AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ಶಾಲೆಯಲ್ಲಿ ಗುಂಡಿನ ದಾಳಿ: ಸಾವಿನ ಸಂಖ್ಯೆ 13ಕ್ಕೆ ಏರಿಕೆ; ಹಂತಕ ಆತ್ಮಹತ್ಯೆ

ಗುಂಡು ಹಾರಿಸಿದ ವ್ಯಕ್ತಿಯ ದೇಹವು ಇದೀಗ ಪೊಲೀಸರಿಗೆ ಪತ್ತೆಯಾಗಿದೆ. ವರದಿಗಳ ಪ್ರಕಾರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಂಡಿನ ದಾಳಿಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಮಂದಿ ಗಾಯಗೊಂಡಿದ್ದಾರೆ

ರಷ್ಯಾದ ಶಾಲೆಯಲ್ಲಿ ಗುಂಡಿನ ದಾಳಿ: ಸಾವಿನ ಸಂಖ್ಯೆ 13ಕ್ಕೆ ಏರಿಕೆ; ಹಂತಕ ಆತ್ಮಹತ್ಯೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 26, 2022 | 3:27 PM

Share

ಮಾಸ್ಕೋ: ಮಧ್ಯ ರಷ್ಯಾದ (Russia) ಇಝೆವ್ಸ್ಕ್(Izhevsk) ನಗರದ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 7ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ತನಿಖಾಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.ಶಿಕ್ಷಣ ಸಂಸ್ಥೆಯ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಶಿಕ್ಷಕರು ಮತ್ತು ಐವರು ಅಪ್ರಾಪ್ತರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತನಿಖಾ ಸಮಿತಿಯು ಟೆಲಿಗ್ರಾಮ್‌ನಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.  ದಾಳಿಕೋರರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ. ತನಿಖಾಧಿಕಾರಿಗಳ ಪ್ರಕಾರ ದಾಳಿಕೋರ ನಾಜಿ ಚಿಹ್ನೆ ಮತ್ತು ಬಾಲಾಕ್ಲಾವಾ ಹೊಂದಿರುವ ಕಪ್ಪು ಟಾಪ್  ಧರಿಸಿದ್ದನು. ಯಾವುದೇ ಗುರುತಿನ ಚೀಟಿಯನ್ನು ಹೊಂದಿರಲಿಲ್ಲ. ಅವನ ಗುರುತನ್ನು ಪತ್ತೆ  ಹಚ್ಚಲಾಗುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ದಾಳಿಯಲ್ಲಿ ಸುಮಾರು 20 ಜನರು ಗಾಯಗೊಂಡಿದ್ದಾರೆ ಎಂದು ರಷ್ಯಾದ ಆಂತರಿಕ ಸಚಿವಾಲಯ ತಿಳಿಸಿದೆ.

ಪ್ರದೇಶದ ಗವರ್ನರ್ ಅಲೆಕ್ಸಾಂಡರ್ ಅಲೆಕ್ಸಾಂಡರ್ ಬ್ರೆಚಲೋವ್  ಶಾಲೆ No88 ಹೊರಗೆ ವಿಡಿಯೊ ಹೇಳಿಕೆ ನೀಡಿದ್ದು ಗಾಯಗೊಂಡವರಲ್ಲಿ ಮಕ್ಕಳೂ ಇದ್ದಾರೆ ಎಂದು ದೃಢಪಡಿಸಿದರು.ರಕ್ಷಣಾ ಕಾರ್ಯಕರ್ಚರು  ಮತ್ತು ವೈದ್ಯಕೀಯ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದ್ದು, ಮಕ್ಕಳನ್ನು ಶಾಲೆಯಿಂದ ಹೊರಗೆ ಕರೆದೊಯ್ಯುವ ಕೆಲಸ ಮಾಡುತ್ತಿದ್ದಾರೆ.

ಸುಮಾರು 630,000 ಜನರಿರುವ ನಗರ, ಇಝೆವ್ಸ್ಕ್ ರಷ್ಯಾದ ಉಡ್ಮುರ್ಟ್ ಗಣರಾಜ್ಯದ ಪ್ರಾದೇಶಿಕ ರಾಜಧಾನಿಯಾಗಿದೆ, ಇದು ಮಾಸ್ಕೋದಿಂದ ಪೂರ್ವಕ್ಕೆ 1,000 ಕಿಲೋಮೀಟರ್ (620 ಮೈಲುಗಳು) ದೂರದಲ್ಲಿದೆ.

Published On - 2:30 pm, Mon, 26 September 22

Follow Us
ಗಣೇಶೋತ್ಸವ ವಿವಾದ: ಟಿ. ನರಸೀಪುರದಲ್ಲಿ ಭಾರಿ ಹೈಡ್ರಾಮಾ
ಗಣೇಶೋತ್ಸವ ವಿವಾದ: ಟಿ. ನರಸೀಪುರದಲ್ಲಿ ಭಾರಿ ಹೈಡ್ರಾಮಾ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ