿಸರ ಹಾಗೂ ಆರೋಗ್ಯ ಸಮಸ್ಯೆಗಳು ಒಂದಕ್ಕೆ ಒಂದು ಸಂಬಂಧ ಹೊಂದಿವೆ. ಕೊವಿಡ್-19, ಎಬೋಲಾ, ವೆಸ್ಟ್ ನೈಲ್ ಫಿವರ್, ಸಾರ್ಸ್, ಮರ್ಸ್, ಹೆಚ್​ಐವಿ-ಏಡ್ಸ್​ನಂತಹ ವೈರಾಣುವಿನಿಂದ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದಾರೆ.

Greta Thunberg: ಆಹಾರ ಉತ್ಪಾದನೆ ಹಾಗೂ ಸ್ವೀಕರಿಸುವ ವಿಧಾನದಲ್ಲಿ ಬದಲಾವಣೆ ಅಗತ್ಯ: ಗ್ರೇಟಾ ಥನ್​ಬರ್ಗ್
ಗ್ರೇಟಾ ಥನ್​ಬರ್ಗ್
TV9 Web
| Edited By: |

Updated on:Aug 21, 2021 | 9:59 AM

Share

ಸ್ವೀಡನ್: ಜಗತ್ತಿನಲ್ಲಿ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಿದೆ. ವಾತಾವರಣ, ಪರಿಸರ ತೊಂದರೆಗೆ ಒಳಗಾಗುತ್ತಿದೆ. ಆರೋಗ್ಯ ಸಮಸ್ಯೆಗಳು ತಲೆದೋರುತ್ತಿದೆ. ಹೀಗಾಗಿ ಆಹಾರ ಉತ್ಪಾದನೆ ಮತ್ತು ಸ್ವೀಕರಿಸುವ ವಿಧಾನದಲ್ಲಿ ಬದಲಾವಣೆ ಆಗಬೇಕು ಎಂದು ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್​ಬರ್ಗ್ ಶನಿವಾರ ತಿಳಿಸಿದ್ದಾರೆ.

ವಾತಾವರಣ, ಪರಿಸರ ಹಾಗೂ ಆರೋಗ್ಯ ಸಮಸ್ಯೆಗಳು ಒಂದಕ್ಕೆ ಒಂದು ಸಂಬಂಧ ಹೊಂದಿವೆ. ಕೊವಿಡ್-19, ಎಬೋಲಾ, ವೆಸ್ಟ್ ನೈಲ್ ಫಿವರ್, ಸಾರ್ಸ್, ಮರ್ಸ್, ಹೆಚ್​ಐವಿ-ಏಡ್ಸ್​ನಂತಹ ವೈರಾಣುವಿನಿಂದ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದಾರೆ ಎಂದು ಜೀವವೈವಿಧ್ಯ ದಿನದಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವಿಡಿಯೋ ಒಂದರಲ್ಲಿ ಥನ್​ಬರ್ಗ್ ಹೇಳಿದ್ದಾರೆ.

ನಾವು ಬೆಳೆ ಬೆಳೆಯುತ್ತಿರುವ ಕ್ರಮ, ಕಾಡು ಕಡಿದು, ಜೀವವಿಧಾನ ನಾಶ ಮಾಡುತ್ತಿರುವುದು ಇತ್ಯಾದಿಗಳಿಂದ ಪ್ರಾಣಿಗಳಿಂದ ಪ್ರಾಣಿಗೆ ಹಾಗೂ ಮನುಷ್ಯರಿಗೆ ರೋಗ ಹರಡಲು ಕಾರಣವಾಗುತ್ತಿದ್ದೇವೆ ಎಂದು 18 ವರ್ಷ ವಯಸ್ಸಿನ ಹೋರಾಟಗಾರ್ತಿ ಗ್ರೇಟಾ ಥನ್​ಬರ್ಗ್ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಕೊರೊನಾ ವೈರಾಣು ಕೂಡ ಪ್ರಾಣಿಯಿಂದ ಮಾನವರಿಗೆ ಹರಡಿರುವ ಸಾಧ್ಯತೆ ದಟ್ಟವಾಗಿದೆ. ಈಗಿರುವ ಕ್ರಮದಂತೆಯೇ ಮುಂದುವರಿದರೆ ಜೀವವೈವಿದ್ಯವನ್ನು ಹಾಳುಗೆಡಹುತ್ತಾ, ವಿವಿಧ ಸಸ್ಯ, ಪ್ರಾಣಿ ಸಂಕುಲ ನಾಶ ಮಾಡುತ್ತಾ ಹೋಗಲಿದ್ದೇವೆ ಎಂದು ಗ್ರೇಟಾ ಹೇಳಿದ್ದಾರೆ.

ಅವುಗಳೆಲ್ಲಾ ನಮ್ಮ ಜೀವನಕ್ಕೆ ಅಗತ್ಯವಾದ ವ್ಯವಸ್ಥೆಯಾಗಿದೆ. ನಾವು ಅವುಗಳನ್ನು ಕಳೆದುಕೊಂಡರೆ ನಮ್ಮನ್ನು ನಾವು ಕೂಡ ಕಳೆದುಕೊಳ್ಳಲಿದ್ದೇವೆ ಎಂದು ತಿಳಿಸಿದ್ಧಾರೆ. ವಾತಾವರಣದ ಬಗ್ಗೆಯೂ ಮಾತನಾಡಿ, ಅನಿಲ ಸೂಸುವಿಕೆ ಪ್ರಮಾಣ ಕಡಿಮೆ ಮಾಡುವಂತೆಯೂ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: Covid-19: ಕೊರೊನಾ ಸೋಂಕು ಗಂಭೀರ ಹಂತಕ್ಕೆ ಹೋಗದಂತೆ ತಡೆಯಲು ಈ ಸೂಚನೆಗಳನ್ನು ಪಾಲಿಸಿ

Karnataka Covid Update: ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ; ಕರ್ನಾಟಕದಲ್ಲಿ ಇಂದು 25,979 ಜನರಿಗೆ ಸೋಂಕು

Published On - 8:20 pm, Sun, 23 May 21

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ