AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Greta Thunberg: ಆಹಾರ ಉತ್ಪಾದನೆ ಹಾಗೂ ಸ್ವೀಕರಿಸುವ ವಿಧಾನದಲ್ಲಿ ಬದಲಾವಣೆ ಅಗತ್ಯ: ಗ್ರೇಟಾ ಥನ್​ಬರ್ಗ್

ವಾತಾವರಣ, ಪರಿಸರ ಹಾಗೂ ಆರೋಗ್ಯ ಸಮಸ್ಯೆಗಳು ಒಂದಕ್ಕೆ ಒಂದು ಸಂಬಂಧ ಹೊಂದಿವೆ. ಕೊವಿಡ್-19, ಎಬೋಲಾ, ವೆಸ್ಟ್ ನೈಲ್ ಫಿವರ್, ಸಾರ್ಸ್, ಮರ್ಸ್, ಹೆಚ್​ಐವಿ-ಏಡ್ಸ್​ನಂತಹ ವೈರಾಣುವಿನಿಂದ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದಾರೆ.

Greta Thunberg: ಆಹಾರ ಉತ್ಪಾದನೆ ಹಾಗೂ ಸ್ವೀಕರಿಸುವ ವಿಧಾನದಲ್ಲಿ ಬದಲಾವಣೆ ಅಗತ್ಯ: ಗ್ರೇಟಾ ಥನ್​ಬರ್ಗ್
ಗ್ರೇಟಾ ಥನ್​ಬರ್ಗ್
TV9 Web
| Edited By: |

Updated on:Aug 21, 2021 | 9:59 AM

Share

ಸ್ವೀಡನ್: ಜಗತ್ತಿನಲ್ಲಿ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಿದೆ. ವಾತಾವರಣ, ಪರಿಸರ ತೊಂದರೆಗೆ ಒಳಗಾಗುತ್ತಿದೆ. ಆರೋಗ್ಯ ಸಮಸ್ಯೆಗಳು ತಲೆದೋರುತ್ತಿದೆ. ಹೀಗಾಗಿ ಆಹಾರ ಉತ್ಪಾದನೆ ಮತ್ತು ಸ್ವೀಕರಿಸುವ ವಿಧಾನದಲ್ಲಿ ಬದಲಾವಣೆ ಆಗಬೇಕು ಎಂದು ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್​ಬರ್ಗ್ ಶನಿವಾರ ತಿಳಿಸಿದ್ದಾರೆ.

ವಾತಾವರಣ, ಪರಿಸರ ಹಾಗೂ ಆರೋಗ್ಯ ಸಮಸ್ಯೆಗಳು ಒಂದಕ್ಕೆ ಒಂದು ಸಂಬಂಧ ಹೊಂದಿವೆ. ಕೊವಿಡ್-19, ಎಬೋಲಾ, ವೆಸ್ಟ್ ನೈಲ್ ಫಿವರ್, ಸಾರ್ಸ್, ಮರ್ಸ್, ಹೆಚ್​ಐವಿ-ಏಡ್ಸ್​ನಂತಹ ವೈರಾಣುವಿನಿಂದ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದಾರೆ ಎಂದು ಜೀವವೈವಿಧ್ಯ ದಿನದಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವಿಡಿಯೋ ಒಂದರಲ್ಲಿ ಥನ್​ಬರ್ಗ್ ಹೇಳಿದ್ದಾರೆ.

ನಾವು ಬೆಳೆ ಬೆಳೆಯುತ್ತಿರುವ ಕ್ರಮ, ಕಾಡು ಕಡಿದು, ಜೀವವಿಧಾನ ನಾಶ ಮಾಡುತ್ತಿರುವುದು ಇತ್ಯಾದಿಗಳಿಂದ ಪ್ರಾಣಿಗಳಿಂದ ಪ್ರಾಣಿಗೆ ಹಾಗೂ ಮನುಷ್ಯರಿಗೆ ರೋಗ ಹರಡಲು ಕಾರಣವಾಗುತ್ತಿದ್ದೇವೆ ಎಂದು 18 ವರ್ಷ ವಯಸ್ಸಿನ ಹೋರಾಟಗಾರ್ತಿ ಗ್ರೇಟಾ ಥನ್​ಬರ್ಗ್ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಕೊರೊನಾ ವೈರಾಣು ಕೂಡ ಪ್ರಾಣಿಯಿಂದ ಮಾನವರಿಗೆ ಹರಡಿರುವ ಸಾಧ್ಯತೆ ದಟ್ಟವಾಗಿದೆ. ಈಗಿರುವ ಕ್ರಮದಂತೆಯೇ ಮುಂದುವರಿದರೆ ಜೀವವೈವಿದ್ಯವನ್ನು ಹಾಳುಗೆಡಹುತ್ತಾ, ವಿವಿಧ ಸಸ್ಯ, ಪ್ರಾಣಿ ಸಂಕುಲ ನಾಶ ಮಾಡುತ್ತಾ ಹೋಗಲಿದ್ದೇವೆ ಎಂದು ಗ್ರೇಟಾ ಹೇಳಿದ್ದಾರೆ.

ಅವುಗಳೆಲ್ಲಾ ನಮ್ಮ ಜೀವನಕ್ಕೆ ಅಗತ್ಯವಾದ ವ್ಯವಸ್ಥೆಯಾಗಿದೆ. ನಾವು ಅವುಗಳನ್ನು ಕಳೆದುಕೊಂಡರೆ ನಮ್ಮನ್ನು ನಾವು ಕೂಡ ಕಳೆದುಕೊಳ್ಳಲಿದ್ದೇವೆ ಎಂದು ತಿಳಿಸಿದ್ಧಾರೆ. ವಾತಾವರಣದ ಬಗ್ಗೆಯೂ ಮಾತನಾಡಿ, ಅನಿಲ ಸೂಸುವಿಕೆ ಪ್ರಮಾಣ ಕಡಿಮೆ ಮಾಡುವಂತೆಯೂ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: Covid-19: ಕೊರೊನಾ ಸೋಂಕು ಗಂಭೀರ ಹಂತಕ್ಕೆ ಹೋಗದಂತೆ ತಡೆಯಲು ಈ ಸೂಚನೆಗಳನ್ನು ಪಾಲಿಸಿ

Karnataka Covid Update: ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ; ಕರ್ನಾಟಕದಲ್ಲಿ ಇಂದು 25,979 ಜನರಿಗೆ ಸೋಂಕು

Published On - 8:20 pm, Sun, 23 May 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು